ಪರಿಶಿಷ್ಟರ ಸೆಳೆಯಲು ಬಿಜೆಪಿ ಹೊಸ ಗುರಿ: ನಡ್ಡಾ ನೇತೃತ್ವದಲ್ಲಿ ವಿಶೇಷ ಸಭೆ
ಬಿಜೆಪಿ ದಲಿತ ಸಂಸದರು, ಮೋರ್ಚಾಗಳ ಪದಾಧಿಕಾರಿಗಳು ಭಾಗಿ
Team Udayavani, May 17, 2022, 9:36 PM IST
ನವದೆಹಲಿ: ದೇಶದ ಪರಿಶಿಷ್ಟ ಜಾತಿ, ಪರಿಶಿಷ್ಟ ಸಮುದಾಯಗಳನ್ನು ಮುಟ್ಟುವಲ್ಲಿ ಬಿಜೆಪಿ ಅಳವಡಿಸಿಕೊಳ್ಳಬಹುದಾದ ಕಾರ್ಯತಂತ್ರಗಳ ಕುರಿತಂತೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರು, ವಿವಿಧ ರಾಜ್ಯಗಳ ಬಿಜೆಪಿಯ ದಲಿತ ಸಂಸದರು ಹಾಗೂ ಬಿಜೆಪಿ ದಲಿತ ಮೋರ್ಚಾಗಳ ಪದಾಧಿಕಾರಿಗಳ ಜತೆಗೆ ವಿಶೇಷ ಸಭೆ ನಡೆಸಿದ್ದಾರೆ.
ಸಭೆಯಲ್ಲಿ, ಬಿಜೆಪಿಯ ಯಾವುದಾದರೊಂದು ಅಭಿವೃದ್ಧಿ ಯೋಜನೆಯನ್ನು ಆಯ್ದುಕೊಂಡು ತಮ್ಮ ಪ್ರಾಂತ್ಯಗಳಲ್ಲಿರುವ ಪರಿಶಿಷ್ಟ ಸಮುದಾಯಕ್ಕೆ ಅದನ್ನು ಯಶಸ್ವಿಯಾಗಿ ಮುಟ್ಟಿಸಬೇಕೆಂಬ ಗುರಿಯನ್ನು ನೀಡಲಾಯಿತು. ಅಲ್ಲದೆ, ಕೇಂದ್ರದಿಂದ ಪರಿಶಿಷ್ಟ ಸಮುದಾಯಗಳಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಅವರಲ್ಲಿ ಅರಿವು ಮೂಡಿಸುವ ಪ್ರಯತ್ನ ಮಾಡಬೇಕೆಂದು ಹೇಳಲಾಯಿತು.
ಇದನ್ನೂ ಓದಿ :ಸುಪ್ರೀಂಗೆ ಅರ್ಜಿ ಹಾಕಿದ ವಕೀಲರಿಗೆ 8 ಲಕ್ಷ ರೂ. ದಂಡ
ಇದರ ಜೊತೆಯಲ್ಲೇ, ಬಿಜೆಪಿ ಸರ್ಕಾರವು ಪರಿಶಿಷ್ಟರಿಗಾಗಿ ಮೀಸಲಾಗಿಟ್ಟಿರುವ ಯೋಜನೆಗಳ ಬಗ್ಗೆ ಕಾಂಗ್ರೆಸ್ ಯಾವ ರೀತಿ ಅಪಪ್ರಚಾರ ಮಾಡುತ್ತಿದೆ ಎಂಬುದನ್ನೂ ಪರಿಶಿಷ್ಟ ಸಮುದಾಯಗಳಿಗೆ ತಲುಪಿಸಬೇಕು ಎಂದು ಸಭೆಯಲ್ಲಿ ಭಾಗವಹಿಸಿದ್ದ ದಲಿತ ಸಮುದಾಯದ ಸಂಸದರು, ಪ್ರತಿನಿಧಿಗಳಿಗೆ ಸೂಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ