ಬ್ಲೂವೇಲ್‌ ಮಹಾಮಾರಿಗೆ ಕೇರಳದಲ್ಲೇ ಮತ್ತೆರಡು ಬಲಿ 


Team Udayavani, Aug 17, 2017, 8:10 AM IST

blu-well.jpg

ಕಣ್ಣೂರು/ತಿರುವನಂತಪುರ/ಹೊಸದಿಲ್ಲಿ: ಜೀವವನ್ನೇ ಕೇಳುವ ಆನ್‌ಲೈನ್‌ನ ಅಪಾಯಕಾರಿ ಆಟ, ಬ್ಲೂವೇಲ್‌ಗೆ ಕೇರಳದಲ್ಲಿ ಮತ್ತಿಬ್ಬರು ಬಲಿಯಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಇದರೊಂದಿಗೆ ಭಾರತದಲ್ಲಿ ಬ್ಲೂವೇಲ್‌ ಮಹಾಮಾರಿಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೇರಿದೆೆ. ಈ ಆನ್‌ಲೈನ್‌ ಆಟದ ಚಟ ವ್ಯಾಪಕವಾಗಿ ಹಬ್ಬುತ್ತಿದ್ದು, ಬಾಲಕರ ಮನಸ್ಸನ್ನೇ ತಿರುಗಿಸಿ ಜೀವವನ್ನೇ ಬಲಿ ಪಡೆಯುತ್ತಾದ್ದರಿಂದ, ಆನ್‌ಲೈನ್‌ ವಿವಿಧ ಜಾಲತಾಣ ಗಳಲ್ಲಿ ಬ್ಲೂವೇಲ್‌ ಲಿಂಕ್‌ ಅನ್ನು ಅಳಿಸಿ ಹಾಕುವಂತೆ ಕೇಂದ್ರ ಸರಕಾರ ಸೂಚನೆ ನೀಡಿದೆ. ತಪ್ಪಿದಲ್ಲಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. 

ಕೇರಳದ ತಿರುವನಂತಪುರದಲ್ಲಿ ಜು.25ರಂದು 16ರ ಬಾಲಕ ಮನೋಜ್‌ ಸಿ ಮನು ಬ್ಲೂವೇಲ್‌ ಟಾಸ್ಕ್ ಪೂರೈಸಲು ನದಿಗೆ ಹಾರಿ ಆತ್ಮಹತ್ಯೆ ಮಾಡಿದ್ದಾಗಿ ಹೇಳಲಾಗಿದೆ. ಈತ ಕಳೆದ ನವೆಂಬರ್‌ನಿಂದ ಆಟದಲ್ಲಿ ತೊಡಗಿಸಿಕೊಂಡಿದ್ದು, ಕೈಯಲ್ಲಿ ಎಬಿಐ ಎಂದು ಕೆತ್ತಿಕೊಂಡಿದ್ದ ಎಂದು ಹೇಳಲಾಗಿದೆ. ಆದರೆ ಎಬಿಐ ಎಂದರೇನು ಎಂದು ತಿಳಿದುಬಂದಿಲ್ಲ. 
ಬಾಲಕ ಮನೋಜ್‌ ಬ್ಲೂವೇಲ್‌ನ ಫೈನಲ್‌ ಟಾಸ್ಕ್ ನಲ್ಲಿದ್ದು ಒಂದೋ ಆತ್ಮಹತ್ಯೆ ಮಾಡಿಕೊಳ್ಳಬೇಕು, ಅಥವಾ ಮತ್ತೂಬ್ಬರನ್ನು ಹತ್ಯೆ ಮಾಡಬೇಕು ಎಂದಿದ್ದ. ಇದನ್ನು ಕೇಳಿ ತನಗೆ ಹೆದರಿಕೆಯಾಗಿದ್ದಾಗಿ ಮನೋಜ್‌  ಹೇಳಿದ್ದ ಎಂದು ತಾಯಿ ಟೀವಿ ಚಾನೆಲ್‌ಗ‌ಳಿಗೆ ಹೇಳಿದ್ದಾರೆ. ಅಲ್ಲದೇ ಬಾಲಕ ಮನೋಜ್‌, “ತಾನು ಸತ್ತರೆ, ನೀನು ನೊಂದುಕೊಳ್ಳುತ್ತೀಯಾ?’ ಎಂದೂ ಕೇಳಿದ್ದ ಎಂದು ಆತನ ತಾಯಿ ಹೇಳಿದ್ದಾರೆ.

ಕಣ್ಣೂರಿನಲ್ಲಿ ನಡೆದ ಇನ್ನೊಂದು ಪ್ರಕರಣದಲ್ಲಿ 22 ವರ್ಷದ ಯುವಕ ಬ್ಲೂವೇಲ್‌ಗೆ ಬಲಿಯಾಗಿದ್ದಾಗಿ ಹೇಳಲಾಗಿದೆ. ಈತನೂ ಕೈಯಲ್ಲಿ ಇಂಗ್ಲಿಷ್‌ ಅಕ್ಷರಗಳನ್ನು ಕೆತ್ತಿಕೊಂಡಿದ್ದಾಗಿ, ಕೆಲ ದಿನಗಳ ಬಳಿಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗಿದೆ. 

ಈ ಹಿಂದೆ ಆ.12ರಂದು ಪಶ್ಚಿಮ ಬಂಗಾಳದ ವೆಸ್ಟ್‌ ಮಿಡ್ನಾಪೂರ್‌ನಲ್ಲಿ 15ರ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದು ಬ್ಲೂವೇಲ್‌ ಪ್ರಕರಣ ಎನ್ನಲಾಗಿತ್ತು. ಮುಂಬಯಿನ ಅಂಧೇರಿ ಈಸ್ಟ್‌ನಲ್ಲೂ 14ರ ಬಾಲಕ 7ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. 

ಇದೇ ವೇಳೆ ಇತ್ತ ದಿಲ್ಲಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ದಾವೆ ಯೊಂದು ಸಲ್ಲಿಕೆಯಾಗಿದ್ದು,  ಸಾಮಾಜಿಕ ಜಾಲತಾಣಗಳಿಂದ ಬ್ಲೂವೇಲ್‌ ಅಳಿಸುವಂತೆ ಮನವಿ ಮಾಡಲಾಗಿದೆ.

ಲಿಂಕ್‌ ಅಳಿಸಲು ಸೂಚನೆ
ಇದೇ ವೇಳೆ ಬ್ಲೂವೇಲ್‌ಗೆ ಬಲಿಯಾಗುವುದನ್ನು ತಪ್ಪಿಸಲು ಜಾಲತಾಣಗಳಲ್ಲಿ ಲಿಂಕ್‌ ಅಳಿಸುವಂತೆ ಪ್ರಮುಖ ತಾಣಗಳಾದ, ಗೂಗಲ್‌, ಫೇಸ್‌ಬುಕ್‌, ಯಾಹೂ, ವಾಟ್ಸ್‌ಆ್ಯಪ್‌, ಮೈಕ್ರೋಸಾಫ್ r ಗಳಿಗೆ ಕೇಂದ್ರ ಸರಕಾರ ಸೂಚನೆ ನೀಡಿದೆ. ಒಂದು ವೇಳೆ ಇದಕ್ಕೆ ತಪ್ಪಿದಲ್ಲಿ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿಶಂಕರ್‌ ಪ್ರಸಾದ್‌ ಹೇಳಿದ್ದಾರೆ. “ಬ್ಲೂ ವೇಲ್‌ ವಿಚಾರದಲ್ಲಿ ಹಲವು ದೂರುಗಳು ಬಂದಿವೆ. ಈ ಸಂಬಂಧ ಅಂತರ್ಜಾಲ ಕಂಪೆನಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡ ಲಾಗಿದೆ. ಬಾಲಕರು ಈ ಆನ್‌ಲೈನ್‌ ಆಟದಿಂದ ಆತ್ಮಹತ್ಯೆಗೆ ಪ್ರೇರೇ ಪಿತರಾಗುವುದು ತೀವ್ರ ನೋವಿನ ವಿಚಾರವಾಗಿದ್ದು, ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.  ಈ ಮಧ್ಯೆ, ಬ್ಲೂವೇಲ್‌ ಲಿಂಕ್‌ ಅಳಿಸಲು ಹೇಳಿರುವ ಕೇಂದ್ರ ಸರಕಾರದ ನಿರ್ಧಾರವನ್ನು ಕೇರಳ ಸಿಎಂ ಪಿಣರಾಯಿ ವಿಜಯನ್‌ ಸ್ವಾಗತಿಸಿದ್ದಾರೆ.

ಟಾಪ್ ನ್ಯೂಸ್

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.