ಬಿಜೆಪಿಗೆ ಸಂಸದೆ ಫುಲೆ ರಾಜೀನಾಮೆ
Team Udayavani, Dec 7, 2018, 6:00 AM IST
ಲಕ್ನೋ: ಇತ್ತೀಚೆಗಷ್ಟೇ ಪಕ್ಷದ ವಿರುದ್ಧ ಮಾತನಾಡಿ ಇರುಸು ಮುರುಸು ಉಂಟುಮಾಡಿದ್ದ ಉತ್ತರಪ್ರದೇಶದ ಬಹ್ರೈಚ್ನ ಬಿಜೆಪಿ ಸಂಸದೆ ಸಾವಿತ್ರಿ ಬಾಯಿ ಫುಲೆ ಅವರು ಗುರುವಾರ ಪಕ್ಷಕ್ಕೆ ಏಕಾಏಕಿ ರಾಜೀನಾಮೆ ನೀಡಿದ್ದಾರೆ. ಲಕ್ನೋದಲ್ಲಿ ಅವರು ಈ ಘೋಷಣೆ ಮಾಡಿದ್ದು, ಪಕ್ಷಕ್ಕೆ ಮಾತ್ರ ರಾಜೀನಾಮೆ ನೀಡುತ್ತಿದ್ದೇನೆ. ಅವಧಿ ಪೂರ್ಣಗೊಳ್ಳುವವರೆಗೆ ಲೋಕಸಭೆ ಸದಸ್ಯೆಯಾಗಿ ಮುಂದುವರಿಯುತ್ತೇನೆ ಎಂದಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಫುಲೆ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದು, ಸಂವಿಧಾನ ಶಿಲ್ಪಿ ಅಂಬೇಡ್ಕರ್ರ ಪರಿ ನಿರ್ವಾಣ ದಿನದಂದೇ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಬಿಜೆಪಿಯು ಸಮಾಜವನ್ನು ವಿಭಜಿಸುವ ಕೆಲಸ ಮಾಡುತ್ತಿದೆ. ಪ್ರತಿಮೆ, ಮಂದಿರ ನಿರ್ಮಾಣಕ್ಕಾಗಿ ಸುಖಾ ಸುಮ್ಮನೆ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ದೇಶದ ಚೌಕಿದಾರನ ಕಣ್ಣ ಮುಂದೆಯೇ ಸಂಪನ್ಮೂಲಗಳನ್ನು ಲೂಟಿ ಮಾಡಲಾಗುತ್ತಿದೆ. ಹಿಂದೂ- ಮುಸ್ಲಿಂ, ಭಾರತ – ಪಾಕಿಸ್ತಾನದ ಹೆಸರಲ್ಲಿ ದ್ವೇಷ ಹರಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಪಕ್ಷದ ನಾಯಕರು ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಜೆಪಿಯು ಸಂವಿಧಾನದ ಬದಲಿಗೆ ಮನುಸ್ಮತಿ ಆಧಾರದಲ್ಲಿ ದೇಶ ವನ್ನು ಮುನ್ನಡೆಸಲು ಚಿಂತಿಸಿದಂತಿದೆ ಎಂದಿದ್ದಾರೆ ಫುಲೆ. ಇದೇ ವೇಳೆ, ಡಿ.23ರಿಂದ ದಲಿತರ ಹಕ್ಕುಗಳಿಗಾಗಿ ಹೋರಾಟ ಆರಂಭಿಸುತ್ತೇನೆ ಎಂದಿದ್ದಾರೆ.
ಫುಲೆ ಅವರ ರಾಜೀನಾಮೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ವಕ್ತಾರ ಹರಿಶ್ಚಂದ್ರ ಶ್ರೀ ವಾಸ್ತವ, ಫುಲೆ ಅವರು ಬಹ್ರೈಚ್ನ ಜನರ ಆಶೋತ್ತರಗಳನ್ನು ಈಡೇರಿಸಿಲ್ಲ, ತಮ್ಮ ವೈಫಲ್ಯಗಳನ್ನು ಮುಚ್ಚಿಡುವ ಸಲುವಾಗಿ ಪಕ್ಷದ ವಿರುದ್ಧ ರೇಗಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ