ಕೇಂದ್ರ ಸಚಿವ ಸಂಪುಟಕ್ಕೆ ಇಬ್ಬರು ಟಿಡಿಪಿ ಸಚಿವರ ರಾಜೀನಾಮೆ
Team Udayavani, Mar 8, 2018, 7:16 PM IST
ಹೊಸದಿಲ್ಲಿ : ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕೊಡಬೇಕೆಂಬ ಬೇಡಿಕೆಯನ್ನು ಈಡೇರಿಸದ ಕಾರಣಕ್ಕೆ ಎನ್ಡಿಎ ಕೂಟದಿಂದ ಹೊರಬರುವ ಟಿಡಿಪಿ ನಿರ್ಧಾರಕ್ಕೆ ಅನುಗುಣವಾಗಿ ಇಂದು ಗುರುವಾರ ಸಂಜೆ ತೆಲುಗು ದೇಶಂ ಪಕ್ಷದ ಇಬ್ಬರು ಕೇಂದ್ರ ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು.
ದಿನದ ಉದ್ದಕ್ಕೂ ಇಂದು ಬಿಜೆಪಿ, ಟಿಡಿಪಿಯನ್ನು ತನ್ನ ತೆಕ್ಕೆಯೊಳಗೆ ಉಳಿಸಿಕೊಳ್ಳಲು ನಡೆಸಿದ ಪ್ರಯತ್ನಗಳೆಲ್ಲ ವಿಫಲವಾದವು.
ಕೇಂದ್ರ ಸಂಪುಟಕ್ಕೆ ರಾಜೀನಾಮೆ ನೀಡಿದ ಟಿಡಿಪಿ ಸಚಿವರೆಂದರೆ ನಾಗರಿಕ ವಾಯುಯಾನ ಸಚಿವ ಅಶೋಕ್ ಗಜಪತಿ ರಾಜು ಮತ್ತು ವಿಜ್ಞಾನ-ತಂತ್ರಜ್ಞಾನ ಖಾತೆಯ ಸಹಾಯಕ ಸಚಿವ ವೈ ಎಸ್ ಚೌಧರಿ.
ಎನ್ಡಿಎ ಸಚಿವ ಸಂಪುಟದಿಂದ ಹೊರಬರುವ ಟಿಡಿಪಿಯ ನಿರ್ಧಾರಕ್ಕೆ ಪ್ರತಿಯಾಗಿ ಇಂದು ಬೆಳಗ್ಗೆ ಇಬ್ಬರು ಬಿಜೆಪಿ ಸಚಿವರು ಆಂಧ್ರ ಸಚಿವ ಸಂಪುಟದಲ್ಲಿನ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
ತೆಲಂಗಾಣ ನೂತನ ರಾಜ್ಯ ರಚನೆಯಿಂದಾಗಿ ತನಗೆ ತೀವ್ರವಾದ ಆರ್ಥಿಕ ಹೊಡೆತ ಬಿದ್ದಿರುವುದರಿಂದ ವಿಶೇಷ ಸ್ಥಾನಮಾನದ ಮೂಲಕ ಕೇಂದ್ರದಿಂದ ರಾಜ್ಯಕ್ಕೆ ಆರ್ಥಿಕ ಬೆಂಬಲ ಪಡೆಯುವುದು ಅಗತ್ಯವಾಗಿದೆ ಎಂದು ಟಿಡಿಪಿ ಪದೇ ಪದೇ ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ