2019ರ ಚುನಾವಣೆಗೆ ಅಕ್ಷಯ್‌, ನಾನಾ ಸ್ಪರ್ಧೆ?


Team Udayavani, Jul 16, 2018, 10:27 AM IST

akshay-nana-16-7.jpg

ಹೊಸದಿಲ್ಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸಂಖ್ಯೆಯಲ್ಲಿ ಬಾಲಿವುಡ್‌, ಕ್ರೀಡಾ ಕ್ಷೇತ್ರದ ಗಣ್ಯರನ್ನು ಕಣಕ್ಕೆ ಇಳಿಸುವ ಇರಾದೆಯಲ್ಲಿದೆ. ಅದಕ್ಕೆ ಪೂರಕವಾಗಿ ಬಾಲಿವುಡ್‌ ನಟರಾದ ಅಕ್ಷಯ್‌ ಕುಮಾರ್‌, ಅನುಪಮ್‌ ಖೇರ್‌, ನಾನಾ ಪಾಟೇಕರ್‌ ಗೆ ಟಿಕೆಟ್‌ ನೀಡುವ ಸಾಧ್ಯತೆ ಇದೆ.

ಅಕ್ಷಯ ಕುಮಾರ್‌ ಅವರನ್ನು ಪಂಜಾಬ್‌ ಅಥವಾ ದಿಲ್ಲಿ, ಪಾಟೇಕರ್‌ ಅವರನ್ನು ಮಹಾರಾಷ್ಟ್ರ ಮತ್ತು ಖೇರ್‌ ಗೆ ಹೊಸದಿಲ್ಲಿಯಿಂದ ಸ್ಪರ್ಧಿಸಲು ಅವಕಾಶ ನೀಡಲು ವರಿಷ್ಠರು ಮುಂದಾಗಲಿದ್ದಾರೆ ಎಂದು ಬಿಜೆಪಿಯ ನಾಯಕರಿಬ್ಬರು ‘ದ ಹಿಂದುಸ್ತಾನ್‌ ಟೈಮ್ಸ್‌’ ಗೆ ಮಾಹಿತಿ ನೀಡಿದ್ದಾರೆ. ಆದರೆ, ನಟ ಅಕ್ಷಯ ಕುಮಾರ್‌ ಕೆನಡಾ ಪ್ರಜೆಯಾಗಿದ್ದು, ಅವರು ಭಾರತದ‌ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದರೆ ದೇಶದ ಪೌರತ್ವ ಪಡೆದುಕೊಳ್ಳಬೇಕಾಗುತ್ತದೆ.

120 ಕ್ಷೇತ್ರಗಳಿಗೆ ಒತ್ತು: ಕರ್ನಾಟಕ ಹೊರತಾಗಿ ದಕ್ಷಿಣ ಭಾರತದ ಇತರ ರಾಜ್ಯಗಳಲ್ಲಿ ಬಿಜೆಪಿಗೆ ಭದ್ರ ನೆಲೆ ಇಲ್ಲ. ಹೀಗಾಗಿ ಇಲ್ಲಿ ಸಿನಿಮಾ ಕ್ಷೇತ್ರ ಸೇರಿದಂತೆ ಇನ್ನಿತರ ಕ್ಷೇತ್ರಗಳ ಪ್ರಮುಖರನ್ನು ಚುನಾವಣೆಗೆ ನಿಲ್ಲಿಸಿ, ಅಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆದ್ದುಕೊಳ್ಳುವುದು ಪಕ್ಷದ ಇರಾದೆ ಎಂದು ಆ ನಾಯಕದ್ವಯರು ಹೇಳಿಕೊಂಡಿದ್ದಾರೆ.

ಗೆದ್ದಿದ್ದರು: 2014ರ ಚುನಾವಣೆಯಲ್ಲಿ ಕರ್ನಾಟಕದ ಪತ್ರಕರ್ತ ಪ್ರತಾಪ್‌ ಸಿಂಹ, ಮುಂಬಯಿಯ ನಿವೃತ್ತ ಪೊಲೀಸ್‌ ಆಯುಕ್ತ ಸತ್ಯಪಾಲ್‌ ಸಿಂಗ್‌, ನಿವೃತ್ತ ಕೇಂದ್ರ ಗೃಹ ಕಾರ್ಯದರ್ಶಿ ಆರ್‌.ಕೆ. ಸಿಂಗ್‌, ಗಾಯಕರಾಗಿರುವ ಮನೋಜ್‌ ತಿವಾರಿ, ಬಾಬುಲಾಲ್‌ ಸುಪ್ರಿಯೋ, ನಟ- ನಟಿಯರಾದ ಪರೇಶ್‌ ರಾವಲ್‌, ಕಿರಣ್‌ ಖೇರ್‌ಗೆ ಸ್ಪರ್ಧಿಸಲು ಅವಕಾಶ ನೀಡಲಾಗಿತ್ತು ಮತ್ತು ಅವರೆಲ್ಲರೂ ಗೆದ್ದಿದ್ದರು.

ಹಾಲಿ ಲೋಕಸಭೆಯಲ್ಲಿ ಬಿಜೆಪಿ ಏಕಾಂಗಿಯಾಗಿ 282 ಸ್ಥಾನಗಳನ್ನು ಗೆದ್ದಿದೆ. ಈ ಪೈಕಿ 232 ಸ್ಥಾನಗಳನ್ನು ಉತ್ತರ ಪ್ರದೇಶ, ಬಿಹಾರ, ಗುಜರಾತ್‌, ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢ ಮತ್ತು ಜಾರ್ಖಂಡ್‌ ಗಳಿಂದಲೇ ಗೆದ್ದುಕೊಂಡಿದೆ. ಮುಂದಿನ ಚುನಾವಣೆಯಲ್ಲಿಯೂ ಅದಕ್ಕಿಂತ ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಗೆದ್ದುಕೊಳ್ಳಲು ಬಿಜೆಪಿ ಯೋಚಿಸುತ್ತಿದೆ. ಅದಕ್ಕಾಗಿ ಪದ್ಮ ಸರಣಿ ಪ್ರಶಸ್ತಿ ಪುರಸ್ಕೃತರು, ಕ್ರೀಡಾಪಟುಗಳು ಸೇರಿದಂತೆ ಇತರ ಕ್ಷೇತ್ರದ ಗಣ್ಯರನ್ನು ಸ್ಪರ್ಧೆಗೆ ಆಹ್ವಾನಿಸಲು ಮುಂದಾಗಿದೆ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ನಾಯಕರು ಹೇಳಿದ್ದಾರೆ.

ಸಿಕಂದರಾಬಾದ್‌ ನಿಂದ ಸ್ಪರ್ಧೆಗೆ ಅಜರುದ್ದೀನ್‌ ಒಲವು
2009ರಲ್ಲಿ ಉತ್ತರ ಪ್ರದೇಶದ ಮೊರಾದಾಬಾದ್‌ನಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಗೆದ್ದಿದ್ದ ಮಾಜಿ ಕ್ರಿಕೆಟಿಗ ಮೊಹಮ್ಮದ್‌ ಅಜರುದ್ದೀನ್‌ 2019ರಲ್ಲಿ ಸಿಕಂದರಾಬಾದ್‌ನಿಂದ ಸ್ಪರ್ಧಿಸಲು ಮುಂದಾಗಿದ್ದಾರೆ. ಇದು ತಮ್ಮ ವೈಯಕ್ತಿಕ ಆಶಯ.ಕಾಂಗ್ರೆಸ್‌ ವರಿಷ್ಠರು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ‘ಪಿಟಿಐ’ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ, ತಮ್ಮ ಅಭಿಪ್ರಾಯ ತಿಳಿಸಿದಾಗ ಸ್ಥಳೀಯರು ಅದನ್ನು ಸ್ವಾಗತಿಸಿದ್ದಾರೆ ಎಂದು ಹೇಳಿದ್ದಾರೆ. ಇದರ ಜತೆಗೆ ಕಾಂಗ್ರೆಸ್‌ ನ ತೆಲಂಗಾಣ ಉಸ್ತುವಾರಿ ಮತ್ತು ಪ್ರದೇಶ ಕಾಂಗ್ರೆಸ್‌ ಸಮಿತಿಗೂ ತಮ್ಮ ಆಶಯ ತಿಳಿಸಿದ್ದಾಗಿ ಹೇಳಿದ್ದಾರೆ ಅಜರುದ್ದೀನ್‌.

– 2014ರ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದ ವಿವಿಧ ಕ್ಷೇತ್ರಗಳ ಗಣ್ಯರು
– ಪಕ್ಷ ಗೆಲ್ಲದ 120 ಕ್ಷೇತ್ರಗಳ ಮೇಲೆ ವಿಶೇಷ ಒತ್ತು ನೀಡಲು ನಿರ್ಧಾರ
– ಮತ್ತಷ್ಟು ಹೆಚ್ಚಿನ ಸ್ಥಾನಗಳಲ್ಲಿ ಜಯ ಸಾಧಿಸುವುದು ಬಿಜೆಪಿ ಯೋಜನೆ    
– ಸದ್ಯ 282 ಕ್ಷೇತ್ರಗಳಲ್ಲಿ ಗೆಲುವು

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.