ಚೀನಾಪಡೆಗೆ ಮುಖಭಂಗ: ಲಡಾಖ್ ನ 6 ಪ್ರಮುಖ ಪರ್ವತ ಶ್ರೇಣಿ ಭಾರತೀಯ ಸೇನಾಪಡೆ ವಶಕ್ಕೆ
ಚೀನಾ ಸೈನಿಕರ ಚಟುವಟಿಕೆ ಪರಿಶೀಲಿಸುವ ನಿಟ್ಟಿನಲ್ಲಿ ಭಾರತೀಯ ವಾಯುಪಡೆಯ ರಫೇಲ್ ಯುದ್ಧ ವಿಮಾನ ಎಲ್ ಎಸಿಯಲ್ಲಿ ಹಾರಾಟ
Team Udayavani, Sep 21, 2020, 11:50 AM IST
ನವದೆಹಲಿ: ಪೂರ್ವ ಲಡಾಖ್ ನ ವಾಸ್ತವ ಗಡಿ ನಿಯಂತ್ರಣ ರೇಖೆ (ಎಲ್ ಎಸಿ) ಬಳಿ ಭಾರತ ಮತ್ತು ಚೀನಾ ನಡುವಿನ ಸಂಘರ್ಷ ಮುಂದುವರಿದಿದ್ದು, ಏತನ್ಮಧ್ಯೆ ಭಾರತೀಯ ಸೇನಾ ಪಡೆ ಬೆಟ್ಟ ಪ್ರದೇಶಗಳಲ್ಲಿನ ಆರು ಸ್ಥಳಗಳನ್ನು ತನ್ನ ವಶಕ್ಕೆ ಪಡೆಯಲು ಯಶಸ್ವಿಯಾಗಿದ್ದು, ಚೀನಾಪಡೆಗೆ ತೀವ್ರ ಮುಖಭಂಗವಾಗಿರುವುದಾಗಿ ವರದಿ ತಿಳಿಸಿದೆ.
ಭಾರತೀಯ ಸೇನಾಪಡೆ ಆರು ಪ್ರಮುಖ ಪರ್ವತ ಶ್ರೇಣಿ ಪ್ರದೇಶವನ್ನು ತನ್ನ ವಶಕ್ಕೆ ತೆಗೆದುಕೊಳ್ಳುವ ಮೂಲಕ ಚೀನಾ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ ಎ)ಯ ಚಲನವಲನದ ಮೇಲೆ ಸ್ಪಷ್ಟವಾದ ಕಣ್ಗಾವಲು ಇಡಲು ಸಾಧ್ಯವಾಗಿದೆ ಎಂದು ವರದಿ ವಿವರಿಸಿದೆ.
ಚೀನಾ ಯುದ್ಧ ವಿಮಾನಗಳ ಹಾಗೂ ಚೀನಾ ಸೈನಿಕರ ಚಟುವಟಿಕೆ ಪರಿಶೀಲಿಸುವ ನಿಟ್ಟಿನಲ್ಲಿ ಭಾರತೀಯ ವಾಯುಪಡೆಯ ರಫೇಲ್ ಯುದ್ಧ ವಿಮಾನ ಎಲ್ ಎಸಿಯಲ್ಲಿ ಹಾರಾಟ ನಡೆಸುತ್ತಿರುವುದಾಗಿ ಮೂಲಗಳು ತಿಳಿಸಿವೆ. ಮಾಧ್ಯಮಗಳ ವರದಿ ಪ್ರಕಾರ, ಸೆಪ್ಟೆಂಬರ್ 10ರಂದು ರಾಜಸ್ಥಾನದ ಅಂಬಾಲಾ ವಾಯುನೆಲೆಗೆ ಐದು ರಫೇಲ್ ಯುದ್ಧ ವಿಮಾನ ಬಂದಿಳಿದಿತ್ತು. ಇದೀಗ ಲಡಾಖ್ ನಲ್ಲಿ ರಫೇಲ್ ಯುದ್ಧ ವಿಮಾನ ಹಾರಾಟ ನಡೆಸುತ್ತಿರುವುದಾಗಿ ತಿಳಿಸಿದೆ.
ಏತನ್ಮಧ್ಯೆ ಪ್ಯಾಂಗಾಮಗ್ ಸರೋವರ ಪ್ರದೇಶದ ಸುತ್ತಮುತ್ತ 20ಕ್ಕೂ ಹೆಚ್ಚು ಬೆಟ್ಟ ಪ್ರದೇಶಗಳನ್ನು ಭಾರತೀಯ ಸೇನಾಪಡೆ ತನ್ನ ವಶಕ್ಕೆ ತೆಗೆದುಕೊಂಡಿತ್ತು. ಪ್ಯಾಂಗಾಂಗ್ ಉತ್ತರ, ದಕ್ಷಿಣ ದಂಡೆಯ ಬೆಟ್ಟ ಸೇರಿ ಚೂಶುಲ್ ಪ್ರದೇಶದ ಎತ್ತರದ ಪ್ರದೇಶಗಳನ್ನು ಭಾರತೀಯ ಸೇನೆ ತನ್ನ ಸುಪರ್ದಿಗೆ ಪಡೆದಿದೆ ಎಂದು ಸೇನಾ ಮೂಲಗಳು ಹೇಳಿವೆ.
ಆಗಸ್ಟ್ 29ರಿಂದ ಸೆಪ್ಟೆಂಬರ್ 2ನೇ ವಾರದ ಅವಧಿಯಲ್ಲಿ ಭಾರತೀಯ ಯೋಧರು ಮಗರ್, ಗುರುಂಗ್, ರೆಸೆಹೆನ್ ಲಾ, ರೆಜಾಂಗ್ ಲಾ, ಮೋಖ್ ಪರಿ ಬೆಟ್ಟಗಳನ್ನು ತಮ್ಮ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ