ತೃಣಮೂಲ, ಬಿಜೆಪಿ ಫೈಟ್ : ಸಂಸತ್ತಿನಲ್ಲಿ ನಿಶಿತ್ ಪ್ರಾಮಾಣಿಕ್ ಪೌರತ್ವದ ಬಗ್ಗೆ ಚರ್ಚೆ..!

ಮುಂಗಾರು ಅಧಿವೇಶಕ್ಕೂ ಮುನ್ನಾ ದಿನ ಗೃಹ ಇಲಾಖೆಯ ಸಹಾಯಕ ಸಚಿವರ ಪೌರತ್ವದ ಚರ್ಚೆಗೆ ಕಾರಣವಾದ ಸಂಸತ್ತು

Team Udayavani, Jul 18, 2021, 3:44 PM IST

BJP, Trinamool Spar Over Minister’s Nationality Before Parliament Session

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ಗೃಹ ಇಲಾಖೆಯ ಸಹಾಯಕ ಸಚಿವ ಹಾಗೂ ಪಶ್ಚಿಮ ಬಂಗಾಳದ ಸಂಸದ ನಿಶಿತ್ ಪ್ರಮಾಣಿಕ್ ಅವರ ಪೌರತ್ವದ  ಬಗ್ಗೆ  ಮುಂದಾರು ಅಧಿವೇಶನ ಆರಂಭಕ್ಕೂ ಮುನ್ನಾ ದಿನ ಅಂದರೇ,  ಇಂದು(ಭಾನುವಾರ, ಜುಲೈ 18) ಸಂಸತ್ತಿನಲ್ಲಿ ಭಾರಿ ಚರ್ಚಗೆ ಕಾರಣವಾಗಿದೆ.

ಮೋದಿ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ 35 ವರ್ಷ ನಿಶಿತ್ ಪ್ರಮಾಣಿಕ್ ಅವರನ್ನು  ಸೇರ್ಪಡೆಮಾಡಿಕೊಂಡ ಹಿನ್ನೆಲೆಯಲ್ಲಿ ಕಳೆದ ಶುಕ್ರವಾರ ಅಸ್ಸಾಂನ ಕಾಂಗ್ರೆಸ್ ಸಂಸದ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ರಿಪುನ್ ಬೋರಾ, ಪ್ರಮಣಿಕ್ ಅವರ ಜನ್ಮಸ್ಥಳ ಮತ್ತು ರಾಷ್ಟ್ರೀಯತೆಯ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿರಾಜ್ಯದ ಜಿ.ಪಂ, ತಾ.ಪಂ, ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ: ಆರ್.ಅಶೋಕ್

ಇನ್ನು, ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ, ಹಲವು ರಾಷ್ಟ್ರೀಯ ಸುದ್ದಿ ಸಂಸ್ಥೆಗಳ ವರದಿಗಳನ್ನು ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದ ಪತ್ರವನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ ಬೋರಾ, ‘ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ವಿದೇಶಿ ಪ್ರಜೆಯೊಬ್ಬರು ಸೇರಿಕೊಂಡಿರುವುದು ಕಳವಳಕಾರಿ ವಿಷಯ’ ಎಂದು ಅವರು ಬರೆದುಕೊಂಡಿದ್ದರು.

ಈಗ ತೃಣಮೂಲ ನಾಯಕರು ಕೂಡ ಈ ವಿಷಯವನ್ನು ಮೇಲಕ್ಕೆತ್ತಿದ್ದು,  ಪಶ್ಚಿಮ ಬಂಗಾಳ ಶಿಕ್ಷಣ ಸಚಿವ ಬ್ರಾತ್ಯ ಬಸು ಕೂಡ ಟ್ವೀಟರ್ ನಲ್ಲಿ ಈ ಬಗ್ಗೆ ಧ್ವನಿ ಎತ್ತಿದ್ದಾರೆ.  “ರಾಜ್ಯಸಭಾ ಎಂಪಿ ಬೋರ್ಡ್ ಎಲ್ಲಾ ಸರಿಯಾದ ಪ್ರಶ್ನೆಗಳನ್ನು ಕೇಳುತ್ತಿದೆ” ಎಂದು ಹೇಳಿದ್ದಾರೆ.

ಇನ್ನೊಬ್ಬ ರಾಜ್ಯ ಸಚಿವ ಇಂದ್ರಾನಿಲ್ ಸೇನ್, “ಕೇಂದ್ರ ಸಚಿವ ನಿಶಿತ್ ಪ್ರಾಮಣಿಕ್ ಬಾಂಗ್ಲಾದೇಶದ ಪ್ರಜೆಯಾಗಿರಬಹುದು ಎಂದು ತಿಳಿದು ಆಘಾತಕ್ಕೊಳಗಾಗಿದ್ದೇನೆ” ಎಂದು ಹೇಳಿದ್ದಾರೆ.

ಆದಾಗ್ಯೂ,  ಪ್ರಾಮಣಿಕ್ ವಿಚಾರವಾಗಿ ಕೇಳಿ ಬರುತ್ತಿರುವ ಅಭಿಪ್ರಾಯಗಳನ್ನು ಬಿಜೆಪಿ  ತಳ್ಳಿಹಾಕಿದೆ, ಈ ಕುರಿತಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳೊಂದಿಗೆ ಮಾತನಾಡಿದ ಪಶ್ಚಿಮ ಬಂಗಾಳದ ಬಿಜೆಪಿ ವಕ್ತಾರ ಸಮಿಕ್ ಭಟ್ಟಾಚಾರ್ಯ, ” ಕೇವಲ ಬೆರಳು ತೋರಿಸಿದರೆ ಸಾಲದು, ಪುರಾವೆ ತೋರಿಸಲಿ” ಎಂದು ಹೇಳಿದ್ದಾರೆ.

ಪ್ರಾಮಾಣಿಕ್ ಅವರ ಪೌರತ್ವದ ಬಗ್ಗೆ ಧ್ವನಿ ಎತ್ತಿದವರಲ್ಲಿ ಯಾರೊಬ್ಬರೂ ಇದುವರೆಗೂ ಯಾವುದೇ ಪುರಾವೆಗಳನ್ನು ನೀಡಿಲ್ಲ. ಸುಖಾಸುಮ್ಮನೆ ಪಕ್ಷವನ್ನು ನಿಂದಿಸುವ ಪ್ರಯತ್ನ ನಡೆಯುತ್ತಿದೆ. ಆ ವಿಷಯ ಹೌದಾದಲ್ಲಿ ಪುರಾವೆಗಳನ್ನು ನೀಡಲಿ ಎಂದು ಅವರು ಸಿಡಿದಿದ್ದಾರೆ.

ಪ್ರಾಮಾಣಿಕ್ ಬಾಂಗ್ಲಾದಲ್ಲಿ ಜನಿಸಿದ್ದು..! : ಫೇಸ್ ಬುಕ್ ಪೋಸ್ಟ್

ಪೂಜರ್ ಮೇಳ ಎಂಬವರ  ಫೇಸ್‌ ಬುಕ್ ಅಕೌಂಟ್ ನ ಪೋಸ್ಟ್‌ ನಲ್ಲಿ, ಪ್ರಾಮಾಣಿಕ್ ಅವರ ಬಗ್ಗೆ ಮೊದಲು ಈರೀತಿಯ ವಿಚಾರ ಹೊರಬಿದ್ದಿದ್ದು. ನೂತನ ಸಚಿವ ಸಂಪುಟ ರಚನೆಯಾದ ಬೆನ್ನಿಗ ೀ ಪೋಸ್ಟ್ ನಲ್ಲಿ ಕಾಣಿಸಿಕೊಂಡಿತ್ತು.

ಪ್ರಾಮಾಣಿಕ್ ಬಾಂಗ್ಲಾದೇಶದಲ್ಲಿ ಜನಿಸಿದ್ದು, ಪಶ್ಚಿಮ ಬಂಗಾಳದಲ್ಲಿ ಕಂಪ್ಯೂಟರ್ ವಿಜ್ಞಾನವನ್ನು ಅಧ್ಯಯನ ಮಾಡಿದರು. ಅವರನ್ನುಈಗ ಗೃಹ ಇಲಾಖೆಯ ಸಹಾಯಕ ಸಚಿವರನ್ನಾಗಿ ಮಾಡಲಾಗಿದೆ ಎಂದು ಉಲ್ಲೇಖಿಸಿ,  “ಬಾಂಗ್ಲಾದೇಶದ ಗೈಬಂಧ ಜಿಲ್ಲೆಯ ಪಲಾಶ್‌ಬರಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಹರಿನಾಥಪುರದ ಯಶಸ್ವಿ ಮಗ” ಎಂದು ಪೋಸ್ಟ್ ಮಾಡಲಾಗಿತ್ತು. ಆದರೇ, ಈಗ ಆ ಪೋಸ್ಟ್ ನನ್ನು ಫೇಸ್ ಬುಕ್ ನಿಂದ ಡಿಲೀಟ್ ಮಾಡಲಾಗಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಆದರೇ,  ಅವರ ಜನ್ಮಸ್ಥಳ ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ದಿನ್ಹಾಟಾ ಮತ್ತು ಅವರು ಕಂಪ್ಯೂಟರ್ ಅಪ್ಲಿಕೇಶನ್‌ ಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿದ್ದಾರೆ ಎಂದು ಲೋಕಸಭೆಯಲ್ಲಿರುವ ಪ್ರಾಮಾಣಿಕ್ ಅವರ ಸ್ವವಿವರದಲ್ಲಿ ಹೇಳಲಾಗಿದೆ.

ಆದಾಗ್ಯೂ, ಅವರ ಶಿಕ್ಷಣದ ಅರ್ಹತೆಯನ್ನು, ಪೌರತ್ವವನ್ನು ತೃಣಮೂಲ ನಾಯಕರು ಪ್ರಶ್ನಿಸಿದ್ದಾರೆ. ಮಾತ್ರವಲ್ಲದೇ, ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಒಳಗೊಂಡು ಹನ್ನೆರಡು ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ವಾರಂಬಳ್ಳಿ ಗ್ರಾಮದಲ್ಲಿ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.