ನಟಿ ರಿಯಾ ಚಕ್ರವರ್ತಿ ವಿರುದ್ಧ ದೂರು ದಾಖಲಿಸಿದ ಸುಶಾಂತ್ ಸಿಂಗ್ ತಂದೆ


Team Udayavani, Jul 28, 2020, 7:34 PM IST

ನಟಿ ರಿಯಾ ಚಕ್ರವರ್ತಿ ವಿರುದ್ಧ ದೂರು ದಾಖಲಿಸಿದ ಸುಶಾಂತ್ ಸಿಂಗ್ ತಂದೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಪಟ್ನಾ: ನಟಿ ರಿಯಾ ಚಕ್ರವರ್ತಿ ತನ್ನ ಮಗನ ಕೈಯಿಂದ ಸಿಕ್ಕಾಪಟ್ಟೆ ಹಣ ಪಡೆದುಕೊಂಡಿದ್ದಾಳೆ ಮತ್ತು ಆತ ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರಚೋದನೆ ನೀಡಿದ್ದಾಳೆ ಎಂದು ಆರೋಪಿಸಿ ನಟ ಸುಶಾಂತ್ ಸಿಂಗ್ ಅವರ ತಂದೆ ಇಂದು ದೂರು ದಾಖಲಿಸಿದ್ದಾರೆ.

ಈ ಕುರಿತಾಗಿ ಸುಶಾಂತ್ ಅವರ ತಂದೆ ಕೆ.ಕೆ. ಸಿಂಗ್ ಅವರು ಪಟ್ನಾದ ರಾಜೀವ್ ನಗರ ಪೊಲೀಸ್ ಠಾಣೆಯಲ್ಲಿ ದೂರೊಂದನ್ನು ದಾಖಲಿಸಿದ್ದಾರೆ.

ಜೂನ್ 14 ರಂದು ಮುಂಬಯಿಯ ತನ್ನ ಫ್ಲ್ಯಾಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ನಟ ಸುಶಾಂತ್ ಸಿಂಗ್ ಅವರು ಕೆಲವು ಸಮಯ ನಟಿ ರಿಯಾ ಚಕ್ರವರ್ತಿಯೊಂದಿಗೆ ಡೇಟಿಂಗ್ ನಡೆಸಿದ್ದರು.

ದೂರು ದಾಖಲಿಸಿಕೊಂಡಿರುವ ಪಟ್ನಾ ಪೊಲೀಸರು ಈ ವಿಷಯಕ್ಕೆ ಸಂಬಂಧಿಸಿದಂತೆ ಸುಶಾಂತ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬಯಿ ಪೊಲೀಸ್ ತಂಡದ ಡಿಸಿಪಿಯವರನ್ನು ಭೇಟಿ ಮಾಡಿದ್ದಾರೆ.

ಜೂನ್ ತಿಂಗಳಿನಲ್ಲಿ ಮುಂಬಯಿ ತನಿಖಾ ತಂಡದ ಪೊಲೀಸ್ ಅಧಿಕಾರಿಗಳು ಸುಶಾಂತ್ ಅವರ ತಂದೆಯನ್ನು ಪ್ರಶ್ನಿಸಿ ಅವರ ಹೇಳಿಕೆಯನ್ನು ಪಡೆದುಕೊಂಡಿದ್ದರು. ಆದರೆ ಈ ಸಂದರ್ಭದಲ್ಲಿ ಕೆ.ಕೆ. ಸಿಂಗ್ ಅವರು ಅಲ್ಲಿ ಯಾವುದೇ ದೂರು ದಾಖಲಿಸಿರಲಿಲ್ಲ.

ಮಾತ್ರವಲ್ಲದೇ ಈ ವಿಚಾರದಲ್ಲಿ ನನಗೆ ಯಾರ ಮೇಲೂ ಆರೋಪ ಮಾಡಲು ಏನೂ ಇಲ್ಲ ಎಂದು ಹೇಳಿದ್ದರು. ಆದರೆ ಇದೀಗ ಸುಶಾಂತ್ ಅವರ ತಂದೆ ಪಟ್ನಾದಲ್ಲಿ ತನ್ನ ಮಗನ ಮಾಜೀ ಗೆಳತಿಯ ವಿರುದ್ಧ ದೂರು ದಾಖಲಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ನಟ ಸುಶಾಂತ್ ಸಿಂಗ್ ಅವರ ಆತ್ಮಹತ್ಯೆ ಪ್ರಕರಣದ ವಿಚಾರಣೆಯನ್ನು ಬಾಂದ್ರಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಟಿ ರಿಯಾ ಅವರನ್ನು ಪೊಲೀಸರು ಈ ಹಿಂದೆ ವಿಚಾರಣೆ ನಡೆಸಿದ್ದರು. ಆ ಸಂದರ್ಭದಲ್ಲಿ ರಿಯಾ ಅವರು, ‘ಸುಶಾಂತ್ ಯಶ್ ರಾಜ್ ಪಿಲಂಸ್ ಜೊತೆಗಿನ ಒಪ್ಪಂದವನ್ನು ರದ್ದುಮಾಡಿಕೊಂಡಿದ್ದರು ಮತ್ತು ತನಗೂ ಹಾಗೇ ಮಾಡುವಂತೆ ಹೇಳಿದ್ದರು’ ಎಂಬ ಹೇಳಿಕೆಯನ್ನು ನೀಡಿದ್ದರು.

‘ಶುದ್ದ್ ದೇಸೀ ರೊಮ್ಯಾನ್ಸ್’, ‘ಡಿಟೆಕ್ಟಿವ್ ಭ್ಯೋಮ್ ಕೇಶ್ ಭಕ್ಷಿ’ ಮತ್ತು ಶೇಖರ್ ಕಪೂರ್ ಅವರ ‘ಪಾನೀ’ ಸಹಿತ ಒಟ್ಟು ಮೂರು ಚಿತ್ರಗಳಲ್ಲಿ ನಟಿಸಲು ಸುಶಾಂತ್ ಸಿಂಗ್ ಅವರು ಯಶ್ ರಾಜ್ ಫಿಲಂಸ್ ಜೊತೆ ಒಪ್ಪಂದ ಮಾಡಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.