ಬಿಹಾರ ಉಪಚುನಾವಣೆ: ಆಡಳಿತಾರೂಢ ಮಹಾಘಟಬಂಧನ್ಗೆ ಆಘಾತ
ಕ್ಷೇತ್ರವನ್ನು ವಶಪಡಿಸಿಕೊಂಡ ಬಿಜೆಪಿ
Team Udayavani, Dec 8, 2022, 3:19 PM IST
ಪಾಟ್ನಾ : ಬಿಹಾರದಲ್ಲಿ ನಡೆದ ಒಂದು ಕ್ಷೇತ್ರದ ವಿಧಾನ ಸಭಾ ಉಪಚುನಾವಣೆಯಲ್ಲಿ ಆಡಳಿತಾರೂಢ ಮಹಾಘಟಬಂಧನ್ ಮುಖಭಂಗ ಅನುಭವಿಸಿದ್ದು, ಕುರ್ಹಾನಿ ಕ್ಷೇತ್ರವನ್ನು ಬಿಜೆಪಿ ವಶಪಡಿಸಿಕೊಂಡಿದೆ
ಬಿಹಾರದ ಆಡಳಿತಾರೂಢ ಜೆಡಿಯು ಮತ್ತು ಆರ್ ಜೆಡಿ ಮೈತ್ರಿಕೂಟ ಕಣಕ್ಕಿಳಿಸಿದ್ದ ಜೆಡಿಯುನ ಮನೋಜ್ ಸಿಂಗ್ ಕುಶ್ವಾಹಾ ಅವರನ್ನು ಬಿಜೆಪಿ ಅಭ್ಯರ್ಥಿ ಕೇದಾರ್ ಪ್ರಸಾದ್ ಗುಪ್ತಾ 3,645 ಮತಗಳಿಂದ ಸೋಲಿಸಿದ್ದಾರೆ. ಅಭ್ಯರ್ಥಿ ಸೋತಿರುವುದು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಹಿನ್ನಡೆಯಾಗಿದೆ. ಬಿಜೆಪಿಯಿಂದ ಮೈತ್ರಿ ಕಡಿದುಕೊಂಡ ಬಳಿಕ ಜೆಡಿಯು ಸೋಲಿನ ಮೂಲಕ ಬಿಜೆಪಿಯಿಂದ ದೊಡ್ಡ ಶಾಕ್ ಪಡೆದಿದೆ. ಕ್ಷೇತ್ರದಲ್ಲಿ ಬಿಹಾರ ಉಪ ಮುಖ್ಯಮಂತ್ರಿ, ಆರ್ ಜೇಡಿ ನಾಯಕ ತೇಜಸ್ವಿ ಯಾದವ್ ಕೂಡ ಭರ್ಜರಿ ಪ್ರಚಾರ ನಡೆಸಿದ್ದರು.
ಆರ್ ಜೆಡಿ ಶಾಸಕ ಅನಿಲ್ ಸಾಹ್ನಿ ಅವರ ಸದಸ್ಯತ್ವವನ್ನು ರದ್ದುಗೊಳಿಸಲಾಗಿದ್ದರಿಂದ ಉಪ ಚುನಾವಣೆ ಎದುರಾಗಿತ್ತು. LTC ಹಗರಣ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡುಬಂದ ಕಾರಣ ಸಾಹ್ನಿ ಅವರ ಸದಸ್ಯತ್ವ ರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!