ದೆಹಲಿ ಅಬಕಾರಿ ಲೈಸನ್ಸ್ ಹಗರಣ: ಬಿಜೆಪಿಯಿಂದ ಎರಡು ವಿಡಿಯೋ ಬಿಡುಗಡೆ
Team Udayavani, Sep 16, 2022, 6:30 AM IST
ನವದೆಹಲಿ: ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿ ಸರ್ಕಾರದ ನೂತನ ಅಬಕಾರಿ ನೀತಿ ಅನುಸಾರ ಅಬಕಾರಿ ಪರವಾನಗಿ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನಲಾದ ಎರಡು ಸ್ಟಿಂಗ್ ಅಪರೇಷನ್ ವಿಡಿಯೋಗಳನ್ನು ಗುರುವಾರ ಬಿಜೆಪಿ ಬಿಡುಗಡೆಗೊಳಿಸಿದೆ.
ಈ ವೇಳೆ ಮಾತನಾಡಿದ ಬಿಜೆಪಿ ದೆಹಲಿ ಘಟಕದ ಮುಖ್ಯಸ್ಥ ಆದೇಶ್ ಗುಪ್ತಾ, “ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ತುಂಬ ಸುಳ್ಳು ಹೇಳುತ್ತಾರೆ. ಆದರೆ ಅವರಿಂದ ಸತ್ಯ ಮುಚ್ಚಿಡಲು ಆಗುವುದಿಲ್ಲ. ಇದೀಗ ಆಪ್ನ ಅಬಕಾರಿ ಹಗರಣ ಬಯಲಾಗಿದೆ,’ ಎಂದಿದ್ದಾರೆ.
“ವಿಡಿಯೋದಲ್ಲಿ, ಅಬಕಾರಿ ಹಗರಣದ ಆರೋಪಿಯ ತಂದೆ ಮಾತನಾಡಿದ್ದು, “150 ಕೋಟಿ ರೂಪಾಯಿಗೂ ಅಧಿಕ ವಹಿವಾಟು ಇರುವವರಿಗೆ ಮಾತ್ರ ಅಬಕಾರಿ ಲೈಸನ್ಸ್ ನೀಡಲಾಗುತ್ತದೆ. ಇದರಿಂದ ಶೇ.90ರಷ್ಟು ಆಕಾಂಕ್ಷಿಗಳು ಹೊರಗೆ ಉಳಿಯುತ್ತಾರೆ’ ಎಂದಿದ್ದಾರೆ.
“ಮತ್ತೂಂದು ವಿಡಿಯೋದಲ್ಲಿ ಹಗರಣದ ಆರೋಪಿ ಅಮಿತ್ ಅರೋರಾ, ಲೈಸನ್ಸ್ಗಳಿಗೆ ದೆಹಲಿ ಸರ್ಕಾರ ನಿಗದಿಪಡಿಸಿರುವ ಕಮಿಷನ್ ಹಾಗೂ ಈ ಹಣವನ್ನು ಗೋವಾ ಮತ್ತು ಪಂಜಾಬ್ ಚುನಾವಣೆಗೆ ಬಳಸಿಕೊಳ್ಳುವ ಬಗ್ಗೆ ಮಾತನಾಡಿದ್ದಾನೆ,’ ಎಂದು ಆರೋಪಿಸಿದರು.
ಈ ಎರಡೂ ವಿಡಿಯೋಗಳ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, “ಈ ವಿಡಿಯೋಗಳ ಅಸಲಿಯತ್ತು ಬಯಲಾಗಲು ಇದನ್ನು ಸಿಬಿಐ ತನಿಖೆಗೆ ವಹಿಸಬೇಕು. ನಾನು ತಪ್ಪು ಮಾಡಿದ್ದರೆ ಸಿಬಿಐ ನನ್ನನ್ನು ಬಂಧಿಸಲಿ,’ ಎಂದು ಸವಾಲು ಎಸೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ