ಕೋವಿಡ್ ನಿಯಂತ್ರಣಕ್ಕೆ ಗೋಮೂತ್ರವೇ ರಾಮಬಾಣ ಎಂದ ಬಿಜೆಪಿ ಶಾಸಕ: ವಿಡಿಯೋ ವೈರಲ್
Team Udayavani, May 8, 2021, 8:56 AM IST
ಲಕ್ನೋ: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ದೇಶಾದ್ಯಂತ ಲಸಿಕೆ ನೀಡುವ ಕಾರ್ಯವೂ ಜಾರಿಯಲ್ಲಿದೆ. ಈ ನಡುವೆ ಉತ್ತರ ಪ್ರದೇಶದ ಬಿಜೆಪಿ ಶಾಸಕನೋರ್ವ ಕೋವಿಡ್ ಸೋಂಕು ನಿಯಂತ್ರಣಕ್ಕೆ ಗೋ ಮೂತ್ರವೇ ರಾಮಬಾಣ ಎಂದು ಹೇಳಿದ್ದು, ಜನರೆದುರೇ ಗೋ ಮೂತ್ರ ಕುಡಿದಿದ್ದು, ವಿಡಿಯೋ ವೈರಲ್ ಆಗಿದೆ.
ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯ ಬೈರಿಯಾ ಕ್ಷೇತ್ರದ ಶಾಸಕ ಸುರೇಂದ್ರ ಸಿಂಗ್ ಈ ಸಲಹೆ ನೀಡಿದವರರು. ಇವರ ವಿಡಿಯೋ ಇದೀಗ ವೈರಲ್ ಆಗುತ್ತಿದೆ.
ಇದನ್ನೂ ಓದಿ:ಚೀನಾದ ಸಿನೋಫಾರ್ಮ್ ಲಸಿಕೆಗೆ ತುರ್ತು ಬಳಕೆಗೆ ಅನುಮತಿ ನೀಡಿದ ಆರೋಗ್ಯ ಸಂಸ್ಥೆ
ಗೋ ಮೂತ್ರವನ್ನು ಹೇಗೆ ಕುಡಿಯಬೇಕೆಂದು ಜನರಿಗೆ ತೋರಿಸಿರುವ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ತಾನೂ ಗೋ ಮೂತ್ರ ಕುಡಿದು ಆರೋಗ್ಯವಾಗಿದ್ದೇನೆ. ಜನರಿಗಾಗಿ 18 ಗಂಟೆಗಳ ಕಾಲ ಕೆಲಸ ಮಾಡಿದರೂ ನನ್ನ ಆರೋಗ್ಯದ ಗುಟ್ಟು ಗೋ ಮೂತ್ರ ಎಂದು ಸುರೇಂದ್ರ ಸಿಂಗ್ ಹೇಳಿದ್ದಾರೆ.
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಗೋಮೂತ್ರ ತೆಗೆದುಕೊಳ್ಳಬೇಕು. ಎರಡರಿಂದ ಮೂರು ಮುಚ್ಚಳ ಗೋಮೂತ್ರ ತೆಗೆದುಕೊಂಡು ಅದನ್ನು ಒಂದು ಗ್ಲಾಸ್ ನೀರಿನಲ್ಲಿ ಬೆರೆಸಿ ಕುಡಿಯಬೇಕೆಂದು ಬಿಜೆಪಿ ಶಾಸಕ ಸಿಂಗ್ ವಿಡಿಯೋದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ