ಗಂಗಾ ನದಿಯಲ್ಲಿ ದೋಣಿ ಮುಳುಗಿ 7 ಮಂದಿ ನಾಪತ್ತೆ; ವ್ಯಾಪಕ ಹುಡುಕಾಟ
Team Udayavani, Dec 30, 2022, 6:38 PM IST
ಪಾಟ್ನಾ: ಬಿಹಾರದ ಮನೇರ್ನಲ್ಲಿ 14 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ 7 ಮಂದಿ ನಾಪತ್ತೆಯಾಗಿದ್ದಾರೆ.
ಎನ್ಡಿಆರ್ಎಫ್ ತಂಡವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಮಾನೆರ್ ಎಎಸ್ಐ ಸತ್ಯ ನಾರಾಯಣ ಸಿಂಗ್ ಹೇಳಿದ್ದಾರೆ. ಇತರೆ 7 ಮಂದಿ ಸುರಕ್ಷಿತವಾಗಿ ದಡ ಸೇರಿದ್ದಾರೆ.
ಎನ್ಡಿಆರ್ಎಫ್ ತಂಡವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಎಎಸ್ಐ ಸತ್ಯ ನಾರಾಯಣ ಸಿಂಗ್ ಹೇಳಿದ್ದಾರೆ.
ಗ್ರಾಮಸ್ಥರು ಪ್ರಾಣಿಗಳಿಗೆ ಮೇವು ಕಡಿದು ಗಂಗಾ ನದಿ ದಾಟಿ ಗ್ರಾಮಕ್ಕೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ. ಈ ಅವಘಡದಲ್ಲಿ ಬೋಟ್ ನಿಯಂತ್ರಣ ತಪ್ಪಿ ಗಂಗಾ ನದಿಯ ಮಧ್ಯದಲ್ಲಿ ಮಗುಚಿ ಬಿದ್ದಿದ್ದು, ಅಪಘಾತದಲ್ಲಿ ಬೋಟ್ ಸಂಪೂರ್ಣ ಮುಳುಗಿದೆ. ಈ ಬೋಟ್ನಲ್ಲಿ 14 ಜನರಿದ್ದು, ಅದರಲ್ಲಿ 7 ಜನರು ಈಜುವ ಮೂಲಕ ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ.
7 ಜನರು ನಾಪತ್ತೆಯಾಗಿದ್ದು,ಮಾಹಿತಿ ಗ್ರಾಮಕ್ಕೆ ತಲುಪುತ್ತಿದ್ದಂತೆ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸಾವಿರಾರು ಜನರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ.