ಅನ್ಸಾರಿ ಪಾಕ್ ನಂಟು; ಬಿಜೆಪಿಯಿಂದ ಫೋಟೋ ಬಿಡುಗಡೆ
ಪಾಕ್ ಪತ್ರಕರ್ತನೊಂದಿಗೆ ಮಾಜಿ ಉಪರಾಷ್ಟ್ರಪತಿ ವೇದಿಕೆ ಹಂಚಿಕೊಂಡಿದ್ದ ಫೋಟೋ
Team Udayavani, Jul 15, 2022, 8:21 PM IST
ನವದೆಹಲಿ: ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರಿಗೆ ಪಾಕ್ನ ಪತ್ರಕರ್ತರೊಬ್ಬರೊಂದಿಗೆ ನಂಟಿತ್ತು ಎಂಬ ಬಿಜೆಪಿ ಆರೋಪವನ್ನು ಅನ್ಸಾರಿ ಅಲ್ಲಗಳೆದ ಬೆನ್ನಲ್ಲೇ, ಬಿಜೆಪಿ ಅದಕ್ಕೆ ಸಾಕ್ಷ್ಯವೊಂದನ್ನು ನೀಡಿದೆ. ಅನ್ಸಾರಿ ಹಾಗೂ ಪಾಕ್ ಪತ್ರಕರ್ತ ಕಾರ್ಯಕ್ರಮವೊಂದರಲ್ಲಿ ವೇದಿಕೆ ಹಂಚಿಕೊಂಡಿರುವ ಫೋಟೋವನ್ನು ಶುಕ್ರವಾರ ಬಿಜೆಪಿ ಬಿಡುಗಡೆ ಮಾಡಿದೆ.
ನವದೆಹಲಿಯಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ, 2009ರಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಸಮ್ಮೇಳನದಲ್ಲಿ ಅನ್ಸಾರಿ ಹಾಗೂ ಪತ್ರಕರ್ತ ನುಸ್ರತ್ ಮಿರ್ಜಾ ಒಂದೇ ವೇದಿಕೆಯಲ್ಲಿ ಕುಳಿತಿರುವ ಫೋಟೋವನ್ನು ಬಹಿರಂಗಪಡಿಸಿದ್ದಾರೆ. ಜತೆಗೆ, ಸಾಂವಿಧಾನಿಕ ಹುದ್ದೆ ಹೊಂದಿರುವ ಜನರು ಜವಾಬ್ದಾರಿಯುತವಾಗಿ ವರ್ತಿಸಬೇಕು. ಅವರು ಮಿರ್ಜಾ ಜೊತೆ ವೇದಿಕೆ ಹಂಚಿಕೊಳ್ಳಬಾರದಿತ್ತು ಎಂದೂ ಹೇಳಿದ್ದಾರೆ.
“ನಾನು ಅನ್ಸಾರಿ ಅವರ ಆಹ್ವಾನದ ಮೇರೆಗೆ ಯುಪಿಎ ಆಡಳಿತದ ಅವಧಿಯಲ್ಲಿ 5 ಬಾರಿ ಭಾರತಕ್ಕೆ ಭೇಟಿ ನೀಡಿದ್ದೆ. ಭಾರತದಲ್ಲಿ ಸಂಗ್ರಹಿಸಿದ ಹಲವು ಸೂಕ್ಷ್ಮ ಮಾಹಿತಿಗಳನ್ನು ನಾನು ನಮ್ಮ ದೇಶದ ಐಎಸ್ಐಗೆ ಹಸ್ತಾಂತರಿಸಿದ್ದೆ’ ಎಂದು ಮಿರ್ಜಾ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಹೇಳಿದ್ದರು.
ಆದರೆ, ಈ ಆರೋಪ ಅಲ್ಲಗಳೆದಿದ್ದ ಅನ್ಸಾರಿ ಅವರು, “ಇದೆಲ್ಲ ಸುಳ್ಳಿನ ಸರಮಾಲೆ. ನಾನು ಯಾವ ಪತ್ರಕರ್ತನನ್ನೂ ಆಹ್ವಾನಿಸಿರಲಿಲ್ಲ, ಭೇಟಿಯೂ ಆಗಿರಲಿಲ್ಲ’ ಎಂದಿದ್ದರು.
आतंकवाद के विषय पर आयोजित एक अंतरराष्ट्रीय कांफ्रेंस की तस्वीर में दिख रहा है कि बीच में हामिद अंसारी जी बैठे हैं, उसी मंच पर पाकिस्तान के बहरूपिया पत्रकार, पाकिस्तान का एजेंट नुसरत मिर्जा भी बैठा है।
– श्री @gauravbh pic.twitter.com/zCDfM9Mlgy
— BJP (@BJP4India) July 15, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ