ಪೊಲೀಸರಿಂದ ಥಳಿತ: ಬಿಜೆಪಿ ಶಾಸಕ ಆಸ್ಪತ್ರೆಗೆ ದಾಖಲು
Team Udayavani, Jun 20, 2019, 11:11 AM IST
ಹೈದ್ರಾಬಾದ್: ಪೊಲೀಸರಿಂದ ಥಳಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿರುವ ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ಬುಧವಾರ ತಡ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರ್ತಿ ರಾಣಿ ಅವಂತಿ ಬಾಯಿ ಲೋಧ್ ಅವರ ಪ್ರತಿಮೆ ಪುನರ್ ಸ್ಥಾಪನೆಗಾಗಿ ಬೆಂಬಲಿಗರೊಂದಿಗೆ ತೆರಳಿದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.
ಜುಮೀರತ್ ಬಜಾರ್ನಲ್ಲಿ 2009 ರಲ್ಲಿ ಮೂರ್ತಿ ಸ್ಥಾಪಿಸಲಾಗಿತ್ತು, ಆದರೆ 2 ಬಾರಿ ಹಾನಿಯಾದ ಹಿನ್ನಲೆಯಲ್ಲಿ ತೆರವುಗೊಳಿಸಲಾಗಿತ್ತು.
ರಾಜಾ ಸಿಂಗ್ ಅವರು ಪ್ರತಿಮೆಯನ್ನು ಪುನರ್ ಸ್ಥಾಪಿಸಲು ತೆರಳಿದಾಗ ವಾಗ್ವಾದ ನಡೆದಿದ್ದು, ಈ ವೇಳೆ ಪೊಲೀಸರು ಲಾಠಿಯಿಂದ ಥಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಇಬ್ಬರು ಎಸಿಪಿಗಳು ಮತ್ತು ಇಬ್ಬರು ಎಸ್ಐಗಳು ರಾಜಾ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬೆಂಬಲಿಗರೊಬ್ಬರು ಹೇಳಿದ್ದಾರೆ.
ತಲೆ ಭಾಗದಲ್ಲಿ ಗಂಭೀರ ಗಾಯವಾದ ಹಿನ್ನಲೆಯಲ್ಲಿ ರಾಜಾ ಸಿಂಗ್ ಅವರನ್ನು ಓಸ್ಮಾನಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
ರಾಜಾ ಸಿಂಗ್ ಅವರ ತಲೆಯ ಭಾಗಕ್ಕೆ ಗಾಯವಾಗಿರುವ ಕುರಿತು ಆಸ್ಪತ್ರೆಯ ಮೂಲಗಳು ಧೃಡಪಡಿಸಿವೆ.
ಗುರುವಾರ ಬೆಳಗ್ಗೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಗೋಶಮಹಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ