ದೋಣಿ ಮುಳುಗಡೆಯಾಗಿ 25ಕ್ಕೂ ಹೆಚ್ಚು ಜನರು ನಾಪತ್ತೆ: 5 ಮೃತದೇಹ ಪತ್ತೆ
Team Udayavani, Sep 15, 2019, 3:11 PM IST
ಆಂಧ್ರ ಪ್ರದೇಶ: ದೋಣಿ ಮುಳುಗಡೆಯಾಗಿ 25ಕ್ಕೂ ಹೆಚ್ಚು ಜನರು ನಾಪತ್ತೆಯಾದ ದುರ್ಘಟನೆ ಕುಚ್ಚಲೂರು ಬಳಿಯ ಗೋದಾವರಿ ನದಿಯಲ್ಲಿ ನಡೆದಿದೆ.
ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಕುಚ್ಚಲೂರು ನದಿಯಲ್ಲಿ ಈ ಭೀಕರ ಘಟನೆ ನಡೆದಿದೆ. ಇದೊಂದು ಪ್ರವಾಸಿ ದೋಣಿಯಾಗಿದ್ದು ಜನರನ್ನು ನದಿಯ ದಡದಲ್ಲಿರುವ ಗುಂಡಿಪೋಚಮ್ಮ ದೇವಾಲಯದಿಂದ ಪಪಿಕೊಂಡಾಲು ಬೆಟ್ಟಗಳಿಗೇ ಕರೆದೊಯ್ಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಈಗಾಗಲೇ ಐದು ಮೃತದೇಹ ಹೊರಕ್ಕೆ ತೆಗೆಯಲಾಗಿದ್ದು, ನಾಪತ್ತೆಯಾದವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಎನ್ ಡಿಅರ್ ಎಫ್ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರನೆ ನಡೆಸುತ್ತಿದ್ದಾರೆ.
ಲೈಫ್ ಜಾಕೆಟ್ ಮೂಲಕ 14 ಜನರು ಈಜಿ ದಡ ಸೇರಿದ್ದು, ಸ್ಥಳಿಯರಿಂದ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ 10 ಜನರ ರಕ್ಷಣೆ ಮಾಡಲಾಗಿದೆ. ನಾಪತ್ತೆಯಾದವರಿಗಾಗಿ ತೀವ್ರ ಶೋಧ ಕಾರ್ಯ ನಡೆಸಲಾಗುತ್ತಿದೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್