ಪರಂ ಅರ್ಜಿ ವಿಚಾರಣೆ: ಗೃಹ ಸಚಿವ ದೇಶಮುಖ್ ವಿರುದ್ಧ ಸಿಬಿಐ ತನಿಖೆ ನಡೆಸಲಿ ಬಾಂಬೆ ಹೈಕೋರ್ಟ್
Team Udayavani, Apr 5, 2021, 12:05 PM IST
ನವದೆಹಲಿ:ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ 15 ದಿನದೊಳಗೆ ಸಿಬಿಐ ಪ್ರಾಥಮಿಕ ತನಿಖೆಯನ್ನು ಆರಂಭಿಸಬೇಕು ಎಂದು ಬಾಂಬೆ ಹೈಕೋರ್ಟ್ ಸೋಮವಾರ(ಏಪ್ರಿಲ್ 05) ನಿರ್ದೇಶನ ನೀಡಿದೆ.
ಇದನ್ನೂ ಓದಿ:ಸರ್ಕಾರದ ಆಡಳಿತದಲ್ಲಿ ವಿಜಯೇಂದ್ರ ಹಸ್ತಕ್ಷೇಪ ಇಲ್ಲ: ಎಸ್.ಟಿ ಸೋಮಶೇಖರ್ ಸ್ಪಷ್ಟನೆ
ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಮುಂಬಯಿನ ಮಾಜಿ ಪೊಲೀಸ್ ವರಿಷ್ಠಾಧಿಕಾರಿ ಪರಂಬೀರ್ ಸಿಂಗ್, ಹಣ ವಸೂಲಿ ಮತ್ತು ಕಾನೂನು ಬಾಹಿರವಾಗಿ ವರ್ಗಾವಣೆ ದಂಧೆಯಲ್ಲಿ ಶಾಮೀಲಾಗಿರುವುದಾಗಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ದೇಶಮುಖ್ ವಿರುದ್ಧ ತನಿಖೆ ನಡೆಸಲು ಆದೇಶ ನೀಡಬೇಕೆಂದು ಕೋರಿ ಪರಂಬೀರ್ ಸಿಂಗ್ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು.
ಮಹಾರಾಷ್ಟ್ರ ಗೃಹ ಸಚಿವ ದೇಶ್ ಮುಖ್ ವಿರುದ್ಧ ಯಾಕೆ ಎಫ್ ಐಆರ್ ದಾಖಲಿಸಿಲ್ಲ ಎಂದು ಬಾಂಬೆ ಹೈಕೋರ್ಟ್ ಹಿಂದಿನ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್ ಪ್ರಶ್ನಿಸಿತ್ತು. ನೀವೊಬ್ಬ ಪೊಲೀಸ್ ಕಮಿಷನರ್, ಯಾಕೆ ನೀವು ಕಾನೂನು ಮೀರಿ ನಡೆದುಕೊಳ್ಳುತ್ತೀರಿ? ಪೊಲೀಸ್ ಅಧಿಕಾರಿಗಳು, ಸಚಿವರು, ರಾಜಕಾರಣಿಗಳು ಕಾನೂನಿಗಿಂತ ಮಿಗಿಲಾದವರೇ ಎಂದು ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿ.ಜೆ. ದತ್ತ ಪ್ರಶ್ನಿಸಿದ್ದರು.