ಜಾರ್ಖಂಡ್ ಮತದಾರರ ಜನಾದೇಶ ನಾವು ಗೌರವಿಸುತ್ತೇವೆ; ಅಮಿತ್ ಶಾ
5 ವರ್ಷಗಳ ಕಾಲ ರಾಜ್ಯದ ಜನರ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ನಾವು ಜನರಿಗೆ ಋಣಿ
Team Udayavani, Dec 23, 2019, 6:57 PM IST
ನವದೆಹಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಜೆಎಂಎಂ, ಕಾಂಗ್ರೆಸ್ ಮೈತ್ರಿಕೂಟ ಸ್ಪಷ್ಟ ಜನಾದೇಶ ಪಡೆದಿದ್ದು, ಬಿಜೆಪಿ ಪರಾಜಯಗೊಂಡ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವರಿಷ್ಠ ಅಮಿತ್ ಶಾ, ಜಾರ್ಖಂಡ್ ಜನರ ಜನಾದೇಶವನ್ನು ಗೌರವಿಸುವುದಾಗಿ ತಿಳಿಸಿದ್ದಾರೆ.
ಜಾರ್ಖಂಡ್ ಜನತೆ ನೀಡಿರುವ ತೀರ್ಪನ್ನು ನಾವು ಗೌರವಿಸುತ್ತೇವೆ. ಐದು ವರ್ಷಗಳ ಕಾಲ ರಾಜ್ಯದ ಜನರ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ನಾವು ಜನರಿಗೆ ಋಣಿಯಾಗಿದ್ದೇವೆ. ಅಲ್ಲದೇ ರಾಜ್ಯದ ಅಭಿವೃದ್ದಿ ಕುರಿತು ಬಿಜೆಪಿ ಬದ್ಧವಾಗಿದೆ. ಚುನಾವಣೆಯಲ್ಲಿ ಶ್ರಮವಹಿಸಿ ದುಡಿದ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ ಈ ಸಂದರ್ಭದಲ್ಲಿ ಹೇಳಿದರು.
ಜಾರ್ಖಂಡ್ ಚುನಾವಣಾ ಮತಎಣಿಕೆ ನಡೆಯುತ್ತಿದ್ದು, 81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಯಲ್ಲಿ ಜೆಎಂಎಂ, ಕಾಂಗ್ರೆಸ್ ಮೈತ್ರಿಕೂಟ 46 ಸ್ಥಾನಗಳಲ್ಲಿ , ಬಿಜೆಪಿ 26 ಸ್ಥಾನಗಳಲ್ಲಿ ಜಯಗಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ