ಸದನದಲ್ಲಿ ಕಾಲರ್ ಹಿಡಿದು ಬಿಜೆಪಿ-ಶಿವಸೇನೆ ಶಾಸಕರ ಫೈಟಿಂಗ್
ರೈತರಿಗೆ 25 ಸಾವಿರ ರೂ. ಪರಿಹಾರ ವಿಚಾರಕ್ಕೆ ಗುದ್ದಾಟ
Team Udayavani, Dec 17, 2019, 9:20 PM IST
ನಾಗ್ಪುರ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಆಡಳಿತ ಪಕ್ಷ ಶಿವಸೇನೆ ಮತ್ತು ಮತ್ತು ಪ್ರತಿಪಕ್ಷ ಬಿಜೆಪಿಯ ಶಾಸಕರು ಕೊರಳ ಪಟ್ಟಿ ಹಿಡಿದು ಹೊಡೆದಾಡಿದ ಘಟನೆ ಮಂಗಳವಾರ ನಡೆದಿದೆ. ವಿಶೇಷವೆಂದರೆ ಈ ಪ್ರಕರಣ ನಡೆದದ್ದು ರೈತರಿಗೆ ಪರಿಹಾರ ನೀಡುವ ವಿಚಾರವಾಗಿ!
ಸದನದ ಕಲಾಪ ಆರಂಭವಾಗುತ್ತಲೇ ಎದ್ದುನಿಂತ ಬಿಜೆಪಿ ಶಾಸಕ ಅಭಿಮನ್ಯು ಪವಾರ್, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಎದುರು, ಶಿವಸೇನೆಯ ಮುಖವಾಣಿ “ಸಾಮ್ನಾ’ದಲ್ಲಿ ಪ್ರಕಟವಾಗಿದ್ದ ವರದಿಯೊಂದನ್ನು ಮುದ್ರಿಸಲಾಗಿದ್ದ ಬ್ಯಾನರ್ ಪ್ರದರ್ಶಿಸಲು ಮುಂದಾದರು. ಅತಿವೃಷ್ಟಿಯಿಂದ ನಷ್ಟ ಅನುಭವಿಸಿದ ರೈತರಿಗೆ ಹೆಕ್ಟೇರ್ಗೆ ತಲಾ 25,000 ರೂ. ಪರಿಹಾರ ನೀಡಬೇಕು ಎಂದು ಉದ್ಧವ್ ಆಗ್ರಹಿಸಿದ್ದ ವರದಿ ಅದಾಗಿತ್ತು. ಅವರೇ ಸಿಎಂ ಆಗಿರುವುದರಿಂದ ಆ ಬೇಡಿಕೆ ಜಾರಿಗೊಳಿಸಿ ಎಂದು ಬಿಜೆಪಿ ಶಾಸಕರು ಒತ್ತಾಯಿಸಿದರು. ಈ ವೇಳೆ ಸದನದ ಬಾವಿಗಿಳಿದ ಬಿಜೆಪಿಯ ಬಹುತೇಕ ಶಾಸಕರು ಮುಖ್ಯಮಂತ್ರಿ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಲಾರಂಭಿಸಿದರು.
ಈ ನಡುವೆ ಶಿವಸೇನೆ ಶಾಸಕ ಸಂಜಯ್ ಗಾಯಕ್ವಾಡ್, ಅಭಿಮನ್ಯ ಪವಾರ್ ಕೈಯ್ಯಲ್ಲಿದ್ದ ಬ್ಯಾನರ್ ಕಿತ್ತುಕೊಳ್ಳಲು ಯತ್ನಿಸಿದರು. ಈ ವೇಳೆ ಇಬ್ಬರೂ ಪರಸ್ಪರ ಕೊರಳ ಪಟ್ಟಿ ಹಿಡಿದು ಹೊಡದಾಡಲು ಮುಂದಾದರು. ಪರಿಸ್ಥಿತಿ ಕೈಮೀರುವುದನ್ನು ಅರಿತು ಮಧ್ಯೆ ಪ್ರವೇಶಿಸಿದ ಸಚಿವರು ಹಾಗೂ ಮಾಜಿ ಸಚಿವರು ಇಬ್ಬರೂ ಶಾಸಕರನ್ನು ಸಮಾಧಾನ ಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ