ಸಾಮಾಜಿಕ ನ್ಯಾಯ ಅಭಿಯಾನ: ಬಿಜೆಪಿ
Team Udayavani, Aug 8, 2018, 5:30 AM IST
ಹೊಸದಿಲ್ಲಿ: ಇತರ ಹಿಂದುಳಿದ ವರ್ಗಗಳ (ಒಬಿಸಿ) ಆಯೋಗಕ್ಕೆ ಹೆಚ್ಚಿನ ಅಧಿಕಾರ ನೀಡುವ ಮಸೂದೆಗೆ ಸೋಮವಾರ ಸಂಸತ್ತಿನ ಒಪ್ಪಿಗೆ ಸಿಕ್ಕಿದ್ದು ಹಾಗೂ ರಾಜ್ಯಸಭೆಗೆ ಸದ್ಯದಲ್ಲೇ ಚರ್ಚೆಗೆ ಬರಲಿರುವ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಬಲವರ್ಧನೆ ಮಸೂದೆಯು ಲೋಕಸಭೆಯಲ್ಲಿ ಅನುಮೋದನೆಗೊಂಡ ಸವಿನೆನಪಿಗಾಗಿ ‘ಸಾಮಾಜಿಕ ನ್ಯಾಯ ಪಾಕ್ಷಿಕ’ ಹಾಗೂ ‘ಸಾಮಾಜಿಕ ನ್ಯಾಯ ಸಪ್ತಾಹ’ ಎಂಬ ಎರಡು ಅಭಿಯಾನಗಳನ್ನು ನಡೆಸಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿಯ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಈ ವಿಷಯ ತಿಳಿಸಿದರು.
‘ಸಾಮಾಜಿಕ ನ್ಯಾಯ ಪಾಕ್ಷಿಕ’ ಆಗಸ್ಟ್ 15ರಿಂದ 30ರವರೆಗೆ ಹಾಗೂ “ಸಾಮಾಜಿಕ ನ್ಯಾಯ ಸಪ್ತಾಹ’ವು ಮುಂದಿನ ವರ್ಷ ಆ. 1ರಿಂದ 9ರವರೆಗೆ ನಡೆಯುತ್ತದೆ ಎಂದ ಅವರು, ಹಾಲಿ ಸಂಸತ್ ಅಧಿವೇಶನದಲ್ಲೇ ಈ ಎರಡೂ ಮಸೂದೆಗಳು ಮಂಡನೆಯಾದ ಹಿನ್ನೆಲೆಯಲ್ಲಿ ಹಾಲಿ ಸಂಸತ್ ಕಲಾಪವನ್ನು ‘ಸಾಮಾಜಿಕ ನ್ಯಾಯ ಕಲಾಪ’ ಎಂದೇ ಸ್ಮರಿಸಿಕೊಳ್ಳಲಾಗುವುದು ಎಂದರು. ಅಲ್ಲದೆ, ಆಗಸ್ಟ್ ಮಾಸದಲ್ಲೇ ಈ ಮಹತ್ವದ ಮಸೂದೆ ಮಂಡನೆಯಾಗಿದ್ದನ್ನು ‘ಆಗಸ್ಟ್ ಕ್ರಾಂತಿ’ ಎಂದು ಬಣ್ಣಿಸಿದ ಅವರು, ಇದು 1942ರ ಆಗಸ್ಟ್ ನಲ್ಲಿ ಮಹಾತ್ಮಾ ಗಾಂಧಿ ಶುರು ಮಾಡಿದ್ದ “ಕ್ವಿಟ್ ಇಂಡಿಯಾ ಚಳವಳಿ’ಯ ನಂತರ ಭಾರತದಲ್ಲಿ ಆಗಿರುವ ಕ್ರಾಂತಿ ಎಂದರು.
ಇದೇ ವೇಳೆ ಸಚಿವ ಅನಂತ ಕುಮಾರ್, “2014ರ ಚುನಾವಣೆಗೂ ಮುನ್ನ ಮೋದಿಯವರು ತಾವು ಅಧಿಕಾರಕ್ಕೆ ಬಂದರೆ, ಬಡವರ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಹೇಳಿದ್ದರು. ಇದೀಗ, ಒಬಿಸಿ, ದಲಿತರ ಮೇಲಿನ ಹಲ್ಲೆಗಳ ವಿರೋಧಿ ಮಸೂದೆ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!