ಬ್ಲ್ಯಾಕ್ ಮ್ಯಾಜಿಕ್ ನಿಂದ ಜನರ ವಿಶ್ವಾಸ ಗಳಿಸಲು ಸಾಧ್ಯವಿಲ್ಲ: ಪ್ರಧಾನಿ ಮೋದಿ
Team Udayavani, Aug 10, 2022, 7:41 PM IST
ಪಾಣಿಪತ್: ಬೆಲೆ ಏರಿಕೆ ವಿರೋಧಿಸಿ ಆಗಸ್ಟ್ 5 ರಂದು ಕಪ್ಪು ಬಟ್ಟೆ ಧರಿಸಿರುವ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ವಾಗ್ದಾಳಿ ನಡೆಸಿದ್ದು, “ಬ್ಲ್ಯಾಕ್ ಮ್ಯಾಜಿಕ್” ಅನ್ನು ನಂಬುವವರು ಮತ್ತೆ ಎಂದಿಗೂ ಜನರ ವಿಶ್ವಾಸವನ್ನು ಗಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
900 ಕೋಟಿ ಮೌಲ್ಯದ ಎಥೆನಾಲ್ ಸ್ಥಾವರವನ್ನು ಲೋಕಾರ್ಪಣೆ ಮಾಡಿದ ಪ್ರಧಾನಿ, ಕೆಲವು ವಿರೋಧ ಪಕ್ಷಗಳು ಕ್ಷುಲ್ಲಕ ರಾಜಕೀಯದಲ್ಲಿ ತೊಡಗಿವೆ ಎಂದು ವಾಗ್ದಾಳಿ ನಡೆಸಿ, ಇಂತಹ ವಿಷಯಗಳು ಹೊಸ ತಂತ್ರಜ್ಞಾನದ ಹೂಡಿಕೆಗೆ ಅಡ್ಡಿಯಾಗುವುದರಿಂದ ರಾಷ್ಟ್ರಕ್ಕೆ ಅಪಚಾರ ಮಾಡುತ್ತವೆ ಎಂದರು.
“ಆಗಸ್ಟ್ 5 ರಂದು, ಕೆಲವರು ‘ಬ್ಲಾಕ್ ಮ್ಯಾಜಿಕ್’ ಅನ್ನು ಹೇಗೆ ಹರಡಲು ಪ್ರಯತ್ನಿಸಿದರು ಎಂಬುದನ್ನು ನಾವು ನೋಡಿದ್ದೇವೆ. ಈ ಜನರು ಕಪ್ಪು ಬಟ್ಟೆಗಳನ್ನು ಧರಿಸುವುದರಿಂದ ತಮ್ಮ ಹತಾಶೆಯನ್ನು ಕೊನೆಗೊಳಿಸಬಹುದು ಎಂದು ಭಾವಿಸುತ್ತಾರೆ. ಆದರೆ ವಾಮಾಚಾರ, ಮಾಟಮಂತ್ರ, ಮೂಢನಂಬಿಕೆಗಳಲ್ಲಿ ತೊಡಗುವುದರಿಂದ ಮತ್ತೆ ಜನರ ವಿಶ್ವಾಸ ಗಳಿಸಲು ಸಾಧ್ಯವಿಲ್ಲ ಎಂಬುದು ಅವರಿಗೆ ಗೊತ್ತಿಲ್ಲ ಎಂದರು.
ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಆಗಸ್ಟ್ 5 ರಂದು ಸಂಸತ್ತಿನಲ್ಲಿ ಮತ್ತು ಹೊರಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ