ಒಡಿಶಾ ವಿಧಾನಸಭೆಯೊಳಗೆ ಸ್ಯಾನಿಟೈಸರ್ ಕುಡಿದು ಆತ್ಮತ್ಯೆಗೆ ಯತ್ನಿಸಿದ ಬಿಜೆಪಿ ಶಾಸಕ
ಭತ್ತದ ಸಂಗ್ರಹಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಕ್ರಮವನ್ನು ಸರ್ಕಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದರು.
Team Udayavani, Mar 13, 2021, 5:38 PM IST
ಭುವನೇಶ್ವರ್: ಭಾರತೀಯ ಜನತಾ ಪಕ್ಷದ ದಿಯೋಗಢ್ ಶಾಸಕ ಸುಭಾಶ್ ಪನಿಗ್ರಾಹಿ ಅವರು ಒಡಿಶಾ ವಿಧಾನಸಭೆಯ ಬಜೆಟ್ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿಯೇ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಇದನ್ನೂ ಓದಿ:ನಾವು ‘ಐಟಂ ಗರ್ಲ್’ ಅಲ್ಲ, ಐಟಂ ಪದದ ಅರ್ಥ ಏನು ? ನಟಿ ಎಲಿ ಅವ್ರಾಮ್
ಶುಕ್ರವಾರ(ಮಾರ್ಚ್ 12)ಒಡಿಶಾ ವಿಧಾನಸಭೆ ಬಜೆಟ್ ಅಧಿವೇಶನದ ಆರಂಭವಾದ ಸಂದರ್ಭದಲ್ಲಿ ವಿರೋಧ ಪಕ್ಷವಾದ ಬಿಜೆಪಿ ಹಾಗೂ ಕಾಂಗ್ರೆಸ್ ಮಂಡಿಗಳಲ್ಲಿ ಭತ್ತದ ಸಂಗ್ರಹದ ವಿಚಾರಕ್ಕೆ ಸಂಬಂಧಿಸಿದಂತೆ ಕಲಾಪದಲ್ಲಿ ಗದ್ದಲ, ಕೋಲಾಹಲ ನಡೆಸಿದ್ದವು.
ಶುಕ್ರವಾರ ಮಧ್ಯಾಹ್ನ ಬಜೆಟ್ ಅಧಿವೇಶನದಲ್ಲಿ ಆಹಾರ ಸರಬರಾಜು, ಗ್ರಾಹಕ ಕಲ್ಯಾಣ ಸಚಿವ ರಾಣೇಂದ್ರ ಪ್ರತಾಪ್ ಸೈನ್ ಅವರು ರಾಜ್ಯದಲ್ಲಿ ಭತ್ತದ ಸಂಗ್ರಹದ ಕುರಿತ ಪ್ರಶ್ನೆಗೆ ಉತ್ತರ ನೀಡುವ ವೇಳೆ ಶಾಸಕ ಪನಿಗ್ರಾಹಿ ಸದನದೊಳಗೆ ಸ್ಯಾನಿಟೈಸರ್ ಕುಡಿಯಲು ಯತ್ನಿಸಿರುವ ಘಟನೆ ನಡೆದಿತ್ತು ಎಂದು ವರದಿ ತಿಳಿಸಿದೆ.
ಖರೀದಿ ಪ್ರಕ್ರಿಯೆಯನ್ನು ಸುಗಮಗೊಳಿಸುವಂತೆ ಒತ್ತಾಯಿಸಿ ಶಾಸಕ ಸುಭಾಸ್ ಚಂದ್ರ ಪನಿಗ್ರಾಹಿ ಅವರು ಈ ಹಿಂದೆ ಸ್ವಯಂ ಬೆಂಕಿ ಹಚ್ಚಿಕೊಳ್ಳುವುದಾಗಿ ಎರಡು ಬಾರಿ ಬೆದರಿಕೆಯೊಡ್ಡಿದ್ದರು.
ಬಿಜೆಪಿ ಶಾಸಕ ಅಧಿವೇಶನದಲ್ಲಿ ಆತ್ಮಹತ್ಯೆಗೆ ಯತ್ನಿಸುವ ಮುನ್ನ, ಆಹಾರ ಸರಬರಾಜು ಮತ್ತು ಗ್ರಾಹಕ ಕಲ್ಯಾಣ ಸಚಿವ ರಾಣೇಂದ್ರ ಪ್ರತಾಪ್ ಸ್ವೈನ್ ಮಾತನಾಡಿ, ಖಾರೀಫ್ ಭತ್ತದ ಸಂಗ್ರಹಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಕ್ರಮವನ್ನು ಸರ್ಕಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದರು.
ಒಂದು ವೇಳೆ ಮಂಡಿಯಲ್ಲಿ ಯಾವುದೇ ರೈತರು ತಮ್ಮ ಭತ್ತವನ್ನು ಮಾರಾಟ ಮಾಡಲು ಸಾಧ್ಯವಾಗದವರು ಇದ್ದರೆ ಅಂತಹವರ ಪಟ್ಟಿ ನೀಡುವಂತೆ ಶಾಸಕ ಪನಿಗ್ರಾಹಿಗೆ ಸಚಿವರು ಮನವಿ ಮಾಡಿಕೊಂಡಿದ್ದರು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ