ಸಾಲ ಮಂಜೂರಾತಿಯಲ್ಲಿ ಅಕ್ರಮ ಪ್ರಕರಣ: ಚಂದಾ ಕೊಚ್ಚರ್ ದಂಪತಿ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಆದೇಶ
Team Udayavani, Jan 9, 2023, 12:06 PM IST
ಮುಂಬಯಿ: ವೀಡಿಯೋಕಾನ್ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ, ವಂಚನೆ ಆರೋಪದಡಿ ಬಂಧಿತರಾಗಿದ್ದ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಅವರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಸೋಮವಾರ (ಜ.9 ರಂದು) ಆದೇಶಿಸಿದೆ.
ಸಿಬಿಐ ಈ ಪ್ರಕರಣದಲ್ಲಿ ನಮ್ಮನ್ನು ಅಕ್ರಮವಾಗಿ ಬಂಧಿಸಿದೆ ಎಂದು ಆರೋಪಿಸಿ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಅವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದೇಶವನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ಕಾಯ್ದಿರಿಸಿತ್ತು.
ಸೋಮವಾರ ಬಾಂಬೆ ಹೈಕೋರ್ಟ್ “ಕಾನೂನಿಗೆ ಅನುಗುಣವಾಗಿ ಬಂಧಿಸಲಾಗಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು, 1 ಲಕ್ಷ ರೂಪಾಯಿ ಬಾಂಡ್ ಮೇಲೆ ದಂಪತಿಯನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲು ಆದೇಶ ನೀಡಿದೆ.
ಡಿ.23 ರಂದು ಐಸಿಐಸಿಐ ಬ್ಯಾಂಕ್ – ವಿಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್ನ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಿತ್ತು.
ಘಟನೆ ಹಿನ್ನೆಲೆ:
ಐಸಿಐಸಿಐ ಬ್ಯಾಂಕ್ನಿಂದ 3,250 ಕೋಟಿ ರೂ. ಸಾಲ ಪಡೆದ ಕೆಲವು ತಿಂಗಳಲ್ಲೇ ವಿಡಿಯೊಕಾನ್ ಗ್ರೂಪ್ನ ವೇಣುಗೋಪಾಲ್, ನ್ಯೂಪವರ್ ರಿನ್ಯೂವಬಲ್ಸ್ ಕಂಪೆನಿಯಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿದ್ದರು. ಐಸಿಐಸಿಐ ಬ್ಯಾಂಕ್ಗೆ ವಂಚನೆ ಮಾಡಲೆಂದೇ ಇತರೆ ಆರೋಪಿಗಳ ಜತೆ ಸೇರಿಕೊಂಡು ಚಂದಾ ಕೊಚ್ಚರ್ ಖಾಸಗಿ ಕಂಪೆನಿಗೆ ಸಾಲ ಮಂಜೂರು ಮಾಡಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ