ಅಪಹರಣಕ್ಕೊಳಗಾದ ಚಿನ್ನದ ವ್ಯಾಪಾರಿಯ ಶವ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ
Team Udayavani, Nov 6, 2022, 9:59 AM IST
ಬಿಹಾರ : ಬಿಹಾರದ ಅರ್ರಾದಲ್ಲಿ ಅಪಹರಣಕಾರರಿಂದ ಅಪಹರಣಕ್ಕೊಳಗಾಗಿದ್ದ ಚಿನ್ನದ ವ್ಯಾಪಾರಿಯ ಮೃತದೇಹವು ನದಿಯೊಂದರಲ್ಲಿ ಪತ್ತೆಯಾಗಿದೆ ಎಂದು ಬಿಹಾರ ಪೊಲೀಸರು ತಿಳಿಸಿದ್ದಾರೆ.
ಚಿನ್ನದ ವ್ಯಾಪಾರಿಯನ್ನು ಹರಿಜಿ ಗುಪ್ತಾ ಎಂದು ಗುರುತಿಸಲಾಗಿದ್ದು ಬುಧವಾರ ಗುಪ್ತಾ ಅವರಿಗೆ ಕುಟುಂಬಸ್ಥರು ಕರೆ ಮಾಡಿದ ಸಂದರ್ಭ ಕರೆ ಸ್ವೀಕರಿಸಲಿಲ್ಲ, ಆಲದೆ ಮನೆಗೂ ಬಂದಿರಲಿಲ್ಲ ಇದರಿಂದ ಸಂಶಯಗೊಂಡ ಕುಟುಂಬದವರು ಪೊಲೀಸ್ ಠಾಣೆಗೆ ಅಪಹರಣವಾಗಿರುವ ಕುರಿತು ದೂರು ನೀಡಿದ್ದಾರೆ.
ಘಟನೆ ಕುರಿತು ಪೊಲೀಸರು ಕಳೆದ ಎರಡು ದಿನಗಳಿಂದ ಕಾರ್ಯಾಚರಣೆ ನಡೆಸಿ ಶನಿವಾರ ಗುಪ್ತಾ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ನದಿಯೊಂದರಲ್ಲಿ ಪತ್ತೆಯಾಗಿದೆ.
ಅಪಹರಣ ಮಾಡಿದ ತಂಡ ವ್ಯಕ್ತಿಯನ್ನು ಕೊಲೆ ಮಾಡಿ ನದಿಗೆಸೆದಿರಬಹುದು ಎನ್ನಲಾಗಿದ್ದು, ಕೊಳೆತ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಹಿಮಾಂಶು ಶನಿವಾರ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಹರಿಜಿ ಗುಪ್ತಾ ಬಿಹಾರದ ಅರ್ರಾ ನಿವಾಸಿಯಾಗಿದ್ದು, ಅವರು ಅರ್ರಾದಲ್ಲಿ ಮೂರು ಆಭರಣ ಅಂಗಡಿಗಳನ್ನು ಮತ್ತು ಪಾಟ್ನಾದಲ್ಲಿ ಎರಡು ಆಭರಣ ಅಂಗಡಿಗಳನ್ನು ಹೊಂದಿದ್ದರು. ಅಲ್ಲದೆ ಅರಾಹ್ ಬೈಪಾಸ್ ರಸ್ತೆಯಲ್ಲಿ ಮಾರುಕಟ್ಟೆಯನ್ನು ಹೊಂದಿದ್ದರು, ಅಲ್ಲಿ ಹಲವಾರು ಅಂಗಡಿಗಳನ್ನು ನಡೆಸುತಿದ್ದರು ಎನ್ನಲಾಗಿದೆ.
ಇದನ್ನೂ ಓದಿ : ಇಂಡಿಯನ್ ಡಿಜಿಟಲ್ ಯುನಿವರ್ಸಿಟಿ ಮೂಲಕ 15 ಲಕ್ಷ ಶಿಕ್ಷಕರಿಗೆ ತರಬೇತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ