ಫಿಫಾದಲ್ಲಿ ಝಕೀರ್ ನಾಯ್ಕಗೆ ಆತಿಥ್ಯ: ಕೇಂದ್ರ ಅಸಮಾಧಾನ
ರಾಜತಾಂತ್ರಿಕ ಮಾರ್ಗದಲ್ಲಿ ಪ್ರಶ್ನಿಸಲು ಚಿಂತನೆ
Team Udayavani, Nov 23, 2022, 6:40 AM IST
ನವದೆಹಲಿ: ಭಾರತ ಮತ್ತು ಬಾಂಗ್ಲಾದೇಶ ತನಿಖಾ ಸಂಸ್ಥೆಗಳಿಗೆ ಬೇಕಾಗಿರುವ ಇಸ್ಲಾಮಿಕ್ ಧಾರ್ಮಿಕ ವಿದ್ವಾಂಸ ಡಾ.ಜಕೀರ್ ನಾಯ್ಕಗೆ ಕತಾರ್ ವಿಶೇಷ ಆತಿಥ್ಯ ನೀಡಿರುವುದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಪಕ್ಷದ ವಕ್ತಾರ ಸವಿಯೋ ರೋಡ್ರಿಗಸ್ ಮಾತನಾಡಿ ದೇಶದ ಫುಟ್ಬಾಲ್ ಆಟಗಾರರು ಪಂದ್ಯಾವಳಿ ಬಹಿಷ್ಕರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಭಯೋತ್ಪಾದನೆ ಎಂಬ ಪಿಡುಗಿನಿಂದ ಜಗತ್ತು ನರಳುತ್ತಿರುವಾಗ ಜಕೀರ್ ನಾಯ್ಕಗೆ ಕತಾರ್ ಸರ್ಕಾರ ಆಹ್ವಾನ ನೀಡಿರುವುದು ಖಂಡನೀಯ.
ದ್ವೇಷವನ್ನು ಪಸರಿಸುವ ವ್ಯಕ್ತಿಗೆ ಆಹ್ವಾನ ನೀಡಿದ್ದು ಪ್ರಶ್ನಾರ್ಹ. ಭಾರತದ ಕಾನೂನಿನ ಅನ್ವಯ ಆತನ ವಿರುದ್ಧ ದ್ವೇಷ ಪೂರಿತ ಭಾಷಣಗಳಿಗೆ ವಿತ್ತೀಯ ನೆರವು ನೀಡಿದ ಆರೋಪಗಳಿವೆ. ಜತೆಗೆ ಉಗ್ರರ ಬಗ್ಗೆ ಸಹಾನುಭೂತಿ ಹೊಂದಿರುವಾತ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದೇ ವೇಳೆ, ಫಿಫಾ ಕಾರ್ಯಕ್ರಮದಲ್ಲಿ ಡಾ.ಜಕೀರ್ ನಾಯ್ಕ ಉಪಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರಕ್ಕೂ ಅಸಮಾಧಾನ ತಂದಿದೆ. ಉಧಾ^ಟನಾ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಕೂಡ ಇದ್ದರು. ವೆಂಕಯ್ಯ ನಾಯ್ಡು ಉಪರಾಷ್ಟ್ರಪತಿಯಾಗಿದ್ದಾಗ ಕೂಡ ಕತಾರ್ ಸರ್ಕಾರ ನಾಯ್ಕನನ್ನು ಆಹ್ವಾನಿಸಿತ್ತು.
ಟ್ವಿಟರ್ನಲ್ಲಿ ಕೂಡ ಇದೊಂದು ಟ್ರೆಂಡಿಂಗ್ ಆಗಿದ್ದು, ಕೇಂದ್ರ ಸರ್ಕಾರದ ಮೌನದ ಬಗ್ಗೆ ಪ್ರಶ್ನಿಸಲಾಗಿದೆ. ನೂಪುರ್ ಶರ್ಮಾ ಹೇಳಿಕೆಯ ಬಗ್ಗೆ ತಕರಾರು ತೆಗಿದ್ದ ಕತಾರ್ ಜತೆಗೆ ಪ್ರಶ್ನಿಸಬೇಕು ಎಂದೂ ಒತ್ತಾಯಿಸಲಾಗಿದೆ.
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಜಕೀರ್ ನಾಯ್ಕ ಉಪಸ್ಥಿತಿ ಬಗ್ಗೆ ಕತಾರ್ ಸರ್ಕಾರದ ಜತೆಗೆ ಪ್ರಸ್ತಾಪ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ “ಇದುವರೆಗೆ ಇಂಥ ದುರ್ಬಲ ಸರ್ಕಾರ ನೋಡಿಲ್ಲ’ ಎಂದು ಆಕ್ಷೇಪ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ