ವಿಪಕ್ಷಕ್ಕೆ ತಿರುಗೇಟು; ಜ.5ರಿಂದ ದೇಶಾದ್ಯಂತ CAA ಬೆಂಬಲಿಸಿ ಬಿಜೆಪಿಯಿಂದ ಪ್ರಚಾರಾಂದೋಲನ
ಸಿಎಎ ಕುರಿತು ಅರಿವು ಮೂಡಿಸುವ ಪ್ರಚಾರಾಂದೋಲನದಲ್ಲಿ ಮೂರು ಕೋಟಿ ಕುಟುಂಬಗಳನ್ನು ತಲುಪುವ ಗುರಿ
Team Udayavani, Dec 28, 2019, 12:50 PM IST
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಭಾರೀ ಪ್ರತಿಭಟನೆ ಮುಂದುವರಿದಿದ್ದು, ಮತ್ತೊಂದೆಡೆ ಭಾರತೀಯ ಜನತಾ ಪಕ್ಷದ ವತಿಯಿಂದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಭಿಯಾನ ಜನವರಿ 5ರಿಂದ ಆರಂಭಗೊಂಡು 15ರವರೆಗೆ ಮುಂದುವರಿಯಲಿದೆ ಎಂದು ತಿಳಿಸಿದೆ.
ಸಿಎಎ ಕುರಿತು ಅರಿವು ಮೂಡಿಸುವ ಪ್ರಚಾರಾಂದೋಲನದಲ್ಲಿ ಮೂರು ಕೋಟಿ ಕುಟುಂಬಗಳನ್ನು ತಲುಪುವ ಗುರಿಯನ್ನು ಬಿಜೆಪಿ ಸರ್ಕಾರ ಹೊಂದಿದ್ದು, ಈ ಅರಿವು ಮೂಡಿಸುವ ಆಂದೋಲನದಲ್ಲಿ ಬಿಜೆಪಿ ಜತೆ ಆರ್ ಎಸ್ ಎಸ್ ಕೈಜೋಡಿಸುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ. ಸಿಎಎ ಪರವಾಗಿ ಸುಮಾರು ಒಂದು ಕೋಟಿ ಜನರು ಬೆಂಬಲ ನೀಡುವ ಗುರಿಯನ್ನು ಬಿಜೆಪಿ ಹೊಂದಿದೆ.
ಸಿಎಎ ಪ್ರಚಾರಾಂದೋಲನದಲ್ಲಿ ಗುರಿ ಸಾಧಿಸಿದ ನಂತರ ಭಾರತೀಯ ಜನತಾ ಪಕ್ಷ ಸಾರ್ವಜನಿಕ ಸಂವಹನಕ್ಕಾಗಿ ವಿವಿಧ ಗುಂಪನ್ನು ರಚಿಸುವ ಗುರಿ ಹೊಂದಿದ್ದು, ಈ ಮೂಲಕ ಬೌದ್ಧರು, ದಲಿತರು ಹಾಗೂ ಅಲ್ಪಸಂಖ್ಯಾಕ ಸಮುದಾಯವನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಈ ಗುಂಪು ಕಾರ್ಯನಿರ್ವಹಿಸಲಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ
ಸಿಆರ್ಝಡ್ ಮರಳು ಇನ್ನು ಸದ್ಯಕ್ಕೆ ಮರೀಚಿಕೆ
Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Udupi ಇನ್ನೂ ನಡೆಯದ ಟೆಂಡರ್ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ