ಭೀಮಾ ಕೋರೆಗಾಂವ್ ಪ್ರಕರಣ: ವರವರ ರಾವ್ ಜಾಮೀನು ಅವಧಿ ವಿಸ್ತರಣೆ
ಫೆಬ್ರವರಿ 5 ರ ವರೆಗೆ ಜಾಮೀನು ವಿಸ್ತರಣೆ
Team Udayavani, Jan 7, 2022, 1:58 PM IST
ಮುಂಬಯಿ: ಭೀಮಾ ಕೋರೆಗಾಂವ್ ಪ್ರಕರಣದ ಪ್ರಮುಖ ಆರೋಪಿ ತೆಲುಗು ಕವಿ ವರವರರಾವ್ ಅವರ ಜಾಮೀನು ಅವಧಿಯನ್ನು ಮುಂಬಯಿ ಹೈಕೋರ್ಟ್ ಶುಕ್ರವಾರ ವಿಸ್ತರಿಸಿದೆ.
2018 ರಲ್ಲಿ ನಡೆದ ಭೀಮಾ ಕೋರೆಗಾವ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ವರವರರಾವ್ ಅವರನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಂಧಿಸಿತ್ತು. ಸುದೀರ್ಘ ಅವಧಿಗೆ ವಿಚಾರಣಾಧೀನ ಕೈದಿಯಾಗಿದ್ದ ರಾವ್ ಕಳೆದ ಕೋವಿಡ್ ಸಂದರ್ಭದಲ್ಲಿ ವೈದಕೀಯ ಬೇಲ್ ಮೇಲೆ ಜೈಲಿನಿಂದ ಹೊರಕ್ಕೆ ಬಂದಿದ್ದರು.
ಜಾಮೀನು ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ವಿಸ್ತರಣೆಕೋರಿ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಆಲಿಸಿದ ಹೈಕೋರ್ಟ್ ಫೆಬ್ರವರಿ ೫ರ ವರೆಗೆ ಜಾಮೀನು ವಿಸ್ತರಣೆ ಮಾಡಿದೆ. ಇದರ ಜತೆಗೆ ಕೋವಿಡ್ ಮೂರನೇ ಅಲೆಯ ಹೊಸ್ತಿಲಲ್ಲಿ ಅನಾರೋಗ್ಯ ಪೀಡಿತ ರಾವ್ ಅವರನ್ನು ಮತ್ತೆ ಜೈಲಿಗೆ ಕಳುಹಿಸಬೇಕೆ ಎಂದು ನ್ಯಾಯಾಲಯ ಪೊಲೀಸರನ್ನು ಪ್ರಶ್ನಿಸಿದೆ.
ವಿಚಾರಣೆ ಸಂದರ್ಭದಲ್ಲಿ ಹಾಜರಿದ್ದ ಪುಣೆ ಪೊಲೀಸರು ಈ ವಿಚಾರ ಸಂಬAಧ ನಾವು ಹೆಚ್ಚುವರಿ ಸಾಲಿಸಿಟ್ ಜನರಲ್ ಅವರಿಗೆ ವರದಿ ನೀಡಬೇಕಿದೆ. ರಾವ್ ಕೇವಲ 6 ತಿಂಗಳು ಅವಧಿಗೆ ಮಾತ್ರ ಜಾಮೀನು ಕೋರಿದ್ದು ಈಗ ವಿಸ್ತರಣೆ ಬಯಸುತ್ತಿದ್ದಾರೆ ಎಂದು ಆಕ್ಷೇಪಿಸಿದರು.
ಕೋವಿಡ್ ಎರಡು ಅಲೆಗಿಂತ ಮೂರನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಮುಂಚೂಣಿ ನೌಕರರು ಸೋಂಕಿಗೆ ಒಳಗಾಗುತ್ತಿದ್ದಾರೆ. ೫೦ರಿಂದ ೬೦ ದಿನ ಇದೇ ಪರಿಸ್ಥಿತಿ ಇರಬಹುದು ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ ವಿಚಾರಣೆಯನ್ನು ಫೆ.೫ಕ್ಕೆ ಮುಂದೂಡಿದ್ದು, ಅಲ್ಲಿಯವರೆಗೆ ಜಾಮೀನು ವಿಸ್ತರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು