ಬಿಜೆಪಿ-ಟಿಆರ್‌ಎಸ್‌ ದೋಸ್ತಿ?


Team Udayavani, Jul 23, 2018, 9:40 AM IST

nda.jpg

ಹೊಸದಿಲ್ಲಿ: ಮುಂದಿನ ಲೋಕಸಭೆ ಚುನಾವಣೆ ವೇಳೆಗೆ ಬಿಜೆಪಿ ಹಾಗೂ ಟಿಆರ್‌ಎಸ್‌ ಪರಸ್ಪರ ಕೈಜೋಡಿಸಲಿವೆಯೇ? ಇಂತಹದೊಂದು ಅನುಮಾನ ಈಗ ಮೂಡತೊಡಗಿದೆ. ಲೋಕಸಭೆಯಲ್ಲಿ ಶುಕ್ರವಾರ ಅವಿಶ್ವಾಸ ಗೊತ್ತುವಳಿ ಕುರಿತು ಚರ್ಚೆ ಸಂದರ್ಭದಲ್ಲಿ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಅವರನ್ನು ದೂಷಿಸುವ ಭರದಲ್ಲಿ ಪ್ರಧಾನಿ ಮೋದಿ ಅವರು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಅಧ್ಯಕ್ಷ ಕೆ. ಚಂದ್ರಶೇಖರ್‌ ರಾವ್‌ ಅವರನ್ನು ಹೊಗಳಿ ಅಟ್ಟಕ್ಕೇರಿಸಿರುವುದು, ಅವಿಶ್ವಾಸದ ವೇಳೆ ಕೊನೇ ಕ್ಷಣದಲ್ಲಿ ಟಿಆರ್‌ಎಸ್‌ ದೂರ ಉಳಿದಿರುವುದು ಇಂಥ ನಿರೀಕ್ಷೆಯೊಂದನ್ನು ಜೀವಂತವಾಗಿರಿಸಿದೆ. ಅವಿಶ್ವಾಸ ಗೊತ್ತುವಳಿ ಮಂಡನೆಗೂ ಮುನ್ನ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ಟಿಆರ್‌ಎಸ್‌ ಸಂಸದರಿಗೆ ಕರೆ ಮಾಡಿ, ಸರಕಾರವನ್ನು ಬೆಂಬಲಿಸುವಂತೆ ಕೋರಿದ್ದರು ಎನ್ನಲಾಗಿದೆ. ಆದರೆ, ಟಿಆರ್‌ಎಸ್‌ ಸರಕಾರವನ್ನು ಬೆಂಬಲಿಸದೇ ದೂರ ಉಳಿಯುವ ಮೂಲಕ ಪರೋಕ್ಷವಾಗಿ ಸರಕಾರಕ್ಕೆ ಬೆಂಬಲ ನೀಡಿದರು. 

ಇತ್ತೀಚೆಗಷ್ಟೇ ಕೆಸಿಆರ್‌ ಅವರು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಜತೆಗೂಡಿ ಬಿಜೆಪಿಯೇತರ ಹಾಗೂ ಕಾಂಗ್ರೆಸೇತರ ರಂಗವೊಂದರ ರಚನೆಗೆ ಅತ್ಯುತ್ಸಾಹ ತೋರಿದ್ದರು. ವಿವಿಧ ಪಕ್ಷಗಳನ್ನು ಒಗ್ಗೂಡಿಸುವ ಯತ್ನವನ್ನೂ ಮಾಡಿದ್ದರು. ಆದರೆ, ಇದೀಗ ಫೆಡರಲ್‌ ಫ್ರಂಟ್‌ ರಚಿಸುವ ಅವರ ಆಸಕ್ತಿ ಕುಗ್ಗಿದಂತೆ ಕಾಣುತ್ತಿದ್ದು, ಲೋಕಸಭೆ ಚುನಾವಣೆ ವೇಳೆ ಬಿಜೆಪಿಯೊಂದಿಗೆ ಸೇರುವ ಸಾಧ್ಯತೆಯೂ ಗೋಚರಿಸತೊಡಗಿದೆ. ಬಿಜೆಪಿ ಜತೆಗಿನ ಮೈತ್ರಿಯನ್ನು ಟಿಆರ್‌ಎಸ್‌ ನಾಯಕರು ತಳ್ಳಿಹಾಕುತ್ತಿದ್ದರೂ, ಚುನಾವಣೆ ಸಮೀಪಿಸುವಾಗ ಲೆಕ್ಕಾಚಾರ ಹೇಗೆ ಬದಲಾಗುತ್ತದೆ ಎಂದು ಕಾದು ನೋಡಬೇಕು ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

ಬಿಹಾರದಲ್ಲಿ ಹೆಚ್ಚು ಸೀಟಿಗೆ ಬೇಡಿಕೆ
ಎನ್‌ಡಿಎಗೆ ಬಿಹಾರದಲ್ಲಿ ಸೀಟು ಹಂಚಿಕೆಯದ್ದೇ ದೊಡ್ಡ ತಲೆನೋವಾಗಿರುವ ನಡುವೆಯೇ, ಮಹಾಮೈತ್ರಿಯೊಳಗಿನ ಪಕ್ಷಗಳ ನಡುವೆಯೂ ಸೀಟು ಹಂಚಿಕೆ ವಿಚಾರ ತಲೆಎತ್ತತೊಡಗಿದೆ. ಆರ್‌ಜೆಡಿ, ಕಾಂಗ್ರೆಸ್‌, ಎನ್‌ಸಿಪಿ, ಎಚ್‌ಎಎಂ(ಹಿಂದುಸ್ತಾನಿ ಅವಾಮ್‌ ಮೋರ್ಚಾ), ಎಡಪಕ್ಷಗಳು ಒಂದಾಗಿ ಲೋಕಸಭೆ ಚುನಾವಣೆಯಲ್ಲಿ ಮಹಾ ಘಟಬಂಧನ್‌ ಮೂಲಕವೇ ಬಿಜೆಪಿಯನ್ನು ಎದುರಿಸಲು ತಯಾರಿ ನಡೆಸುತ್ತಿವೆ. ಈ ಎಲ್ಲ ಪಕ್ಷಗಳ ಹಿರಿಯ ನಾಯಕರು ಈಗಾಗಲೇ ರಹಸ್ಯ ಸಭೆಗಳನ್ನು ಆಯೋಜಿಸಿ, ಸೀಟು ಹಂಚಿಕೆ ಕುರಿತು ಚರ್ಚೆಯನ್ನೂ ನಡೆಸುತ್ತಿದ್ದಾರೆ. ಮೂಲಗಳು ಹೇಳುವಂತೆ, ಒಟ್ಟು 40 ಕ್ಷೇತ್ರಗಳ ಪೈಕಿ ಅರ್ಧದಷ್ಟನ್ನು ಇಟ್ಟುಕೊಳ್ಳಲು ಆರ್‌ಜೆಡಿ ನಿರ್ಧರಿಸಿದೆ. ಕಾಂಗ್ರೆಸ್‌ಗೆ 10, ಎಚ್‌ಎಎಂ ಮತ್ತು ಆರ್‌ಎಲ್‌ಎಸ್‌ಪಿ ತಲಾ 4, ಎನ್‌ಸಿಪಿ ಮತ್ತು ಎಡಪಕ್ಷಕ್ಕೆ ತಲಾ ಒಂದು ಸೀಟುಗಳನ್ನು ನೀಡುವುದು ಆರ್‌ಜೆಡಿ ಲೆಕ್ಕಾಚಾರ. ಇದರ ನಡುವೆಯೇ, ಕಾಂಗ್ರೆಸ್‌ ಇದೀಗ ಹೆಚ್ಚುವರಿ ಸೀಟುಗಳಿಗಾಗಿ ಬೇಡಿಕೆ ಇಟ್ಟಿದೆ. 12ಕ್ಕೂ ಹೆಚ್ಚು ಸ್ಥಾನಗಳನ್ನು ನಮಗೆ ಕೊಡಬೇಕು ಎಂದು ಕೇಳುತ್ತಿದೆ ಎನ್ನಲಾಗಿದೆ. 

ಆಪ್ತನ ವಜಾ ಮಾಡಿದ ಮಾಯಾವತಿ 
ಪ್ರಧಾನಿ ಮೋದಿ ಹಾಗೂ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಅವಹೇಳನ ಕಾರಿ ಹೇಳಿಕೆ ನೀಡಿದ ತಮ್ಮ ಆಪ್ತನನ್ನೇ ಬಿಎಸ್‌ಪಿ ನಾಯಕಿ ಮಾಯಾವತಿ ವಜಾ ಮಾಡಿದ್ದಾರೆ. ಇತ್ತೀಚೆಗಷ್ಟೇ ರಾಹುಲ್‌ ಅವರ ಇಟಲಿ ಮೂಲದ ಬಗ್ಗೆ ಪ್ರಶ್ನಿಸಿದ್ದ ಜೈ ಪ್ರಕಾಶ್‌ ಸಿಂಗ್‌ರನ್ನು ಪಕ್ಷದ ಪ್ರಮುಖ ಹುದ್ದೆಯಿಂದ ಅಮಾನತು ಮಾಡ ಲಾಗಿತ್ತು. ತದನಂತರ ಅವರು ಪ್ರಧಾನಿ ಮೋದಿ ಯನ್ನು ಗಬ್ಬರ್‌ ಸಿಂಗ್‌ ಎಂದು ಕರೆದಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದಲೇ ವಜಾ ಮಾಡಲಾಗಿದೆ. ಲೋಕಸಭೆ ಚುನಾವಣೆಗೆ ಮಹಾಮೈತ್ರಿ ಮಾಡಿಕೊಳ್ಳಲು ಪಕ್ಷ ಮುಂದಾಗಿರುವ ವೇಳೆ, ಯಾರೂ ಯಾರ ಬಗ್ಗೆಯೂ ಆಕ್ಷೇಪಾರ್ಹ ಹೇಳಿಕೆ ನೀಡುವಂತಿಲ್ಲ. ನೀಡಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಈಗಾಗಲೇ ಮಾಯಾವತಿ ಆದೇಶ ಹೊರಡಿಸಿದ್ದಾರೆ. ಇದರ ಹೊರತಾಗಿಯೂ ಸಿಂಗ್‌ ಈ ಹೇಳಿಕೆ ನೀಡಿದ್ದಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಸ್‌ಪಿ ಮೂಲಗಳು 
ತಿಳಿಸಿವೆ.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.