ಬಿಜೆಪಿ ಪೋಸ್ಟರ್‌ಗಳಲ್ಲಿ ಅಭಿನಂದನ್‌ ಭಾವ ಚಿತ್ರಕ್ಕೆ ಸರ್ವತ್ರ ಟೀಕೆ


Team Udayavani, Mar 10, 2019, 8:40 AM IST

abhinandan-10-3.jpg

ನವದೆಹಲಿ: ಸೇನಾ ಸಂಬಂಧಿತ ಫೊಟೋಗಳನ್ನು ಯಾವುದೇ ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರಕ್ಕಾಗಿ ಬಳಸಿಕೊಳ್ಳದಿರುವಂತೆ ಭಾರತೀಯ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ. ಈತನ್ಮಧ್ಯೆ ಕೇಂದ್ರದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ತನ್ನ ಚುನಾವಣಾ ಪ್ರಚಾರದ ಪೋಸ್ಟರ್‌ ಗಳಲ್ಲಿ ಭಾರತೀಯ ವಾಯುಪಡೆಯ ಪೈಲಟ್‌ ಅಭಿನಂದನ್‌ ವರ್ತಮಾನ್‌ ಅವರ ಭಾವಚಿತ್ರಗಳನ್ನು ಬಳಸಿರುವುದು ಇದೀಗ ದೇಶದ ಪ್ರಜ್ಞಾವಂತ ನಾಗರೀಕರನ್ನು ಕೆರಳಿಸಿದೆ. ಈ ಕುರಿತಾಗಿ ಹಲವರು ಟ್ವಿಟ್ಟರಿಗರು ಟ್ವೀಟ್‌ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.


ನವದೆಹಲಿ ಭಾಗದಲ್ಲಿ ಹಾಕಿರುವ ಪೋಸ್ಟರ್‌ ಒಂದರಲ್ಲಿ ಅಮಿತ್‌ ಶಾ, ನರೇಂದ್ರ ಮೋದಿ ಮತ್ತು ಇತರೇ ಬಿ.ಜೆ.ಪಿ. ಅಭ್ಯರ್ಥಿಗಳ ಭಾವಚಿತ್ರದ ಜೊತೆಗೆ ವೀರ ಯೋಧ ಅಭಿನಂದನ್‌ ಅವರ ಭಾವಚಿತ್ರವನ್ನೂ ಹಾಕಲಾಗಿದೆ. ಮಾತ್ರವಲ್ಲದೇ ‘ಮೋದಿ ಹೈ ತೋ ಮುಮ್ಕಿನ್‌ ಹೈ’ ‘ಮತ್ತು ನಮೋ ಅಗೈನ್‌’ ಎಂಬ ಬರಹಗಳನ್ನು ಬರೆಯಲಾಗಿದೆ.


ಭಾರತೀಯ ಸೇನೆ ಮತ್ತು ಇತ್ತೀಚೆಗೆ ಭಾರತೀಯ ವಾಯುಪಡೆ ಪಾಕ್‌ ಕೃಪಾಪೋಷಿತ ಉಗ್ರಗಾಮಿ ಶಿಬಿರಗಳ ಮೇಲೆ ನಡೆಸಿದ ವಾಯುದಾಳಿಗಳನ್ನು ಬಿ.ಜೆ.ಪಿ.ಯು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಎಂಬ ಆರೋಪವನ್ನು ವಿರೋಧ ಪಕ್ಷಗಳು ಮಾಡಿದ್ದವು. ಇನ್ನು ತನ್ನ ಪೋಸ್ಟರ್‌ ಗಳಲ್ಲಿ ಅಭಿನಂದನ್‌ ಭಾವಚಿತ್ರವನ್ನು ಬಳಕೆ ಮಾಡಿರುವುದಕ್ಕೆ ಟ್ವಿಟ್ಟರಿಗರು ಗರಂ ಆಗಿದ್ದಾರೆ. ಮತ್ತು ಕೇಸರಿ ಪಕ್ಷದ ಈ ಕ್ರಮವನ್ನು ‘ನಾಚಿಕೆಗೇಡು’ ಎಂದು ಬಣ್ಣಿಸಿದ್ದಾರೆ.


ಇನ್ನು ಹಲವಾರು ಪತ್ರಕರ್ತರೂ ಸಹ ಬೆಳವಣಿಗೆಯನ್ನು ಖಂಡಿಸಿದ್ದಾರೆ. ಮತ್ತು ಇದರ ಕುರಿತಾಗಿರುವ ನೈತಿಕತೆ ಮತ್ತು ಕಾನೂನು ಅಂಶಗಳ ಕುರಿತಾಗಿಯೂ ಚರ್ಚೆ ನಡೆಯುತ್ತಿದೆ. ಈ ಕುರಿತಾಗಿ ಭಾರತೀಯ ವಾಯುಪಡೆಯು ತನ್ನ ಸ್ಟಷ್ಟನೆಯನ್ನು ನೀಡಬೇಕು ಎಂದು ಕೆಲವರು ಒತ್ತಾಯಿಸುತ್ತಿದ್ದಾರೆ. ಇನ್ನು ಚಳುವಳಿಗಾರ ಯೋಗೇಂದ್ರ ಯಾದವ್‌ ಅವರು ಈ ಪೋಸ್ಟರ್‌ ಕುರಿತಾಗಿ ಭಾರತೀಯ ಚುನಾವಣಾ ಆಯೋಗದ ನಿಲುವೇನು ಎಂದು ಪ್ರಶ್ನಿಸಿದ್ದಾರೆ. ಇನ್ನೂ ಹುದ್ದೆಯಲ್ಲಿರುವ ಯೋಧನೊಬ್ಬನ ಭಾವಚಿತ್ರವನ್ನು ಚುನಾವಣಾ ಪ್ರಚಾರದ ಉದ್ದೇಶಕ್ಕಾಗಿ ಬಳಸುವುದಕ್ಕೆ ಅನುಮತಿಯಿದೆಯೇ ಎಂದು ಅವರು ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ. ಭಾರತೀಯ ಸೇನೆಯನ್ನು ಮತ್ತು ಅದರ ಚಟುವಟಿಕೆಗಳನ್ನು ರಾಜಕೀಯ ಉದ್ದೇಶಗಳಿಗಾಗಿ ದುರುಪಯೋಗಪಡಿಸುವುದನ್ನು ನಿಲ್ಲಿಸುವಂತೆ ಸೇನೆಯ ನಿವೃತ್ತ ಅಧಿಕಾರಿ ಮೇಜರ್‌ ಡಿ.ಪಿ. ಸಿಂಗ್‌ ಅವರು ಭಾರತೀಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ.


ಇನ್ನು ಬಿ.ಜೆ.ಪಿ.ಯ ಈ ಚುನಾವಣಾ ತಂತ್ರವನ್ನು ಕೆಲವು ಟ್ಟಿಟ್ಟರಿಗರು ಸಮರ್ಥಿಸಿಕೊಂಡಿದ್ದಾರೆ. ಕೇಂದ್ರದಲ್ಲಿ ಪ್ರಧಾನಿ ಮೋದಿಯವರಂತಹ ಸಮರ್ಥ ನಾಯಕತ್ವ ಇದ್ದ ಕಾರಣದಿಂದಲೇ ನಮ್ಮ ಸೇನೆಗೆ ವಾಯುದಾಳಿ ನಡೆಸಲು ಸಾಧ್ಯವಾಗಿದೆ, ಆದುದರಿಂದ ಇದರ ಲಾಭವನ್ನು ಬಿ.ಜೆ.ಪಿ. ಪಡೆದುಕೊಂಡರೆ ತಪ್ಪೇನು? ಎಂದು ಕೆಲವರು ಪ್ರತಿಪಾದಿಸಿದ್ದಾರೆ. ಒಟ್ಟಿನಲ್ಲಿ ಇತ್ತೀಚೆಗಿನ ಪುಲ್ವಾಮ ದಾಳಿ ಮತ್ತು ಆ ಬಳಿಕದ ಏರ್‌ ಸ್ಟ್ರೈಕ್‌ ವಿಷಯಗಳು ಇದೀಗ ವಿವಿಧ ಪಕ್ಷಗಳ ನಾಯಕರ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿರುವುದಂತೂ ವಿಪರ್ಯಾಸವೇ ಸರಿ.

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.