ಬಿಜೆಪಿಯಿಂದ ರೈತರಿಗಿನ್ನು ಕೃಷಿಯ ಅಧ್ಯಾತ್ಮ, ಧಾರ್ಮಿಕ ಪಾಠ!
Team Udayavani, Oct 14, 2017, 9:25 AM IST
ಹೊಸದಿಲ್ಲಿ: ಕೇಂದ್ರ ಸರಕಾರದ ಸಾಧನೆಗಳನ್ನು ರೈತರಿಗೆ ತಲುಪಿಸುವ ಉದ್ದೇಶದಿಂದ ಬಿಜೆಪಿ ದೇಶಾದ್ಯಂತ ಸುಮಾರು 50,000 ಕಾರ್ಯಕರ್ತರನ್ನು ಕೃಷಿಗೆ ಸಂಬಂಧಿಸಿದಂತೆ ಅಧ್ಯಾತ್ಮ ಮತ್ತು ಧಾರ್ಮಿಕ ಪಾಠಗಳನ್ನು ಮಾಡಲು ಬಳಸಿಕೊಳ್ಳಲಿದೆ.
ಇತ್ತೀಚಿನ ಕೆಲವು ತಿಂಗಳುಗಳಿಂದೀಚೆಗೆ ದೇಶಾದ್ಯಂತದ ರೈತರು ಸರಕಾರದ ಬಗೆಗೆ ತೀವ್ರ ಅಸಮಾಧಾನಗೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ಸರಕಾರ ಕೈಗೊಂಡಿರುವ ಯೋಜನೆಗಳ ಬಗೆಗೆ ಅರಿವು ಮೂಡಿಸಿ ರೈತರು ಈ ಯೋಜನೆಗಳ ಪ್ರಯೋಜನಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಪಕ್ಷ ಈ ಕಾರ್ಯಕ್ರಮವನ್ನು ಹಾಕಿಕೊಂಡಿದೆ. ಅಷ್ಟೇ ಅಲ್ಲದೆ 2022ರ ವೇಳೆಗೆ ರೈತರ ಆದಾಯವನ್ನು ಇಮ್ಮಡಿಗೊಳಿಸುವ ಸರಕಾರದ ಗುರಿಯನ್ನು ತಲುಪಲು ಈ ಕಾರ್ಯಕ್ರಮ ಸಹಕಾರಿಯಾಗಲಿದೆ.
ಕೃಷಿ ಕ್ಷೇತ್ರದ ಆಧ್ಯಾತ್ಮಿಕ ಮತ್ತು ಧಾರ್ಮಿಕ ಆಯಾಮಗಳ ಜತೆಯಲ್ಲಿ ಕೃಷಿಯ ಇತಿಹಾಸ, ಕೃಷಿ ವಲಯದಲ್ಲಿನ ಪ್ರಸಕ್ತ ಪರಿಸ್ಥಿತಿ, ಕೇಂದ್ರ ಮತ್ತು ರಾಜ್ಯ ಸರಕಾರಗಳ ಸಾಧನೆಗಳು ಮತ್ತು ರೈತರ ಕಲ್ಯಾಣಕ್ಕಾಗಿನ ಸಲಹೆಗಳ ಕುರಿತಂತೆ ಈ ತರಬೇತಿ ಕಾರ್ಯಕ್ರಮದಲ್ಲಿ ಬೆಳಕು ಚೆಲ್ಲಲಾಗುವುದು ಎಂದು ಬಿಜೆಪಿಯ ನಾಯಕರೋರ್ವರು ತಿಳಿಸಿದರು. ದೀಪಾವಳಿಯ ಬಳಿಕ ಈ ತರಬೇತಿ ಕಾರ್ಯಕ್ರಮ ಆರಂಭಗೊಳ್ಳಲಿದ್ದು ವಿಧಾನಸಭೆ ಕ್ಷೇತ್ರಗಳ ಆಧಾರದಲ್ಲಿ ತರಬೇತಿ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ