ತನಿಖಾಸಂಸ್ಥೆಗಳ ದುರುಪಯೋಗ ಆರೋಪ: ಪ್ರತ್ಯುತ್ತರಕ್ಕೆ ಬಿಜೆಪಿ ಸಜ್ಜು
9 ರಾಜ್ಯ; 9 ಸುದ್ದಿಗೋಷ್ಠಿ
Team Udayavani, Mar 10, 2023, 8:05 AM IST
ನವದೆಹಲಿ/ಹೈದರಾಬಾದ್: ಒಂಬತ್ತು ರಾಜ್ಯಗಳು ಮತ್ತು ಒಂಬತ್ತು ಪತ್ರಿಕಾಗೋಷ್ಠಿ… ತನಿಖಾಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ಬಿಜೆಪಿ ಸಿದ್ಧಪಡಿಸಿರುವ ಯೋಜನೆಯಿದು. ಆಪ್, ಎನ್ಸಿಪಿ ಸೇರಿದಂತೆ ಒಂಬತ್ತು ಪ್ರತಿಪಕ್ಷಗಳ ಮುಖಂಡರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು.
ಅದಕ್ಕೆ ತಿರುಗೇಟು ನೀಡಲು ಬಿಜೆಪಿ ಚಿಂತನೆ ನಡೆಸಿದ್ದು, ಆಯಾ ಪಕ್ಷಗಳು ಪ್ರಧಾನವಾಗಿ ಕಾರ್ಯವೆಸಗುವ ರಾಜ್ಯಗಳ ರಾಜಧಾನಿಗಳನ್ನು ಆಯ್ಕೆ ಮಾಡಿಕೊಂಡಿದೆ.
ನವದೆಹಲಿ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಕೇರಳ ರಾಜಧಾನಿಗಳಲ್ಲಿ ಬಿಜೆಪಿ ಮುಖಂಡರು ಸುದ್ದಿಗೋಷ್ಠಿ ನಡೆಸಿ ಪ್ರತಿಪಕ್ಷಗಳ ಮುಖಂಡರು ಪ್ರಧಾನಿಯವರಿಗೆ ಬರೆದ ಪತ್ರಕ್ಕೆ ತಿರುಗೇಟು ನೀಡುವ ಕಾರ್ಯ ಯೋಜನೆ ಹಮ್ಮಿಕೊಂಡಿದ್ದಾರೆ. ಈ ಮೂಲಕ ಪ್ರತಿಪಕ್ಷಗಳಲ್ಲಿನ ಕೆಲವು ನಾಯಕರು ಗುರುತರ ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿದ್ದಾರೆ. ತನಿಖೆಗೆ ಅಂಜಿಕೊಂಡು ಅವರು ದುರುಪಯೋಗದ ನೆಪದಿಂದ ಪ್ರಧಾನಿಯವರಿಗೆ ಪತ್ರ ಬರೆದಿದ್ದಾರೆ ಎಂಬ ಅಂಶಗಳನ್ನು ಬಿಜೆಪಿ ನಾಯಕರು ಸುದ್ದಿಗೋಷ್ಠಿಯಲ್ಲಿ ಪ್ರಧಾನವಾಗಿ ಪ್ರಸ್ತಾಪ ಮಾಡುವ ಸಾಧ್ಯತೆಗಳು ಇವೆ.
ಅದಕ್ಕಾಗಿ ಮುಖಂಡರನ್ನೂ ಪಕ್ಷ ನಿಯೋಜನೆ ಮಾಡಿದೆ. ಪಶ್ಚಿಮ ಬಂಗಾಳಕ್ಕೆ ಸುವೇಂದು ಅಧಿಕಾರಿ, ಬಿಹಾರದಲ್ಲಿ ಸಂಜಯ ಜೈಸ್ವಾಲ್, ಉತ್ತರ ಪ್ರದೇಶದಲ್ಲಿ ಬ್ರಿಜೇಶ್ ಪಾಠಕ್, ಬಂಡಿ ಸಂಜಯ ಕುಮಾರ್ ಅವರನ್ನು ತೆಲಂಗಾಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಲು ನಿಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ