ಮೂರೂ ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಸರಕಾರ: ರಿಜಿಜು ವಿಶ್ವಾಸ
Team Udayavani, Mar 3, 2018, 11:09 AM IST
ಹೊಸದಿಲ್ಲಿ : ತ್ರಿಪುರ, ಮೇಘಾಲಯ ಮತ್ತು ನಾಗಾಲ್ಯಾಂಡ್ ಅಸೆಂಬ್ಲಿ ಚುನಾವಣೆಗಳಲ್ಲಿ ಬಿಜೆಪಿಯೇ ಜಯ ಗಳಿಸಿ ಸರಕಾರ ಮಾಡುವುದು ಖಚಿತ ಎಂಬ ವಿಶ್ವಾಸವನ್ನು ಕೇಂದ್ರ ಗೃಹ ಸಹಾಯಕ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಈ ಮೂರು ರಾಜ್ಯಗಳ ಚುನಾವಣಾ ಫಲಿತಾಂಶವು ಈಶಾನ್ಯ ಭಾರತದ ರಾಜಕೀಯ ನಕ್ಷೆಯನ್ನು ಬದಲಸಲಿದೆ ಮಾತ್ರವಲ್ಲ ಅದು ರಾಷ್ಟ ರಾಜಕೀಯ ರಂಗದ ಸ್ವರೂಪವನ್ನು ಕೂಡ ಬದಲಾಯಿಸಲಿದೆ ಎಂದು ರಿಜಿಜು ಹೇಳಿದರು.
2019ರಲ್ಲಿ ನಡೆಯುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಕೂಡ ರಿಜಿಜು ಈ ಮಾತುಗಳನ್ನು ಹೇಳಿದರು.
ಈಗ ಗೊತ್ತಾಗಿರುವ ಟ್ರೆಂಡ್ ಪ್ರಕಾರ ನಾಗಾಲ್ಯಾಂಡ್ ಮತ್ತು ತ್ರಿಪುರದಲ್ಲಿ ಅತ್ಯಂತ ನಿಕಟ ಸ್ಪರ್ಧೆ ಏರ್ಪಡುತ್ತಿದೆ. ತ್ರಿಪುರದಲ್ಲಿ ಬಿಜೆಪಿ ಮತ್ತು ಸಿಪಿಎಂ ನಡುವೆ ಕತ್ತುಕತ್ತಿನ ಹೋರಾಟ ಸಾಗಿದೆ.
ನಾಗಾಲ್ಯಾಂಡ್ನಲ್ಲಿ ಬಿಜೆಪಿ ಮತ್ತು ಎನ್ಪಿಎಫ್ ನಡುವೆ ನಿಕಟ ಸ್ಪರ್ಧೆ ಸಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಈ ಮೂರು ರಾಜ್ಯಗಳಲ್ಲಿ ಸ್ಪಷ್ಟ ಟ್ರೆಂಡ್ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ