ಬಿಜೆಪಿಯ ಅನ್ವರ್ಥನಾಮ ವೆಂಕಯ್ಯ ನಾಯ್ಡು ಭಾರತದ ನೂತನ ಉಪ ರಾಷ್ಟ್ರಪತಿ
Team Udayavani, Aug 5, 2017, 7:41 PM IST
ಹೊಸದಿಲ್ಲಿ : ಎನ್ಡಿಎ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿಯಾಗಿ ಚುನಾಯಿತರಾದ ಬಳಿಕ ಇದೀಗ ಮತ್ತೋರ್ವ ಎನ್ಡಿಎ ಅಭ್ಯರ್ಥಿ, ಕೇಂದ್ರದ ಮಾಜಿ ಸಚಿವ, ಬಿಜೆಪಿಯ ಅನ್ವರ್ಥನಾಮ, ಎಂ ವೆಂಕಯ್ಯ ನಾಯ್ಡು ಅವರು ಇಂದು ಶನಿವಾರ ನಡೆದ ಚುನಾವಣೆಯಲ್ಲಿ ದೇಶದ 15ನೇ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.
ಒಟ್ಟು ಚಲಾಯಿಸಲ್ಪಟ್ಟ 760 ಮತಗಳಲ್ಲಿ ನಾಯ್ಡು ಅವರಿಗೆ 516 ಮತಗಳು ಲಭಿಸಿವೆ. ಅವರ ಪ್ರತಿಸ್ಪರ್ಧಿಯಾಗಿರುವ ವಿಪಕ್ಷಗಳ ಅಭ್ಯರ್ಥಿ, ಪಶ್ಚಿಮ ಬಂಗಾಲದ ಮಾಜಿ ರಾಜ್ಯಪಾಲ, ಗೋಪಾಲಕೃಷ್ಣ ಗಾಂಧಿ ಅವರಿಗೆ 244 ಮತಗಳ ಪ್ರಾಪ್ತವಾಗಿವೆ.
ನಾಯ್ಡು ಅವರು ಇಷ್ಟೊಂದು ದೊಡ್ಡ ಅಂತರದಲ್ಲಿ ಚುನಾಯಿತರಾಗುವುದನ್ನು ಸ್ವತಃ ಬಿಜೆಪಿಯೇ ನಿರೀಕ್ಷಿಸಿರಲಿಲ್ಲ. 19 ವಿರೋಧ ಪಕ್ಷಗಳು ವೆಂಕಯ್ಯ ನಾಯ್ಡು ಪರವಾಗಿಯೇ ಮತ ಹಾಕಿರುವುದಾಗಿ ವರದಿಗಳು ತಿಳಿಸಿವೆ.
ಎರಡು ಅವಧಿಯನ್ನು ಕಂಡಿರುವ ಹಾಲಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರ ಕಾರ್ಯಾವಧಿ ಇದೇ ಆಗಸ್ಟ್ 10ರಂದು ಮುಗಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್