ಕಣ್ಣೂರು ಮಂಡಲ ಬಿಜೆಪಿ ಉಪಾಧ್ಯಕ್ಷನ ಮೇಲೆ ಮಾರಣಾಂತಿಕ ಹಲ್ಲೆ
Team Udayavani, Mar 9, 2017, 11:58 AM IST
ಕಣ್ಣೂರು : ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಪುನಃ ಇನ್ನೊಂದು ರಾಜಕೀಯ ಹಿಂಸೆಯ ಘಟನೆ ವರದಿಯಾಗಿದೆ. ಬಿಜೆಪಿಯ ಕಣ್ಣೂರು ಮಂಡಲದ ಉಪಾಧ್ಯಕ್ಷ ಸುಶೀಲ್ ಎಂಬವರ ಮೇಲೆ ಬುಧವಾರ ರಾತ್ರಿ ಓಲಶೆರಿ ಕಾವು ಎಂಬಲ್ಲಿ ಗಂಭೀರ ಹಲ್ಲೆ ನಡೆಸಲಾಗಿದೆ.
ಸುಶೀಲ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ; ಅವರ ದೇಹಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಕೇರಳದ ಕಣ್ಣೂರು ಜಿಲ್ಲೆಯು ರಾಜಕೀಯ ಕೊಲೆಗಳಿಗೆ ಕುಖ್ಯಾತವಾಗಿದೆ. ಇಲ್ಲಿ ಆಗೀಗ ಎಂಬಂತೆ ನಡೆಯುತ್ತಿರುವ ಬಿಜೆಪಿ – ಸಿಪಿಎಂ ಸಂಘರ್ಷಕ್ಕೆ ಉಭಯ ಪಕ್ಷಗಳ ಹಲವು ಕಾರ್ಯಕರ್ತರು ಬಲಿಯಾಗಿದ್ದಾರೆ.
ಕಣ್ಣೂರು ಮಂಡಲ ಉಪಾಧ್ಯಕ್ಷ ಸುಶೀಲ್ ಅವರ ಮೇಲಿನ ಹಲ್ಲೆಗೆ ಬಿಜೆಪಿಯು ಸಿಪಿಎಂ ಕಾರಣವೆಂದು ಆರೋಪಿಸಿದೆ. ಈ ಆರೋಪವನ್ನು ತಿರಸ್ಕರಿಸಿರುವ ಸಿಪಿಎಂ, “ಇದು ಬಿಜೆಪಿಯೊಳಗಿನ ಕಲಹ – ವೈಷಮ್ಯದ ಫಲವಾಗಿ ನಡೆದಿರುವ ಹಿಂಸೆಯಾಗಿದೆ’ ಎಂದು ಹೇಳಿದೆ.
2016ರ ಮೇ ತಿಂಗಳಲ್ಲಿ ನಡೆದಿದ್ದ ಕೇರಳ ವಿಧಾನಸಭಾ ಚುನಾವಣೆಗಳಲ್ಲಿ ಎಲ್ಡಿಎಫ್ ನೇತೃತ್ವದ ಸಿಪಿಐ ಎಂ ಅಧಿಕಾರಕ್ಕೆ ಮರಳಿತ್ತು. ಆರ್ಎಸ್ಎಸ್ ಕಣ್ಣೂರು ಜಿಲ್ಲೆಯಲ್ಲಿ ಉದ್ದೇಶಪೂರ್ವಕವಾಗಿ ಅಶಾಂತಿಯನ್ನು ಸೃಷ್ಟಿಸುತ್ತಿದೆ ಎಂದು ವಿಜಯನ್ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್