ಇದು ಕರ್ನಾಟಕ ರಾಜಕೀಯಕ್ಕೆ ಶುಭ ಸಂಕೇತ: ಅಮಿತ್ ಶಾ
Team Udayavani, Feb 14, 2023, 6:19 PM IST
ಹೊಸದಿಲ್ಲಿ: ಕರ್ನಾಟಕದಲ್ಲಿ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ. ನಾನು ಅಲ್ಲಿನ ಜನರ ಭಾವನೆಗಳನ್ನು ನೋಡಿದ್ದೇನೆ ಮತ್ತು ಜನಸಾಮಾನ್ಯರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯನ್ನು ಸಹ ನೋಡಿದ್ದೇನೆ ಎಂದು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಹೇಳಿದರು.
ಸಂದರ್ಶನದಲ್ಲಿ ಮಾತನಾಡಿರುವ ಅವರು ನಾನು ಕರ್ನಾಟಕದಲ್ಲಿ ಕಳೆದೆರಡು ತಿಂಗಳಲ್ಲಿ ಐದು ಬಾರಿ ಹೋಗಿ ಬಂದೆ. ಜನರ ನಾಡಿಮಿಡಿತವನ್ನು ಅರ್ಥ ಮಾಡಿಕೊಂಡಿದ್ದೇನೆ, ಮೋದಿ ಜನಪ್ರಿಯತೆಯನ್ನು ಕಣ್ಣಾರೆ ಕಂಡಿದ್ದೇನೆ. ಅಲ್ಲಿ ತುಂಬಾ ದೊಡ್ಡ ಮಟ್ಟದ ಬಹುಮತವು ಬಿಜೆಪಿಗೆ ಸಿಗಲಿದೆ ಎಂದಿದ್ದಾರೆ.
ಇದನ್ನೂ ಓದಿ:ವನಿತಾ ಟಿ20 ವಿಶ್ವಕಪ್ ದೊಡ್ಡ ಅಂತರದಲ್ಲಿ ಗೆದ್ದ ದಕ್ಷಿಣ ಆಫ್ರಿಕಾ
ನಾನು ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕಕ್ಕೆ ಹೋಗಿ ಬಂದಿದ್ದೇನೆ. ಮಂಡ್ಯಕ್ಕೂ ಹೋಗಿ ಬಂದಿದ್ದೇನೆ. ಅಲ್ಲಿ ಎಂದೂ ಆಗಿರದಂತಹ ದೊಡ್ಡ ಸಮಾವೇಶ ನಡೆದಿದೆ. ಮಂಡ್ಯದ ಜನತೆಯೂ ಪರಿವಾರವಾದಿ ಪಕ್ಷಗಳಿಂದ ದೂರವಾಗಿದ್ದಾರೆ. ಬಿಜೆಪಿಯ ಅಭಿವೃದ್ಧಿ ರಾಜಕೀಯವನ್ನು ಒಪ್ಪಿಕೊಳ್ಳುತ್ತಿದ್ದಾರೆ. ಇದು ಕರ್ನಾಟಕ ರಾಜಕೀಯಕ್ಕೆ ಶುಭ ಸಂಕೇತ ಎಂದು ಅಮಿತ್ ಶಾ ಹೇಳಿದರು.
ಕರ್ನಾಟಕದಲ್ಲಿ ಬಿಜೆಪಿ ಈ ಬಾರಿ ಪ್ರಚಂಡ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ.
BJP will form the government with a thumping majority in Karnataka.
I have seen people’s sentiments there and also the unparalleled popularity of PM @narendramodi Ji among the masses. pic.twitter.com/1LDJWb1Ncl— Amit Shah (@AmitShah) February 14, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ
Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ