ಹಲವು ದಶಕಗಳ ಕಾಲ ಬಿಜೆಪಿ ಇನ್ನೂ ಬಲಿಷ್ಠ: ಪ್ರಶಾಂತ್‌ ಕಿಶೋರ್‌


Team Udayavani, Oct 29, 2021, 7:30 AM IST

ಹಲವು ದಶಕಗಳ ಕಾಲ ಬಿಜೆಪಿ ಇನ್ನೂ ಬಲಿಷ್ಠ: ಪ್ರಶಾಂತ್‌ ಕಿಶೋರ್‌

ಪಣಜಿ/ಕೋಲ್ಕತಾ:  “ಬಿಜೆಪಿಯು ಅಧಿಕಾರದಲ್ಲಿ ಇರಲಿ, ಬಿಡಲಿ, ಇನ್ನೂ ಕೆಲವು ದಶಕಗಳ ಕಾಲ ಭಾರತದ ರಾಜಕೀಯ ರಂಗದಲ್ಲಿ ಪ್ರಮುಖ ಪಾತ್ರ ವಹಿಸುವುದಂತೂ ನಿಶ್ಚಿತ. ಆದರೆ ಇದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರಿಗೆ ಅರ್ಥವಾ­ಗುತ್ತಿಲ್ಲ’ ಎಂದು ರಾಜಕೀಯ ವಿಶ್ಲೇಷಕ, ಪ್ರಶಾಂತ್‌ ಕಿಶೋರ್‌ ಹೇಳಿದ್ದಾರೆ.

“ಪ್ರಧಾನಿ ಮೋದಿಯವರ ಬಗ್ಗೆ ಜನರಲ್ಲಿ ಒಂದು ಅಸಹನೆ ಸೃಷ್ಟಿಯಾ­ಗಿದ್ದು,  ಅದು ನಿಧಾನವಾಗಿ ಹೆಚ್ಚಾಗು­ತ್ತಿದೆ. ಈ ಅಸಮಾಧಾನ ಜ್ವಾಲಾಮುಖೀಯಂತೆ ಸ್ಫೋಟಗೊಂಡು, ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ಜನರೇ ಕೆಳಗಿಳಿಸುತ್ತಾರೆ ಎಂಬುದು ಒಂದು ದೊಡ್ಡ ಭ್ರಮೆ ಎಂದು ಹೆಸರಾಂತ ಚುನಾವಣ ತಂತ್ರಜ್ಞ ಪ್ರಶಾಂತ್‌ ಕಿಶೋರ್‌ ತಿಳಿಸಿದ್ದಾರೆ.

ಗೋವಾದಲ್ಲಿ ಚುನಾವಣ ಪ್ರಚಾರಕ್ಕಾಗಿ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಯವರು ಆಗಮಿ ಸುತ್ತಿರುವಂತೆಯೇ ಈ ಬೆಳವಣಿಗೆ ನಡೆದಿದೆ.

ಪಣಜಿಯಲ್ಲಿ ಬುಧವಾರ ನಡೆದಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮೋದಿಯವರನ್ನು ಜನರು ಅಧಿಕಾರದಿಂದ ಕಿತ್ತೂಗೆಯುತ್ತಾರೆ ಎಂಬುದಂತೂ ಸುಳ್ಳು. ಹಾಗೊಮ್ಮೆ ಮೋದಿಯವರ ಪದಚ್ಯುತಿಯಾದರೂ ಬಿಜೆಪಿಯಂತೂ ಕೇಂದ್ರ ದಲ್ಲಿ ಅಧಿಕಾರದಲ್ಲಿರುತ್ತದೆ.

ಅಷ್ಟರಮಟ್ಟಿಗೆ ಆ ಪಕ್ಷದ ವರ್ಚಸ್ಸು, ಪ್ರಾಮುಖ್ಯ ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ನಿರ್ಮಾಣ ವಾಗಿದೆ. ಇದು ಹೇಗೆಂದರೆ, ಸ್ವಾತಂತ್ರ್ಯಾ ನಂತರ ಸತತ ನಾಲ್ಕು ದಶಕಗಳಲ್ಲಿ ಕಾಂಗ್ರೆಸ್‌ ಹೇಗೆ ಈ ರಾಜಕೀಯ ರಂಗದಲ್ಲಿ ಅಭೇದ್ಯ ಕೋಟೆ ಯಂತಿತ್ತೋ ಹಾಗೆಯೇ ಇನ್ನು ಮುಂದೆ ಬಿಜೆಪಿಯೂ ಇರಲಿದೆ’  ಎಂದಿದ್ದಾರೆ. “ರಾಹುಲ್‌ ಗಾಂಧಿಯವರಿಗೆ ಈ ವಿಚಾರ ಅರ್ಥವಾಗುವುದೇ ಇಲ್ಲ. ಇದೇ ಅವರ ಸಮಸ್ಯೆ. ಅವರು, ಮೋದಿ ಅವರ ಜನಪ್ರಿಯತೆ ಕೇವಲ ತಾತ್ಕಾಲಿಕ. ಸದ್ಯದಲ್ಲೇ ಅವರ ಜನಪ್ರಿಯತೆ ಕುಸಿಯಲಿದೆ ಎಂದು ಭಾವಿಸಿದ್ದಾರೆ’ ಎಂದಿದ್ದಾರೆ.

ಮೂರು ದಿನಗಳ ಭೇಟಿ: 2022ರಲ್ಲಿ ನಡೆಯಲಿ­ರುವಗೋವಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಲಿರುವ ಟಿಎಂಸಿಗೆ ಸೂಕ್ತ ವೇದಿಕೆಯನ್ನು ಸಜ್ಜುಗೊಳಿಸಲು ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ, ಮೂರು ದಿನಗಳ ಭೇಟಿಯಾಗಿ ಗೋವಾಕ್ಕೆ ಆಗಮಿಸಿದ್ದಾರೆ. ಈ ಅವಧಿಯಲ್ಲಿ ಗೋವಾದ ಹಿರಿಯ ಸಮಾಜ ಚಿಂತಕರು, ಉದ್ಯೋಗ ವಲಯದ ಪ್ರತಿನಿಧಿಗಳು, ಬುದ್ಧಿ ಜೀವಿಗಳ ಜತೆಗೆ ಅವರು ಮಾತುಕತೆ ನಡೆಸಲಿದ್ದಾರೆಂದು ಹೇಳಲಾಗಿದೆ.

ಮಮತಾ ಬ್ಯಾನರ್ಜಿಯವರು ತಮ್ಮನ್ನು ಬಂಗಾಲಿ ಎಂದು ಹೇಳಿಕೊಳ್ಳುತ್ತಾರೆ. ಪಶ್ಚಿಮ ಬಂಗಾಲದಲ್ಲಿ ಸ್ಥಳೀಯರನ್ನು ಉಳಿದವರೆಲ್ಲರೂ ಹೊರಗಿನವರು ಎನ್ನುತ್ತಾರೆ. ಹೀಗಿರುವಾಗ  ಅನ್ಯರಾಜ್ಯವಾದ ಗೋವಾದಲ್ಲಿ ಟಿಎಂಸಿ ಏಕೆ ಸ್ಪರ್ಧಿಸುತ್ತಿದೆ. ಟಿಎಂಸಿ ಹೊರಗಿನ ಪಕ್ಷವಲ್ಲವೇ?-ಸೌಮಿತ್ರಾ ಖಾನ್‌, ಬಿಜೆಪಿ ಸಂಸದ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.