ಬಿಎಲ್ ಸಂತೋಷ್ ಗೆ ಸಮನ್ಸ್ ಜಾರಿಗೊಳಿಸಿದ ತೆಲಂಗಾಣ ಪೊಲೀಸರು
Team Udayavani, Nov 19, 2022, 1:03 PM IST
ಹೈದರಾಬಾದ್: ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಟಿಆರ್ಎಸ್ನ ನಾಲ್ವರು ಶಾಸಕರನ್ನು ‘ಖರೀದಿಸಲು’ ಯತ್ನಿಸಿದ ಆರೋಪದಡಿ ಬಿಜೆಪಿ ನಾಯಕ ಬಿಎಲ್ ಸಂತೋಷ್ ಅವರಿಗೆ ತೆಲಂಗಾಣ ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿಎಲ್ ಸಂತೋಷ್ ಅವರು ನವೆಂಬರ್ 21 ರಂದು ಹಾಜರಾಗಬೇಕು ಅಥವಾ ಅವರನ್ನು ಬಂಧಿಸಲಾಗುವುದು ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.
ಪೊಲೀಸರು ತನಿಖೆಯನ್ನು ಮುಂದುವರಿಸಬಹುದು, ಆದರೆ ನ್ಯಾಯಾಧೀಶರು ಅದನ್ನು ಮೇಲ್ವಿಚಾರಣೆ ಮಾಡುತ್ತಾರೆ ಎಂದು ಹೈಕೋರ್ಟ್ ತೀರ್ಪು ನೀಡಿದ ಬಳಿಕ ಈ ಬೆಳವಣಿಗೆ ನಡೆದಿದೆ.
ಇದನ್ನೂ ಓದಿ:ಪೋರ್ಕ್, ಟಾಯ್ಸ್, ಬಿಯರ್ ಗಿಲ್ಲ ಅನುಮತಿ: ಇಲ್ಲಿದೆ ಕತಾರ್ ವಿಶ್ವಕಪ್ ಸಮಯದಲ್ಲಿ ನಿಷೇಧಿತ ವಸ್ತುಗಳ ಪಟ್ಟಿ
ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಶಾಸಕರಿಗೆ ಫಾರ್ಮ್ಹೌಸ್ನಲ್ಲಿ 100 ಕೋಟಿ ರೂ ಆಫರ್ ನೀಡಿದ ಆರೋಪದ ಮೇಲೆ ಮೂವರನ್ನು ಕಳೆದ ತಿಂಗಳು ಬಂಧಿಸಲಾಗಿತ್ತು. ಸದ್ಯ ಅವರು ಜಾಮೀನು ಪಡೆದಿದ್ದಾರೆ. ಇದರ ಹಿಂದೆ ಬಿಜೆಪಿ ಪಾತ್ರವಿದೆ ಎಂದು ಟಿಆರ್ ಎಸ್ ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್