ಕಾಲುವೆಯಲ್ಲಿ ಪತ್ತೆಯಾಯ್ತು ದೆಹಲಿಯ ಉನ್ನತ ಪೊಲೀಸ್ ಅಧಿಕಾರಿಯ ಮಗನ ಶವ, ಪ್ರಮುಖ ಆರೋಪಿ ಬಂಧನ
Team Udayavani, Jan 29, 2024, 9:01 AM IST
ಹರಿಯಾಣ: ಮದುವೆ ಕಾರ್ಯಕ್ರಮಕ್ಕೆ ತೆರಳಿ ಬಳಿಕ ನಾಪತ್ತೆಯಾಗಿದ್ದ ದೆಹಲಿಯ ಉನ್ನತ ಪೊಲೀಸ್ ಅಧಿಕಾರಿಯ ಮಗನ ಶವ ಹರಿಯಾಣದ ಕಾಲುವೆಯಲ್ಲಿ ಪತ್ತೆಯಾಗಿದ್ದು ಘಟನೆಗೆ ಸಂಬಂಧಿಸಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.
ದೆಹಲಿಯ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಯಶಪಾಲ್ ಸಿಂಗ್ ಅವರ ಪುತ್ರ ಲಕ್ಷ್ಯ ಚೌಹಾಣ್ ಕಳೆದ ಜನವರಿ 22 ರಿಂದ ನಾಪತ್ತೆಯಾಗಿದ್ದರು. ಈ ಕುರಿತು ಯಶಪಾಲ್ ಸಿಂಗ್ ಮಗ ನಾಪತ್ತೆಯಾಗಿರುವ ಕುರಿತು ದೂರು ನೀಡಿದ್ದರು.
ಜನವರಿ 28ರಂದು ಪ್ರಕರಣದ ಪ್ರಮುಖ ಆರೋಪಿ ವಿಕಾಸ್ ಭಾರದ್ವಾಜ್ ನನ್ನು ಪೊಲೀಸರು ಬಂಧಿಸಿದ್ದರು.
ಏನಿದು ಪ್ರಕರಣ: ವೃತ್ತಿಯಲ್ಲಿ ವಕೀಲರಾಗಿದ್ದ ಲಕ್ಷ್ಯ ಅವರು ಜನವರಿ 22 ರಂದು ಹರಿಯಾಣದ ಭಿವಾನಿಯಲ್ಲಿ ನಡೆದ ಮದುವೆಯಲ್ಲಿ ಭಾಗವಹಿಸಲು ಕಾರಿನಲ್ಲಿ ತನ್ನ ಇತರ ಗೆಳೆಯರಾದ ತೀಸ್ ಹಜಾರಿ ನ್ಯಾಯಾಲಯದಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದ ವಿಕಾಸ್ ಭಾರದ್ವಾಜ್ ಮತ್ತು ಅಭಿಷೇಕ್ ಅವರೊಂದಿಗೆ ಹೋಗಿದ್ದರು. ಆದರೆ ಮದುವೆ ಮುಗಿಸಿ ಮಗ ಮನೆಗೆ ಬಾರದೆ ಇರುವುದನ್ನು ಕಂಡ ಲಕ್ಷ್ಯ ಅವರ ತಂದೆ ಜನವರಿ 23 ರಂದು ಮಗ ಕಾಣೆಯಾದ ಬಗ್ಗೆ ದೂರು ದಾಖಲಿಸಿದರು. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಅದರಂತೆ ಮದುವೆ ಸಮಾರಂಭಕ್ಕೆ ಲಕ್ಷ್ಯ ಯಾರ ಜೊತೆ ತೆರಳಿದ್ದ ಅವರನ್ನು ಪೊಲೀಸರು ಮೊದಲು ವಿಚಾರಣೆ ನಡೆಸಿದ್ದಾರೆ. ಈ ವೇಳೆ ತೀಸ್ ಹಜಾರಿ ಕೋರ್ಟ್ನಲ್ಲಿ ಅಭ್ಯಾಸ ನಡೆಸುತ್ತಿರುವ ಲಕ್ಷಯ್ ತನ್ನಿಂದ ಸಾಲ ಪಡೆದಿದ್ದಾನೆ ಮತ್ತು ಹಣ ಕೇಳಿದಾಗ ಅವನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ವಿಕಾಸ್ ತಿಳಿಸಿದ್ದಾನೆ. ನಂತರ ಅವರು ಲಕ್ಷಯ್ನನ್ನು ಕೊಲೆ ಮಾಡಲು ಯೋಜಿಸಿದ್ದರು ಹಾಗಾಗಿ ಮದುವೆ ಕಾರ್ಯಕ್ರಮಕ್ಕೆ ತೆರಳಿ ವಾಪಸು ಬರುವ ವೇಳೆ ದಾರಿ ಮಧ್ಯೆ ಕಾರು ನಿಲ್ಲಿಸಿ ಹಣಕಾಸಿನ ವಿಚಾರ ತೆಗೆದಿದ್ದಾರೆ ಈ ವೇಳೆ ವಿಕಾಸ್ ಹಾಗು ಅಭಿಷೇಕ್ ಸೇರಿಕೊಂಡು ಲಕ್ಷ್ಯ ನನ್ನ ಹತ್ಯೆಗೈದು ಅಲ್ಲೇ ಇದ್ದ ಕಾಲುವೆಗೆ ಎಸೆದು ಯಾರಿಗೂ ಗೊತ್ತಾಗದ ರೀತಿಯಲ್ಲಿ ವರ್ತಿಸಿದ್ದಾರೆ.
ಘಟನೆಗೆ ಸಂಬಂಧಿಸಿ ಪ್ರಮುಖ ಆರೋಪಿಯಾದ ವಿಕಾಸ್ ನನ್ನ ಪೊಲೀಸರು ಬಂಧಿಸಿದ್ದು ಅಭಿಷೇಕ್ ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಅಭಿಷೇಕ್ ಬಂಧನಕ್ಕೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ: Road Mishap: ಶಾಲಾ ಬಸ್ – ಟ್ರಾಕ್ಟರ್ ನಡುವೆ ಭೀಕರ ಅಪಘಾತ… ನಾಲ್ವರು ಮಕ್ಕಳು ದುರ್ಮರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ