ವಾಜಪೇಯಿ ಸಮಾಧಿಗೆ ಭೇಟಿ; ರಾಹುಲ್ ನಾಟಕ ಮಾಡುತ್ತಿದ್ದಾರೆ ಎಂದು ಬಿಜೆಪಿ ಟೀಕೆ
ವಿವಾದಾತ್ಮಕ ಟ್ವೀಟ್ಗೆ ಕಾಂಗ್ರೆಸ್ ಕ್ಷಮೆಯಾಚಿಸಬೇಕೆಂದು ಒತ್ತಾಯ
Team Udayavani, Dec 26, 2022, 7:09 PM IST
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಿರುದ್ಧ ಕಾಂಗ್ರೆಸ್ ಮುಖ್ಯಸ್ಥರ ಕಚೇರಿಗೆ ಹೊಂದಿಕೊಂಡಿರುವ ನಾಯಕರೊಬ್ಬರು ಮಾಡಿದ ಅಸಹ್ಯಕರ ಹೇಳಿಕೆಗಳ ಬಗ್ಗೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಸೋಮವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಸಂಯೋಜಕರಾಗಿರುವ ಗೌರವ್ ಪಾಂಡಿ ಅವರು ವಾಜಪೇಯಿ ಅವರು ಬ್ರಿಟಿಷರ ಪರ ನಿಂತಿದ್ದರು ಎಂದು ಆರೋಪಿಸಿ ಟ್ವೀಟ್ ಮಾಡಿದ್ದರು.ನಂತರ ಅದನ್ನು ಡಿಲೀಟ್ ಮಾಡಿದ್ದರು. ವಾಜಪೇಯಿ ಅವರ ಸ್ಮಾರಕದಲ್ಲಿ ಗೌರವ ಸಲ್ಲಿಸಲು ತೆರಳಿ ರಾಹುಲ್ ಗಾಂಧಿ ನಾಟಕ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದರಿಂದ ಅವರು ಅದನ್ನು ಅಳಿಸಿದ್ದರು, ಆದರೆ ಪಕ್ಷದ ನಾಯಕರು ಮಾಜಿ ಪ್ರಧಾನಿ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಾರೆ ಎಂದು ಬಿಜೆಪಿ ಆಕ್ಷೇಪ ವ್ಯಕ್ತ ಪಡಿಸಿ ಈ ಕುರಿತು ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದೆ.
ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಪಾಂಡಿ ಅವರ ಹೇಳಿಕೆಗೆ ಕಾಂಗ್ರೆಸ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ, ಇಲ್ಲದಿದ್ದರೆ ಪಾಂಡಿ ಅವರ ಮಾತುಗಳು ರಾಹುಲ್ ಗಾಂಧಿಯವರ ಆಲೋಚನೆಗಳು ಎಂದು ನಂಬಬೇಕಾಗುತ್ತದೆ ಎಂದಿದ್ದಾರೆ.
ರಾಹುಲ್ ಗಾಂಧಿ ಅವರು ಮಹಾತ್ಮ ಗಾಂಧಿ ಮತ್ತು ವಾಜಪೇಯಿ ಅವರ ಜನ್ಮದಿನವಾದ ಭಾನುವಾರ ಸೇರಿದಂತೆ ಹಲವಾರು ಮಾಜಿ ಪ್ರಧಾನಿಗಳ ಸಮಾಧಿಗೆ ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ