ಹಣಬಲದಿಂದ ಸರ್ಕಾರಗಳನ್ನು ಬಿಜೆಪಿ ಉರುಳಿಸುತ್ತಿದೆ: ರಾಹುಲ್
Team Udayavani, Jul 13, 2019, 3:03 AM IST
ಅಹಮದಾಬಾದ್: ಬಿಜೆಪಿ ತನ್ನ ಹಣ ಬಲದಿಂದ ಸರ್ಕಾರಗಳನ್ನು ಉರುಳಿಸುತ್ತಿದೆ. ಕರ್ನಾಟಕದಲ್ಲೂ ಬಿಜೆಪಿ ಇದನ್ನೇ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಅಹಮದಾಬಾದ್ನಲ್ಲಿ ಮಾತನಾಡಿದ ಅವರು, ಸಾಧ್ಯವಾದಲ್ಲೆಲ್ಲ ಬಿಜೆಪಿ ಹಣ ಬಲ ಮತ್ತು ಬೆದರಿಕೆಯನ್ನು ಬಳಸಿ ಈ ಕೆಲಸ ಮಾಡುತ್ತಿದೆ.
ಗೋವಾದಿಂದ ಇದು ಶುರುವಾಯಿತು. ನಂತರ ಈಶಾನ್ಯ ರಾಜ್ಯಗಳಿಗೂ ಹರಡಿತು. ಈಗ ಕರ್ನಾಟಕದಲ್ಲಿ ನಡೆಯುತ್ತಿದೆ. ಇದು ಅವರ ಕೆಲಸದ ವಿಧಾನ. ಅವರ ಬಳಿ ಹಣ, ಅಧಿಕಾರವಿದೆ. ಅದನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಆರೋಪಿಸಿದ್ದಾರೆ.
ದೇಶದಲ್ಲಿ ಬೆದರಿಸುವ ಮತ್ತು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಆದರೆ, ಇದಕ್ಕೆ ನಾನು ಹೆದರುವುದಿಲ್ಲ. ನಾನು ಎದೆಯೊಡ್ಡಿ ಇದನ್ನು ಎದುರಿಸುತ್ತೇನೆ. ಇದು ಸಂವಿಧಾನ ರಕ್ಷಣೆಗಾಗಿ, ದೇಶದ ಭವಿಷ್ಯದ ರಕ್ಷಣೆಗಾಗಿ, ದೌರ್ಜನ್ಯ ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟ ಎಂದು ರಾಹುಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ