ಭಾರತೀಯ ಜನತಾ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ 370ನೇ ವಿಧಿ ರದ್ದು : ಅಮಿತ್ ಶಾ
Team Udayavani, May 13, 2019, 12:22 PM IST
ಶಿಮ್ಲಾ : ನರೇಂದ್ರ ಮೋದಿ ಅವರು ಮತ್ತೆ ದೇಶದ ಪ್ರಧಾನಿಯಾಗಿ ಚುನಾಯಿತರಾದರೆ ಕಾಶ್ಮೀರಕ್ಕೆ ವಿಶೇಷಾಧಿಕಾರ ಕಲ್ಪಿಸುವ ಸಂವಿಧಾನದ 370 ನೇ ವಿಧಿಯನ್ನು ರದ್ದು ಮಾಡಲಾಗುವುದು ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪುನರುಚ್ಚರಿಸಿದ್ದಾರೆ.
ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡ ಅಮಿತ್ ಶಾ, ಪಾಕಿಸ್ತಾನ ಐವರು ಭಾರತೀಯ ಸೈನಿಕರ ತಲೆ ಕಡಿದಾಗ ಆಗಿನ ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರಕಾರ ಏನೂ ಮಾಡಿರಲಿಲ್ಲ; ಆದರೆ ಅದೇ ಮೋದಿ ಆಡಳಿತೆಯಲ್ಲಿ ಬಾಲಾಕೋಟ್ ಮೇಲೆ ಭಾರತ ಪ್ರಬಲ ವಾಯು ದಾಳಿ ನಡೆಸಿ ಅಲ್ಲಿನ ಉಗ್ರರನ್ನೂ, ಅವರ ತರಬೇತಿ ಶಿಬಿರಗಳನ್ನೂ ನಾಶ ಮಾಡಿತು ಎಂದು ಹೇಳಿದರು.
ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿನ ಛೋಗನ್ ಮೈದಾನದಲ್ಲಿ ಸಾರ್ವಜನಿಕ ಚುನಾವಣಾ ರಾಲಿಯಲ್ಲಿ ಮಾತನಾಡುತ್ತಿದ್ದ ಅಮಿತ್ ಶಾ, ಕಾಂಗ್ರೆಸ್ ನ ಹಿರಿಯ ನಾಯಕ ಸ್ಯಾಮ್ ಪಿತ್ರೋಡ ಅವರು “ವಾಯು ದಾಳಿಗೆ ಬದಲಾಗಿ ನಾವು ಉಗ್ರರೊಂದಿಗೆ ಮಾತುಕತೆ ನಡೆಸಬೇಕು’ ಎಂದು ಹೇಳಿರುವುದು ಖಂಡನೀಯ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ