ಪಶ್ಚಿಮಬಂಗಾಳ; ಬಿಜೆಪಿ ಸಂಸದ ಸಿಂಗ್ ನಿವಾಸದ ಸಮೀಪ ಬಾಂಬ್ ದಾಳಿ, ಆಯೋಗಕ್ಕೆ ದೂರು
ಜಿಲ್ಲಾಡಳಿತ ಜನರ ರಕ್ಷಣೆ ಬಗ್ಗೆ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ಸಿಂಗ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
Team Udayavani, Mar 18, 2021, 11:15 AM IST
ಕೋಲ್ಕತಾ: ಭಾರತೀಯ ಜನತಾ ಪಕ್ಷದ ಸಂಸದ ಅರ್ಜುನ್ ಸಿಂಗ್ ನಿವಾಸ, ಕಚೇರಿ ಸಮೀಪ 12ಕ್ಕೂ ಅಧಿಕ ಬಾಂಬ್ ಎಸೆದು ದಾಳಿ ನಡೆಸಿರುವ ಘಟನೆ ಪಶ್ಚಿಮಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದ್ದು, ಇದು ತೃಣಮೂಲ ಕಾಂಗ್ರೆಸ್ ಗೂಂಡಾಗಳ ಕೃತ್ಯ ಎಂದು ಬಿಜೆಪಿ ಆರೋಪಿಸಿದೆ.
ಉತ್ತರ ಪರಗಣದ ಭಾಟ್ಪಾರಾದ ಜಗದ್ದಾಲ್ ಪ್ರದೇಶದಲ್ಲಿ ಕೆಲವು ಮಂದಿ ಏಕಾಏಕಿ ಸುಮಾರು 15 ಕಡೆಗಳಲ್ಲಿ ಬಾಂಬ್ ಎಸೆದು ದಾಳಿ ನಡೆಸಿರುವುದಾಗಿ ಅರ್ಜುನ್ ಸಿಂಗ್ ದೂರಿದ್ದಾರೆ. ನಾವು ಈಗಾಗಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೆಲವು ಕ್ರಿಮಿನಲ್ಸ್ ಗಳು ಶಸ್ತ್ರಾಸ್ತ್ರ ಹಿಡಿದು ತಿರುಗಾಡುತ್ತಿದ್ದಾರೆ. ಆದರೆ ಪೊಲೀಸರು ಮೌನಕ್ಕೆ ಶರಣಾಗಿರುವುದಾಗಿ ಸಿಂಗ್ ಎಎನ್ ಐ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ಪೊಲೀಸರು ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳನ್ನು ಬಾಂಬ್ ಎಸೆಯುವ ಮುನ್ನ ಧ್ವಂಸಗೊಳಿಸಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಒಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ನಿಷ್ಕ್ರಿಯರಾಗಿದ್ದು, ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ದೂರು ನೀಡಿರುವುದಾಗಿ ಸಿಂಗ್ ಹೇಳಿದರು.
“ನನ್ನ ಮಜ್ದೂರ್ ಭವನ್ ನಿವಾಸ/ಕಚೇರಿ ಸಮೀಪ 12ಕ್ಕೂ ಅಧಿಕ ಬಾಂಬ್ ಗಳನ್ನು ಎಸೆದು ದಾಳಿ ನಡೆಸಲಾಗಿದ್ದು, ಈ ದಾಳಿ ನಡೆಸಿದವರು ತೃಣಮೂಲ ಕಾಂಗ್ರೆಸ್ ಗೂಂಡಾಗಳು. ಇದರಿಂದ ಸ್ಥಳೀಯ ಜನರು ಭಯಕ್ಕೊಳಗಾಗಿದ್ದಾರೆ. ಜಿಲ್ಲಾಡಳಿತ ಜನರ ರಕ್ಷಣೆ ಬಗ್ಗೆ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ಸಿಂಗ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್