ಬಿಜೆಪಿ ಶಿವಸೇನೆ ನಡುವೆ ಕಗ್ಗಂಟಾದ ಸೀಟು ಹಂಚಿಕೆ ಗೊಂದಲ
Team Udayavani, Sep 15, 2019, 4:43 PM IST
ಮುಂಬಯಿ: 2019ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಯಡಿ ಸ್ಪರ್ಧಿಸಿ ಯಶಕಂಡಿದ್ದ ಭಾರತೀಯ ಜನತಾ ಪಕ್ಷ ಮತ್ತು ಶಿವಸೇನೆ ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳಿಗಾಗಿ ಸೀಟುಹಂಚಿಕೆ ವಿಚಾರದಲ್ಲಿ ಎದ್ದಿದ್ದ ಗೊಂದಲಕ್ಕೆ ಸದ್ಯಕ್ಕೆ ತೆರೆಬೀಳುವ ಲಕ್ಷಣಗಳು ಕಾಣುತ್ತಿಲ್ಲ. ಈ ಬಾರಿಯ ಸೀಟು ಹೊಂದಾಣಿಕೆ ವಿಷಯದಲ್ಲಿ ಭಾರತೀಯ ಜನತಾ ಪಕ್ಷ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿರುವುದು ಕೇಸರಿ ಪಕ್ಷದ ದೀರ್ಘಕಾಲೀನ ಮಿತ್ರನ ಕಣ್ಣು ಕೆಂಪಾಗಿಸಿದೆ.
ಕಳೆದ ಬಾರಿ ಎರಡೂ ಪಕ್ಷಗಳು ಗೆದ್ದಿರುವ ವಿಧಾನಸಭಾ ಸೀಟುಗಳನ್ನು ತಮ್ಮತಮ್ಮಲ್ಲೇ ಇರಿಸಿಕೊಂಡು ಬಳಿಕದ ಹೆಚ್ಚುವರಿ ಸೀಟುಗಳನ್ನು ಸಮನಾಗಿ ಹಂಚಿಕೊಳ್ಳುವ ಸೂತ್ರವನ್ನು ಬಿಜೆಪಿಯು ಶಿವಸೇನಾ ನಾಯಕ ಉದ್ಭವ್ ಠಾಕ್ರೆ ಅವರ ಮುಂದೆ ಇಟ್ಟಿತ್ತು ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಲೆಕ್ಕಾಚಾರದ ಪ್ರಕಾರ ಶಿವಸೇನೆಗೆ ಸುಮಾರು 115 ಸೀಟು ದಕ್ಕಲಿದೆ.
2014ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆಯು 63 ಸ್ಥಾನಗಳನ್ನು ಗೆದ್ದುಕೊಂಡಿತ್ತು ಮತ್ತು ಬಿಜೆಪಿ 123 ಸ್ಥಾನಗಳನ್ನು ಪಡೆದುಕೊಂಡಿತ್ತು.
ಲೊಕಸಭಾ ಚುನಾವಣೆಗಳಿಗೂ ಮೊದಲು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಈ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಸಮಾನ ಸೀಟು ಹಂಚಿಕೆ ಮಾಡಿಕೊಳ್ಳುವ ಭರವಸೆಯನ್ನು ನೀಡಿದ್ದರು ಎಂದು ಶಿವಸೇನೆ ತನ್ನ ತಕರಾರು ಎತ್ತಿತ್ತು. ಈಗಲೂ ಸಹ ಶಿವಸೇನಾ ವರಿಷ್ಠರು 128 ಸ್ಥಾನಗಳನ್ನು ಪಡೆದುಕೊಳ್ಳಲು ಸಿದ್ಧರಿಲ್ಲ, ಶಿವಸೇನೆ ಈಗಲೂ ಸಹ 135 ಸ್ಥಾನಗಳಿಗೆ ಬೇಡಿಕೆ ಇಡುತ್ತಿದೆ.
ಮಹಾರಾಷ್ಟ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ-ಶಿವಸೇನೆ ಮೈತ್ರಿ ಸರಕಾರ ಈಗಾಗಲೇ ಹಲವಾರು ಕಾಂಗ್ರೆಸ್ ಮತ್ತು ನ್ಯಾಷನಲ್ ಕಾಂಗ್ರೆಸ್ ಪಕ್ಷದ ಹಲವು ಪ್ರಮುಖ ಮುಖಂಡರನ್ನು ತಮ್ಮ ಕಡೆಗೆ ಸೆಳೆಯುವಲ್ಲಿ ಯಶಸ್ವಿಯಾಗಿವೆ.
ಎರಡೂ ಪಕ್ಷಗಳಲ್ಲಿ ಚುನಾವಣಾ ತಯಾರಿ ಈಗಾಗಲೇ ಜೋರಾಗಿದೆ. ಇದೆಲ್ಲವನ್ನೂ ನೋಡುವಾಗ ಈ ಬಾರಿಯ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳು ಪ್ರತ್ಯೇಕವಾಗಿ ಮತದಾರರ ಬಳಿ ಹೋದರೂ ಆಶ್ಚರ್ಯವಿಲ್ಲ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ