ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರ ಅಟ್ಟಹಾಸ; ಉಗ್ರರ ದಾಳಿಗೆ ಮತ್ತಿಬ್ಬರು ಬಲಿ

ಭದ್ರತಾ ಪಡೆಗಳ ಸತತ ಕಾರ್ಯಾಚರಣೆ ಹೊರತಾಗಿಯೂ ನಿಲ್ಲದ ದಾಳಿಗಳು

Team Udayavani, Oct 17, 2021, 6:00 AM IST

ಉಗ್ರರ ದಾಳಿಗೆ ಮತ್ತಿಬ್ಬರು ಬಲಿ; ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರ ಅಟ್ಟಹಾಸ

ಸಾಂದರ್ಭಿಕ ಚಿತ್ರ..

ಶ್ರೀನಗರ: ಕಳೆದೊಂದು ವಾರದಿಂದ ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ನಡೆಯುತ್ತಿರುವ ನಾಗರಿಕರ ಹತ್ಯೆಗಳು ಅವ್ಯಾಹತವಾಗಿ ಮುಂದುವರಿದಿವೆ.

ಶನಿವಾರ ಶ್ರೀನಗರದಲ್ಲಿ ಮತ್ತೊಂದು ಸುತ್ತಿನ ದಾಳಿ ನಡೆಸಿರುವ ಉಗ್ರರು, ಅರಬಿಂದ್‌ ಕುಮಾರ್‌ ಶಾ ಹಾಗೂ ವೀರೇಂದ್ರ ಪಾಸ್ವಾನ್‌ ಎಂಬ ಬೀದಿಬದಿ ವ್ಯಾಪಾರಿಗಳನ್ನು ಹತ್ಯೆ ಮಾಡಿದ್ದಾರೆ.

ಶನಿವಾರ ಸಂಜೆ 6:30ರ ಸುಮಾರಿಗೆ ಈದ್ಗಾ ಮೈದಾನದ ಬಳಿ ದಾಳಿ ನಡೆಸಿದ ಉಗ್ರರು, ಅಲ್ಲಿ ಅರಬಿಂದ್‌ ಅವರನ್ನು ಕೊಂದರು. ಆನಂತರ, ಅದೇ ಪ್ರಾಂತ್ಯದ ಮತ್ತೊಂದು ಬೀದಿಯಲ್ಲಿ ದಾಳಿ ನಡೆಸಿ, ಮತ್ತೊಬ್ಬ ಬೀದಿ ವ್ಯಾಪಾರಿ ವೀರೇಂದ್ರ ಅವರನ್ನು ಹತ್ಯೆಗೈದಿದ್ದಾರೆ.

ಈ ಮೂಲಕ ಕಳೆದೊಂದು ವಾರದಲ್ಲಿ ಒಟ್ಟು 9 ನಾಗರಿಕರು ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಉಗ್ರರ ಈ ಅಟ್ಟಹಾಸವನ್ನು ಮಟ್ಟಹಾಕಲು ಭದ್ರತಾ ಪಡೆಗಳು ಶಕ್ತಿಮೀರಿ ಶ್ರಮಿಸುತ್ತಿವೆ. ಈ ಕಾರ್ಯಾಚರಣೆಗಳಲ್ಲಿ ಹಲವಾರು ಯೋಧರು ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ತಡವಾದರೂ ಮಾನ್ಯ: ಸುಪ್ರೀಂ ಕೋರ್ಟ್‌

ಯೋಧರ ಮೃತದೇಹ ಪತ್ತೆ
ಜಮ್ಮು ಕಾಶ್ಮೀರದ ಜಿಲ್ಲೆಯಲ್ಲಿ 3 ದಿನಗಳ ಹಿಂದೆ ಉಗ್ರರ ವಿರುದ್ಧದ ಕಾರ್ಯಾಚರಣೆಯ ವೇಳೆ ನಾಪತ್ತೆಯಾಗಿದ್ದ ಭಾರತೀಯ ಸೇನೆಯ ಜೂನಿಯರ್‌ ಕಮಿಷನ್ಡ್ ಅಧಿಕಾರಿ (ಜೆಸಿಒ) ಹಾಗೂ ಇನ್ನಿಬ್ಬರು ಯೋಧರ ಮೃತದೇಹಗಳನ್ನು ಸೇನೆ ಪತ್ತೆ ಹಚ್ಚಿದೆ. ಕಾರ್ಯಾಚರಣೆಯ ನಂತರ ಈ ಮೂವರು ಕಾಣೆಯಾಗಿದ್ದು ತಿಳಿದುಬಂದಿತ್ತು. ಆ ಹಿನ್ನೆಲೆಯಲ್ಲಿ, ಇಡೀ ಪ್ರಾಂತ್ಯದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಕಾರ್ಯಾಚರಣೆ ಆರಂಭವಾಗಿ 48 ಗಂಟೆಗಳ ನಂತರ, ಮೃತದೇಹಗಳು ಸಿಕ್ಕಿವೆ.

ಇಬ್ಬರು ಉಗ್ರರ ಹತ್ಯೆ
ಪುಲ್ವಾಮಾ ಜಿಲ್ಲೆಯ ಪಾಂಪೊರೆ ಪ್ರಾಂತ್ಯದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್‌-ಎ-ತೊಯ್ಬಾ ಸಂಘಟನೆಯ ಕಮಾಂಡರ್‌ ಉಮರ್‌ ಮುಷ್ತಾಕ್‌ ಖಾಂಡೇ ಮೃತಪಟ್ಟಿದ್ದಾನೆ. ಈ ವರ್ಷ ಆರಂಭದಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಭಾಗವಹಿಸಿದ್ದ ಈತ ಇಬ್ಬರು ನಾಗರಿಕರನ್ನು ಕೊಂದಿದ್ದ ಎಂದು ಹೇಳಲಾಗಿದೆ. ದಾಳಿಯಲ್ಲಿ ಮೃತಪಟ್ಟಿರುವ ಮತ್ತೊಬ್ಬ ಉಗ್ರನ ಗುರುತು ಪತ್ತೆಯಾಗಿಲ್ಲ.

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.