ಔಟ್‌ಆಫ್ ಔಟ್‌! ತವರುಮನೆ ಉಡುಗೊರೆ


Team Udayavani, May 24, 2019, 1:04 PM IST

gjujarth-bk

ಹೇಳಿ ಕೇಳಿ ಇದು ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯ. ಅಂದ ಮೇಲೆ ಕೇಳಬೇಕೇ? ಕಳೆದ ಬಾರಿಯಂತೆ ಈ ಬಾರಿಯೂ ಈ ರಾಜ್ಯ ಸಹಜವಾಗಿಯೇ ಪ್ರಾಮುಖ್ಯತೆ ಪಡೆದಿತ್ತು. ಜತೆಗೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರೇ ಗಾಂಧಿನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದರಿಂದ ಗಮ್ಮತ್ತು ಮತ್ತಷ್ಟು ಹೆಚ್ಚಾಗಿತ್ತು.

ಕಳೆದ ಬಾರಿ ಈ ಕ್ಷೇತ್ರದಿಂದ ಎಲ್‌.ಕೆ. ಆಡ್ವಾಣಿ ಗೆಲುವು ಪಡೆದಿದ್ದರು. ಅಲ್ಲದೆ, ಕಳೆದ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 26 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿಯೇ ಗೆಲುವಿನ ಪತಾಕೆ ಹಾರಿಸಿತ್ತು. ಈ ಬಾರಿಯೂ ಅದೇ ಸಾಧನೆಯನ್ನು ಕೇಸರಿ ಪಕ್ಷ ಪುನರಾವರ್ತಿಸಿದೆ.

ಬಿಜೆಪಿಯ ಈ ಮತ್ತೂಂದು ಮಹೋನ್ನತ ಸಾಧನೆಗೆ ಆ ರಾಜ್ಯದಲ್ಲಿ ಕಳೆದೆರಡು ದಶಕಗಳಿಂದ ಹರಡಿರುವ ಮೋದಿ ಅಲೆಯೇ ಕಾರಣ. ಜತೆಗೆ, ಅಲ್ಲಿ ಆಡಳಿತಾರೂಢ ವಿಜಯ್‌ ರುಪಾನಿ (ಬಿಜೆಪಿ) ಸರ್ಕಾರವೂ, ಮೋದಿಯವರು ಮುಖ್ಯಮಂತ್ರಿ­ಯಾಗಿದ್ದಾಗ ಕಟ್ಟಿಕೊಟ್ಟಿದ್ದ ಬಿಜೆಪಿ ವರ್ಚಸ್ಸನ್ನು ಕಾಯ್ದುಕೊಂಡು ಹೋಗುವಲ್ಲಿ ಯಶಸ್ವಿಯಾಗಿದೆ.  ಇಲ್ಲಿ ಉಲ್ಲೇಖೀಸಲೇಬೇಕಾದ ಪ್ರಮುಖವಾದ ವಿಚಾರವೆಂದರೆ, ಜಿಎಸ್‌ಟಿ ಹಾಗೂ ನೋಟು ಅಮಾನ್ಯಗಳಂಥ ನಿರ್ಧಾರಗಳು ಗುಜರಾತ್‌ನ ವ್ಯಾಪಾರಿ ವಲಯದ ಅವಕೃಪೆಗೆ ಪಾತ್ರವಾಗಿಲ್ಲ ಎನ್ನುವುದು.

ಚುನಾವಣೆಗೂ ಪೂರ್ವದಲ್ಲಿ, ವಜ್ರ ವ್ಯಾಪಾರಿಗಳ ತವರೆನಿಸಿರುವ ಸೂರತ್‌ ಹಾಗೂ ಇನ್ನಿತರ ವ್ಯಾಪಾರಿ ವಲಯಗಳು ಮೋದಿ ಸರ್ಕಾರದ ಮೇಲೆ ಜಿಎಸ್‌ಟಿ, ನೋಟು ಅಮಾನ್ಯ ಕಾರಣಕ್ಕಾಗಿ ಮುನಿಸಿಕೊಂಡಿವೆ ಎಂದೂ, ಈ ಬಾರಿಯ ಚುನಾವಣೆಯಲ್ಲಿ ಅವು ಬಿಜೆಪಿ ಕೈಕೊಡುತ್ತವೆ ಎಂದೂ ವಿಶ್ಲೇಷಿಸಲಾಗಿತ್ತು. ಆದರೆ, ಅದು ನಿಜವಾಗಿಲ್ಲ.

ಮಹಿಳಾ ಕೃಪೆ!
ಗುಜರಾತ್‌ ಗಣನೀಯ ಸಂಖ್ಯೆಯ ಮಹಿಳಾ ಮತದಾರರನ್ನು ಹೊಂದಿದೆ. ಒಟ್ಟು 4.47 ಕೋಟಿ ಮತದಾರರಿರುವ ಆ ರಾಜ್ಯದಲ್ಲಿ 2.32 ಕೋಟಿಯಷ್ಟು ಪುರುಷ ಮತದಾರರಿದ್ದರೆ, 2.14 ಕೋಟಿಯಷ್ಟು ಮಹಿಳಾ ಮತದಾರರಿದ್ದಾರೆ. ಅಂದರೆ, ಅವರ ಪ್ರಮಾಣ ಶೇ. 47.87ರಷ್ಟು ! ಹಾಗಾಗಿ, ಗುಜರಾತ್‌ ಸಂಸದರ ಆಯ್ಕೆಯಲ್ಲಿ ಈ ಬಾರಿ ಮಹಿಳೆಯರ ಪಾತ್ರವೂ ಮಹತ್ವದ್ದಾಗಿದ್ದು, ಅವರ ಕೃಪೆಯೂ ಬಿಜೆಪಿಗೆ ಸಿಕ್ಕಿದೆ ಎನ್ನಲಾಗಿದೆ.

ಮೊದಲ “ಲೋಕ’ ಪ್ರವೇಶ
ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿಯವರ ಭದ್ರಕೋಟೆಯಾಗಿದ್ದ ಗಾಂಧಿನಗರ ಕ್ಷೇತ್ರದಿಂದ ಈ ಬಾರಿ ಸ್ಪರ್ಧಿಸುವ ಮೂಲಕ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ, ಲೋಕಸಭಾ ಚುನಾವಣೆಯ ಅಖಾಡಕ್ಕೆ ಇಳಿದಿದ್ದರು. ನಿರೀಕ್ಷೆಯಂತೆ ಅಲ್ಲಿ ಅವರು ಜಯ ಸಾಧಿಸಿದ್ದಾರೆ. ಆ ಮೂಲಕ, ಅವರು ತಮ್ಮ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿಗೆ ಲೋಕಸಭೆಗೆ ಪದಾರ್ಪಣೆ ಮಾಡಿದ್ದಾರೆ.

ಕಳೆದ ಬಾರಿಯಂತೆ ಈ ಬಾರಿಯ ಚುನಾವಣೆಯಲ್ಲೂ ಎಲ್ಲಾ ಕ್ಷೇತ್ರಗಳಲ್ಲೂ ಗೆಲುವು ನೀಡಿದ ಗುಜರಾತ್‌ ಜನತೆಗೆ ಅನಂತ ಧನ್ಯವಾದ.
ವಿಜಯ್‌ ರುಪಾನಿ, ಗುಜರಾತ್‌ ಸಿಎಂ

ಗುಜರಾತ್‌ನಲ್ಲಿ ನಮ್ಮ ಸೋಲನ್ನು ಒಪ್ಪಿಕೊಳ್ಳುತ್ತೇವೆ. ಆದರೆ, ಸರ್ಕಾರದ ವೈಫ‌ಲ್ಯಗಳ ವಿರುದ್ಧ ಸದನದಲ್ಲಿ ಪ್ರಶ್ನಿಸುವುದನ್ನು ಮುಂದುವರಿಸುತ್ತೇವೆ.
ಅಮಿತ್‌ ಚಾವ್ಲಾ, ಗುಜರಾತ್‌ ಕಾಂ.ಅಧ್ಯಕ್ಷ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.