‘ಇಂತಹ ಮೃಗಕ್ಕೆ ಇತಿಹಾಸ ಕ್ಯಾಕರಿಸಿ ಉಗುಳಲಿದೆ!’: ಅನುರಾಗ್ ಕಶ್ಯಪ್ ಸಿಟ್ಟು ಯಾರ ಮೇಲೆ?


Team Udayavani, Jan 27, 2020, 5:06 PM IST

Anurag-Kashyap-Amith-Sha-730

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಸಂಸತ್ತಿನಲ್ಲಿ ಅಂಗೀಕಾರಗೊಂಡು ಜಾರಿಗೆ ಬಂದ ನಂತರ ದೇಶದಲ್ಲಿ ಎರಡು ವರ್ಗ ಸೃಷ್ಟಿಯಾಗಿದೆ. ಒಂದು ಸಿಎಎಯನ್ನು ಬೆಂಬಲಿಸುವ ವರ್ಗ ಇನ್ನೊಂದು ಇದನ್ನು ವಿರೋಧಿಸುವ ವರ್ಗ. ಎರಡೂ ಕಡೆಗಳಲ್ಲಿ ಚಿಂತಕರು, ಚಿತ್ರ ನಟರು, ಲೇಖಕರು, ಶಿಕ್ಷಣ ತಜ್ಞರು… ಹೀಗೆ ಸಮಾಜದ ನಾನಾ ರಂಗಗಳಲ್ಲಿ ಹೆಸರು ಮಾಡಿರುವರಿದ್ದಾರೆ.

ಹಾಗೆಯೇ ಸಿಎಎ ವಿರೋಧಿ ಗುಂಪಿನಲ್ಲಿ ಕ್ರಿಯಾಶೀಲವಾಗಿ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿರುವವರಲ್ಲಿ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಅವರೂ ಸಹ ಒಬ್ಬರು. ಸಿಎಎ ವಿಚಾರದಲ್ಲಿ ಕಶ್ಯಪ್ ಅವರು ಈಗಾಗಲೇ ಕೇಂದ್ರ ಸರಕಾರವನ್ನು ಹಲವು ವೇದಿಕೆಗಳಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಆದರೆ ಅನುರಾಗ್ ಕಶ್ಯಪ್ ಅವರು ಈ ಸಲ ಗರಂ ಆಗಿರುವುದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೇಲೆ. ಆದಿತ್ಯವಾರ ದೆಹಲಿಯಲ್ಲಿ ನಡೆದಿದ್ದ ಶಾ ಅವರ ಚುನಾವಣಾ ಪ್ರಚಾರದ ಸಮಾವೇಶದಲ್ಲಿ ಸಿಎಎ ವಿರೋಧಿ ಪ್ರತಿಭಟನಾಕಾರನೊಬ್ಬರ ಮೇಲೆ ಅಮಿತ್ ಶಾ ಹಾಗೂ ಬಿಜೆಪಿ ಬೆಂಬಲಿಗರು ದರ್ಪ ಪ್ರದರ್ಶಿಸಿದ್ದಾರೆ ಎಂಬ ವರದಿಗಳನ್ನು ಉಲ್ಲೇಖಿಸಿ ಅನುರಾಗ್ ಅವರು ಅಮಿತ್ ಶಾ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಕಶ್ಯಪ್ ಅವರು, ‘ ನಮ್ಮ ಗೃಹ ಸಚಿವರೊಬ್ಬ ಹೇಡಿ. ಅವರು ಪೊಲೀಸರನ್ನು ನಿಯಂತ್ರಿಸುತ್ತಾರೆ, ಗೂಂಡಾಗಳನ್ನು ತನ್ನ ಅಂಕೆಯಲ್ಲಿರಿಸಿಕೊಂಡಿದ್ದಾರೆ. ತನ್ನ ರಕ್ಷಣೆಗೆ ಭದ್ರತಾ ಪಡೆಗಳನ್ನು ಸುತ್ತಲೂ ಇರಿಸಿಕೊಂಡು ನಿಶ್ಯಸ್ತ್ರ ಪ್ರತಿಭಟನಾಕಾರರ ಮೇಲೆ ದಾಳಿ ಮಾಡಿಸುತ್ತಾರೆ. ಅಮಿತ್ ಶಾ ಅವರ ಈ ವರ್ತನೆ ತುಂಬಾ ಕೀಳು ಮಟ್ಟದ್ದಾಗಿದೆ. ಇಂತಹ ಮೃಗಗಳ ಮೇಲೆ ಇತಿಹಾಸ ಕ್ಯಾಕರಿಸಿ ಉಗುಳಲಿದೆ’ ಎಂದು ಕಟು ಶಬ್ದಗಳಿಂದ ಟ್ವೀಟ್ ಮಾಡಿದ್ದಾರೆ.


ದೆಹಲಿಯಲ್ಲಿ ಆಯೋಜಿಸಲಾಗಿದ್ದ ಅಮಿತ್ ಶಾ ಚುನಾವಣಾ ಪ್ರಚಾರ ಸಮಾವೇಶದ ಸಂದರ್ಭದಲ್ಲಿ ಅಲ್ಲಿ ಸೇರಿದ್ದ ಪ್ರತಿಭಟನಾಕಾರರ ಗುಂಪೊಂದು ಸಿಎಎ ವಿರೋಧಿ ಘೋಷಣೆಗಳನ್ನು ಕೂಗಲಾರಂಭಿಸಿದರು. ಈ ಸಂದರ್ಭದಲ್ಲಿ ಒಬ್ಬ ಪ್ರತಿಭಟನಾಕಾರನನ್ನು ಹಿಡಿದ ಬಿಜೆಪಿ ಬೆಂಬಲಿಗರು ಆತನ್ನು ಥಳಿಸಲಾರಂಭಿಸಿದರು. ಬಳಿಕ ಅಮಿತ್ ಶಾ ಸೂಚನೆಯ ಮೇರೆಗೆ ಭದ್ರತಾ ಪಡೆಯವರು ಯುವಕನ್ನು ಗುಂಪಿನಿಂದ ಬಿಡಿಸಿ ಸುರಕ್ಷಿತವಾಗಿ ಕಳುಹಿಸಿಕೊಟ್ಟರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.