ಬ್ಲ್ಯಾಕ್ ಫಂಗಸ್ 7000 ಕೋವಿಡ್ ಸೋಂಕಿತರನ್ನು ಬಲಿ ತೆಗೆದುಕೊಂಡಿದೆ : ಡಾ. ರಣದೀಪ್ ಗುಲೇರಿಯಾ

ಬ್ಲ್ಯಾಕ್ ಫಂಗಸ್ ಕೋವಿಡ್ ಗಿಂತ ಮಾರಕವಾಗಿ ಕಾಣಿಸಿಕೊಳ್ಳುತ್ತಿದೆ : ಡಾ. ರಣದೀಪ್ ಗುಲೇರಿಯಾ

ಶ್ರೀರಾಜ್ ವಕ್ವಾಡಿ, May 23, 2021, 3:31 PM IST

Black fungus becoming as deadlier as COVID! ‘Has claimed more than 7000 lives so far’, says AIIMS Delhi chief Randeep Guleria

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ಭಾರತದಲ್ಲಿ ಕೋವಿಡ್ ಸೋಂಕಿನ ಅಲೆ ಎರಡನೇ ಅಲೆ ದೇಶದಲ್ಲಿ ಆತಂಕವನ್ನು ಹುಟ್ಟಿ ಹಾಕಿದ ಬೆನ್ನಿಗೆ ಬ್ಯಾಕ್ ಫಂಗಸ್ ಭೀತಿ ಹುಟ್ಟಿಸಿದೆ.

“ಬ್ಲ್ಯಾಕ್ ಫಂಗಸ್ ದೇಶದಲ್ಲಿ ಸುಮಾರು 7,000 ಕ್ಕೂ ಹೆಚ್ಚು ಕೋವಿಡ್ 19 ಸೋಂಕಿತರನ್ನು ಬಲಿ ತೆಗೆದುಕೊಂಡಿದೆ.” ಎಂದು ಏಮ್ಸ್ ದೆಹಲಿಯ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಅವರು ನೀಡಿರುವ ಹೇಳಿಕೆಯನ್ನು ಸುದ್ದಿ ಸಂಸ್ಥೆ ಎ ಎನ್‌ ಐ ವರದಿ ಮಾಡಿದೆ.

ದೇಶದಲ್ಲಿ ಸಧ್ಯದ ಮಟ್ಟಿಗೆ ಸುಮಾರು 8,848 ಮ್ಯೂಕೋರ್ಮೈಕೋಸಿಸ್ ಪ್ರಕರಣಗಳು ಇವೆ ಎಂದು ಇಂಡೋ‑ಏಷ್ಯನ್ ನ್ಯೂಸ್ ಸರ್ವಿಸ್ ಹೇಳಿದೆ.

ಇದನ್ನೂ ಓದಿ : ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಮತ್ತೊಬ್ಬ ಶಿಕ್ಷಕಿ ಕೋವಿಡ್ ಸೋಂಕಿನಿಂದ ಸಾವು

ಇನ್ನು, ಸದ್ಯಕ್ಕೆ ಗುಜರಾತ್‌ನಲ್ಲಿ ಗರಿಷ್ಠ 2,281 ಮ್ಯೂಕೋರ್ಮೈಕೋಸಿಸ್ ಪ್ರಕರಣಗಳು ವರದಿಯಾಗಿದ್ದು, ಮಹಾರಾಷ್ಟ್ರದಲ್ಲಿ 2,000, ಆಂಧ್ರಪ್ರದೇಶದಲ್ಲಿ 910, ಮಧ್ಯಪ್ರದೇಶದಲ್ಲಿ 720, ರಾಜಸ್ಥಾನದಲ್ಲಿ 700, ಕರ್ನಾಟಕದಲ್ಲಿ 5,00, ಹರಿಯಾಣದಲ್ಲಿ 250, ದೆಹಲಿಯಲ್ಲಿ 197, ಪಂಜಾಬ್ ನಲ್ಲಿ 95, ಛತ್ತೀಸ್ ಘಡದಲ್ಲಿ 87, ಬಿಹಾರದಲ್ಲಿ 56, ತಮಿಳುನಾಡಿನಲ್ಲಿ 40, ಕೇರಳದಲ್ಲಿ 36, ಜಾರ್ಖಂಡ್ ನಲ್ಲಿ 27, ಒಡಿಶಾದಲ್ಲಿ 15, ಗೋವಾದಲ್ಲಿ 12 ಮತ್ತು ಚಂಡೀಗಡ 8 ಮ್ಯೂಕೋರ್ಮೈಕೋಸಿಸ್ ಪ್ರಕರಣಗಳು ಪತ್ತೆಯಾಗಿವೆ.

ಏತನ್ಮಧ್ಯೆ, ದೇಶದಲ್ಲಿ ಕನಿಷ್ಠ 219 ಮಂದಿ ಈವರೆಗೆ ಕಪ್ಪು ಶಿಲೀಂಧ್ರ ಅಥವಾ ಬ್ಲ್ಯಾಕ್ ಫಂಗಸ್ ನಿಂದ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.  ಆದರೇ, ಕಪ್ಪು ಶಿಲೀಂಧ್ರದಿಂದ ಸಾವನ್ನಪ್ಪಿದವರ ಬಗ್ಗೆ ಇನ್ನೂ ಅಧಿಕೃತ ಅಂಕಿ ಅಂಶಗಳಿಲ್ಲ.

ಇದನ್ನೂ ಓದಿ : ದೆಹಲಿಯಲ್ಲಿ ಲಾಕ್ಡೌನ್ ವಿಸ್ತರಣೆ : ಮಾರ್ಗಸೂಚಿ ಸರಿಯಾಗಿ ಪಾಲಿಸಿದರೇ ಅನ್ಲಾಕ್ : ಕೇಜ್ರಿವಾಲ್

ಕಪ್ಪು ಶಿಲೀಂಧ್ರ ಎಂದರೇನು?

‘ಕಪ್ಪು ಶಿಲೀಂಧ್ರ’ ಅಥವಾ ‘ಮ್ಯೂಕೋರ್ಮೈಕೋಸಿಸ್’ ಎಂಬುದು ಅಪರೂಪದ ಶಿಲೀಂಧ್ರಗಳ ಸೋಂಕು, ಇದು ಮ್ಯೂಕರ್ ಎಂಬ ಶಿಲೀಂಧ್ರದಿಂದ ಉಂಟಾಗುತ್ತದೆ, ಇದು ಆರ್ದ್ರ ಮೇಲ್ಮೈಗಳಲ್ಲಿ ಕಂಡುಬರುತ್ತದೆ. ಸಣ್ಣ ಕರುಳಿನ ಮ್ಯೂಕಾರ್ಮೈಕೋಸಿಸ್ ನ ಅಪರೂಪದ ಪ್ರಕರಣಗಳು ಇತ್ತೀಚೆಗೆ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ವರದಿಯಾಗಿವೆ.

ಕಪ್ಪು ಶಿಲೀಂಧ್ರವನ್ನು ಸಾಮಾನ್ಯ ಲಕ್ಚಣಗಳು ಯಾವುವು..?

ಮೂಗಿನ ರಕ್ತಸ್ರಾವ, ಕಪ್ಪ ಬಣ್ಣದ ಅಸಹಜ ಸ್ರಾವ, ಮೂಗಿನ ದಟ್ಟಣೆ, ತಲೆ ಮತ್ತು ಕಣ್ಣಿನ ನೋವು, ಕಣ್ಣುಗಳ ಬಳಿ ಬೆವರುವುದು, ದೃಷ್ಟಿ ಮಂದವಾಗುವುದು, ಕೆಂಪು ಕಣ್ಣುಗಳು, ಕಡಿಮೆ ಗೋಚರತೆ, ಕಣ್ಣು ತೆರೆಯಲು ಮತ್ತು ಮುಚ್ಚಲು ತೊಂದರೆಯಾಗುವುದು, ಮುಖದ ಮೇಲೆ ಮರಗಟ್ಟುವಿಕೆ ಅಥವಾ ಜುಮ್ಮೆನಿಸುವಿಕೆ ಭಾವನೆ, ಬಾಯಿ ತೆರೆಯುವಲ್ಲಿ ಅಥವಾ ಏನನ್ನಾದರೂ ಅಗಿಯುವಲ್ಲಿ ತೊಂದರೆ, ಹಲ್ಲುನೋವು ಉಂಟಾಗುವುದು ಇತ್ಯಾದಿ ಕಪ್ಪು ಶಿಲೀಂಧ್ರ ಅಥವಾ ಬ್ಲ್ಯಾಕ್ ಫಂಗಸ್ ನ ಪ್ರಮುಖ ಲಕ್ಷಣಗಳು.

ಸ್ಟೀರಾಯ್ಡ್ ಗಳನ್ನು ಚಿಕಿತ್ಸೆಗೆಂದು ನೀಡುತ್ತಿದ್ದ ಕೋವಿಡ್ 19 ಸೋಂಕಿತರಲ್ಲಿ ಮತ್ತು ವಿಶೇಷವಾಗಿ ಮಧುಮೇಹ ಮತ್ತು ಕ್ಯಾನ್ಸರ್ ನಿಂದ ಬಳಲುತ್ತಿರುವವರಲ್ಲಿ ಮ್ಯೂಕೋರ್ಮೈಕೋಸಿಸ್ ಪ್ರಕರಣಗಳು ಕಂಡುಬರುತ್ತಿವೆ ಎಂದು ತಜ್ಞ ವೈದ್ಯರು ಮಾಹಿತಿ ನೀಡಿದ್ದಾರೆ.

ಕಪ್ಪು ಶಿಲೀಂಧ್ರಕ್ಕೆ ಚಿಕಿತ್ಸೆ ನೀಡುವ ಔಷಧಿ..?

ಬ್ಲ್ಯಾಕ್ ಫಂಗಸ್ ಗೆ ಆಂಫೊಟೆರಿಸಿನ್ ಬಿ ಅಥವಾ “ಆಂಫೊ-ಬಿ” ಎಂಬ ಆ್ಯಂಟಿ ಫಂಗಸ್ ಇಂಟ್ರಾವೆನಸ್ ಇಂಜೆಕ್ಷನ್ ನನ್ನು ಚಿಕಿತ್ಸೆಗೆ ನೀಡಲಾಗುತ್ತಿದೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.

ಇನ್ನು, ಆಂಫೊಟೆರಿಸಿನ್-ಬಿ ಲಭ್ಯತೆಯನ್ನು ಹೆಚ್ಚಿಸಲಾಗುತ್ತಿದೆ. ಹೆಚ್ಚುವರಿ ಇಂಜೆಕ್ಶನ್ ಗಳ ಲಭ‍್ಯತೆಗಾಗಿ ಉತ್ಪಾದಕ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ :   ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ನಡೆಯುವುದು ಉತ್ತಮ: ಸುರೇಶ್ ಕುಮಾರ್

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.