ಓಂ ಬಿರ್ಲಾ ಲೋಕ ಸ್ಪೀಕರ್‌

ಮೋದಿ-ಶಾರಿಂದ ಅಚ್ಚರಿಯ ಆಯ್ಕೆ

Team Udayavani, Jun 19, 2019, 6:00 AM IST

v-33

ನವದೆಹಲಿ: ಅಚ್ಚರಿಯ ಬೆಳವಣಿಗೆಯಲ್ಲಿ ರಾಜಸ್ಥಾನದ ಕೋಟಾ-ಬುಂಡಿ ಕ್ಷೇತ್ರದ ಬಿಜೆಪಿ ಸಂಸದ ಓಂ ಬಿರ್ಲಾ ಅವರು ಹೆಚ್ಚು ಕಡಿಮೆ 17ನೇ ಲೋಕಸಭೆಯ ಸ್ಪೀಕರ್‌ ಆಗುವುದು ಖಚಿತವಾಗಿದೆ.

ಬುಧವಾರ ನಡೆಯಲಿರುವ ಸ್ಪೀಕರ್‌ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿ ಸಲು ಎನ್‌ಡಿಎ ನಿರ್ಧಾರ ಕೈಗೊಂಡಿದೆ. ವಿಪಕ್ಷಗಳೂ ಇವರ ಆಯ್ಕೆಗೆ ಸಹಮತ ವ್ಯಕ್ತಪಡಿಸಿರುವುದರಿಂದ ಅವಿರೋಧವಾಗಿ ಆಯ್ಕೆಯಾಗುವ ಸಂಭವವಿದೆ.

ಬಿರ್ಲಾ ಆಯ್ಕೆಯಲ್ಲೂ ಪ್ರಧಾನಿ ಮೋದಿ-ಅಮಿತ್‌ ಶಾ ಜೋಡಿ ‘ರಹಸ್ಯ’ ಕಾಯ್ದುಕೊಳ್ಳುವ ಮೂಲಕ, ಪ್ರಮುಖ ರಾಜಕೀಯ ನೇಮಕಗಳಲ್ಲಿ ಗೋಪ್ಯತೆ ಕಾಯ್ದುಕೊಳ್ಳುವ ತಮ್ಮ ಚಾಣಾಕ್ಷತೆಯನ್ನು ಮುಂದುವರಿಸಿದ್ದಾರೆ.

56 ವರ್ಷದ ಬಿರ್ಲಾ ಅವರು ಎರಡನೇ ಬಾರಿಗೆ ಸಂಸದರಾಗಿದ್ದರೂ, ಇತರೆ ಎಲ್ಲ ಹಿರಿಯ ದಿಗ್ಗಜರನ್ನು ಬಿಟ್ಟು ಇವರನ್ನೇ ಬಿಜೆಪಿ ಆಯ್ಕೆ ಮಾಡಿಕೊಂಡಿರುವ ಹಿಂದೆ ಹಲವು ಕಾರಣಗಳೂ ಇವೆ ಎಂದು ವಿಶ್ಲೇಷಿಸಲಾಗಿದೆ. ಓಂ ಬಿರ್ಲಾ ಅವರು ರಾಜಸ್ಥಾನ ಅಸೆಂಬ್ಲಿಯಲ್ಲಿ 3 ಅವಧಿಗೆ ಸದಸ್ಯರಾಗಿದ್ದವರು. ಅಲ್ಲದೆ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಜತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ರಾಜ ಸ್ಥಾನ ಸರ್ಕಾರದಲ್ಲಿ ಸಂಸದೀಯ ಕಾರ್ಯ ದರ್ಶಿಯಾಗಿಯೂ ಅವರು ಕಾರ್ಯ ನಿರ್ವ ಹಿಸಿದ್ದಾರೆ. ಪ್ರಧಾನಿ ಮೋದಿ ಅವರು ಗುಜ ರಾತ್‌ನಲ್ಲಿ ಅಧಿಕಾರಕ್ಕೇರುವ ಮುಂಚೆಯೇ ಮೋದಿ ಹಾಗೂ ಅಮಿತ್‌ ಶಾ ಅವರೊಂದಿಗೆ ಬಿರ್ಲಾ ಕುಟುಂಬ ಒಡನಾಟ ಹೊಂದಿತ್ತು.

ಅಮಿತ್‌ ಶಾ ಆಪ್ತ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿ ರುವ ಬಿರ್ಲಾ, ಬಿಜೆಪಿಯ ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾ ಗಿಯೂ ಸೇವೆ ಸಲ್ಲಿಸಿ ದ್ದಾರೆ. ಅಲ್ಲದೆ, ದಿವ್ಯಾಂಗರು ಹಾಗೂ ಅಸ ಹಾಯಕ ಮಹಿಳೆಯರಿಗೆ ನೆರವಾಗುವ ಮೂಲಕ ಸಾಮಾಜಿಕ ಕಾರ್ಯಕರ್ತರಾಗಿಯೂ ಅವರು ಗುರುತಿಸಿಕೊಂಡಿದ್ದಾರೆ. 2001ರ ಜನವರಿಯಲ್ಲಿ ಗುಜರಾತ್‌ನಲ್ಲಿ ಭೂಕಂಪ ಸಂಭವಿಸಿದಾಗ, 100ಕ್ಕೂ ಹೆಚ್ಚು ಸ್ವಯಂ ಸೇವಾ ಸಿಬ್ಬಂದಿಯ ತಂಡವನ್ನು ಕಟ್ಟಿ, ಸಂತ್ರಸ್ತರ ನೆರವಿಗೆ ಧಾವಿಸಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕ್ಕಾಗಿ ನಡೆದ ಹೋರಾಟದ ವೇಳೆ ಸಕ್ರಿಯವಾಗಿ ಪಾಲ್ಗೊಂಡು, ಜೈಲು ವಾಸವನ್ನೂ ಅನುಭವಿಸಿ ದ್ದಾರೆ ಬಿರ್ಲಾ. ಬಿಜೆಪಿ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಜೆ.ಪಿ. ನಡ್ಡಾ ಅವರೊಂದಿಗೂ ಬಿರ್ಲಾ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅಲ್ಲದೆ, ಬಿರ್ಲಾ ಅವರ ಬಲಿಷ್ಠ ಬೂತ್‌ ನಿರ್ವಹಣೆ ಸಾಮರ್ಥ್ಯ, ಕ್ಷೇತ್ರದ ಮೇಲೆ ಹೇಗೆ ಹಿಡಿತ ಸಾಧಿಸಬೇಕು ಎಂಬ ಕೌಶಲ್ಯ ಕೂಡ ಅವರನ್ನು ಈ ಉನ್ನತ ಹುದ್ದೆಗೇರಿಸಿದೆ ಎಂದು ಹೇಳಲಾಗಿದೆ.

ಪಕ್ಷದೊಳಗಿನವರಿಗೂ ಗೊತ್ತಿರಲಿಲ್ಲ: ಬಿರ್ಲಾ ಅವರ ಆಯ್ಕೆ ಕುರಿತು ಮೋದಿ-ಅಮಿತ್‌ ಶಾ ಸೀಕ್ರೆಸಿ ಕಾಯ್ದುಕೊಂಡಿದ್ದರು. ಈ ವಿಚಾರ ಕೊನೇ ಕ್ಷಣದವರೆಗೂ ಪಕ್ಷದೊಳಗಿನ ಅನೇಕ ನಾಯಕರಿಗೆ ಗೊತ್ತೇ ಇರಲಿಲ್ಲ ಎಂದು ಹೇಳಲಾಗಿದೆ. ಈ ಹಿಂದೆ ರಾಷ್ಟ್ರಪತಿ ನೇಮಕದ ವೇಳೆಯೂ ರಾಮನಾಥ್‌ ಕೋವಿಂದ್‌ ಅವರ ಹೆಸರನ್ನು ಎನ್‌ಡಿಎ ಘೋಷಿಸುತ್ತಿದ್ದಂತೆ, ಎಲ್ಲರಲ್ಲೂ ಅಚ್ಚರಿ ಮನೆ ಮಾಡಿತ್ತು. ರಾಷ್ಟ್ರಪತಿ ಹುದ್ದೆಗೆ ಹಲವರ ಹೆಸರುಗಳನ್ನು ಕೇಳಿಬಂದಿತ್ತಾದರೂ, ಎನ್‌ಡಿಎ ಆಯ್ಕೆ ಯಾರು ಎಂಬುದು ಗೊತ್ತಾಗಿದ್ದು ಹೆಸರು ಘೋಷಣೆಯಾದ ಬಳಿಕವೇ. ಇದಿಷ್ಟೇ ಅಲ್ಲ, ಮಹಾರಾಷ್ಟ್ರದಲ್ಲಿ ಮರಾಠೇತರ ಸಿಎಂ, ಹರ್ಯಾ ಣದಲ್ಲಿ ಜಾಟ್ ಸಮುದಾಯದವರಲ್ಲದ ನಾಯಕ, ಉತ್ತರಪ್ರದೇಶದಲ್ಲಿ ಫೈರ್‌ ಬ್ರಾಂಡ್‌ ಯೋಗಿ ಆದಿತ್ಯನಾಥ್‌ರನ್ನು ಮುಖ್ಯಮಂತ್ರಿ ಯನ್ನಾಗಿ ಆಯ್ಕೆ ಮಾಡಿದ್ದನ್ನು ಕೂಡ ಮೋದಿ-ಶಾ ಮಾಸ್ಟರ್‌ಸ್ಟ್ರೋಕ್‌ ಎಂದು ಬಣ್ಣಿಸಲಾಗಿತ್ತು.

ಪ್ರತಿಪಕ್ಷಗಳ ಬೆಂಬಲ: ಲೋಕಸಭೆಯಲ್ಲಿ ಎನ್‌ಡಿಎ ಸ್ಪಷ್ಟ ಬಹುಮತ ಹೊಂದಿರುವುದರಿಂದ ಓಂ ಬಿರ್ಲಾ ಗೆಲುವು ಖಚಿತ. ಜತೆಗೆ ಬಿರ್ಲಾ ಅವರ ಆಯ್ಕೆಗೆ ಕಾಂಗ್ರೆಸ್‌ ಸೇರಿದಂತೆ ಬಹುತೇಕ ಎಲ್ಲ ಪ್ರತಿಪಕ್ಷಗಳೂ ಒಪ್ಪಿಗೆ ನೀಡಿವೆ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.