Israel ರಾಯಭಾರ ಕಚೇರಿ ಬಳಿ ಸ್ಫೋಟ: ಸ್ಥಳದಲ್ಲಿ ಇಸ್ರೇಲ್ ಧ್ವಜದಿಂದ ಸುತ್ತಿದ ಪತ್ರ ಪತ್ತೆ
Team Udayavani, Dec 27, 2023, 8:53 AM IST
ನವದೆಹಲಿ: ನವದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಸಮೀಪ ಸೋಮವಾರ ಸ್ಫೋಟ ಸಂಭವಿಸಿದ್ದು, ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ರಾಯಭಾರ ಕಚೇರಿ ಘಟನೆಯನ್ನು ದೃಢಪಡಿಸಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.
ಸ್ಫೋಟದ ಸ್ಥಳದ ಬಳಿಯಿರುವ ಸಿಸಿಟಿವಿಯಲ್ಲಿ ಇಬ್ಬರು ಶಂಕಿತರ ಚಲನವಲನ ಸೆರೆಯಾಗಿದ್ದು, ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.
ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಘಟನೆ ನಡೆದಿದ್ದು ಸದ್ಯ ರಾಯಭಾರ ಕಚೇರಿ ಬಳಿ ಬಿಗಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇಸ್ರೇಲಿ ರಾಯಭಾರಿ ಕಚೇರಿಯ ರಾಯಭಾರಿಯನ್ನು ಉದ್ದೇಶಿಸಿ ಟೈಪ್ ಮಾಡಲಾದ ಪತ್ರವೊಂದು ಇಸ್ರೇಲಿ ಧ್ವಜದಲ್ಲಿ ಸುತ್ತಿದ ರೀತಿಯಲ್ಲಿ ಸ್ಫೋಟದ ಸ್ಥಳದ ಬಳಿ ಪತ್ತೆಯಾಗಿದೆ ಎಂದು ಮೂಲಗಳು ಇಂಡಿಯಾ ಟುಡೇ ಟಿವಿಗೆ ತಿಳಿಸಿವೆ. ಇಂಗ್ಲಿಷ್ನಲ್ಲಿ ಬರೆಯಲಾದ ಪತ್ರವು ಗಾಜಾದಲ್ಲಿ ನಡೆಸಿದ ಇಸ್ರೇಲ್ನ ದಾಳಿಗೆ ಪ್ರತಿಕ್ರಿಯೆಯಾಗಿ ಈ ದಾಳಿ ನಡೆಸಿರಿವುದಾಗಿ ಬರೆದುಕೊಂಡಿದೆ. “ಸರ್ ಅಲ್ಲಾ ರೆಸಿಸ್ಟೆನ್ಸ್” ಎಂದು ಗುರುತಿಸಿಕೊಳ್ಳುವ ಗುಂಪು ಸ್ಫೋಟದ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ.
ಈ ಕುರಿತು ಇಸ್ರೇಲ್ನ ಉಪ ರಾಯಭಾರಿ ಓಹದ್ ನಕಾಶ್ ಕಯ್ನಾರ್ ಪ್ರಿತಿಕ್ರಿಯೆ ನೀಡಿದ್ದು ‘ಮಂಗಳವಾರ ಸಂಜೆ 5.8 ಗಂಟೆಯ ಹೊತ್ತಿಗೆ ರಾಯಭಾರ ಕಚೇರಿಯ ಸಮೀಪದಲ್ಲಿ ಸ್ಫೋಟ ಸಂಭವಿಸಿದೆ. ನಮ್ಮ ಎಲ್ಲಾ ಕೆಲಸಗಾರರು ಸುರಕ್ಷಿತವಾಗಿದ್ದಾರೆ. ನಮ್ಮ ರಾಜತಾಂತ್ರಿಕರು ಸುರಕ್ಷಿತವಾಗಿದ್ದಾರೆ. ದೆಹಲಿ ಪೊಲೀಸರ ಭದ್ರತೆಯ ಸಹಕಾರದೊಂದಿಗೆ ನಮ್ಮ ಭದ್ರತಾ ತಂಡಗಳು ಕಾರ್ಯನಿರ್ವಹಿಸುತ್ತಿವೆ ಎಂದಿದ್ದಾರೆ.
ಇದನ್ನೂ ಓದಿ: D.K.ಜಿಲ್ಲೆಯಲ್ಲಿ 6 ಕಟ್ಟಡ ಬಾಕಿ; ಉಡುಪಿಯಲ್ಲಿ ಇನ್ನೂ ಆರಂಭಗೊಳ್ಳದ ಕಾಮಗಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ
ಯೋಜನೆಗಳಿಗೆ ನೋಂದಣಿ ಸ್ಥಗಿತಕ್ಕೆ ಪಕ್ಷಗಳಿಗೆ ಚುನಾವಣ ಆಯೋಗ ಸೂಚನೆ
MUST WATCH
ಹೊಸ ಸೇರ್ಪಡೆ
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು