ತನಗೆ ಹಾವು ಕಚ್ಚಿತೆಂದು ತಿರುಗಿ ಹಾವನ್ನೇ ಕಚ್ಚಿದ ಬಾಲಕ… ಮುಂದೆ ಆಗಿದ್ದು ಮಾತ್ರ ವಿಸ್ಮಯ
Team Udayavani, Oct 31, 2022, 11:34 AM IST
ಛತ್ತೀಸ್ಗಢ : ಜಶ್ಪುರದಲ್ಲಿ ಹಾವೊಂದು ಕಚ್ಚಿತೆಂದು ಬಾಲಕನೋರ್ವ ಹಾವಿಗೇ ತಿರುಗಿ ಕಚ್ಚಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಇಲ್ಲಿ 12 ವರ್ಷದ ಬಾಲಕನಿಗೆ ನಾಗರ ಹಾವೊಂದು ಕಚ್ಚಿದೆ. ಇದರಿಂದ ಕೋಪಗೊಂಡ ಬಾಲಕ ಕಚ್ಚಿದ ಹಾವಿಗೆ ತಿರುಗಿ ಕಚ್ಚಿದ್ದಾನೆ. ವಿಷಯ ತಿಳಿದ ಮನೆಯವರು ಬಾಲಕನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅದೃಷ್ಟವಶಾತ್ ಬಾಲಕ ಆರೋಗ್ಯವಂತನಾಗಿದ್ದಾನೆ.
ಆಗಿದ್ದೇನು ? : ಗಾರ್ಡನ್ ಡೆವಲಪ್ ಮೆಂಟ್ ಬ್ಲಾಕ್ ನ ಪಂಡರಪತ್ ನಲ್ಲಿ ಘಟನೆ ನಡೆದಿದ್ದು ಇಲ್ಲಿ ದೀಪಕ್ ಅನ್ನೋ ಯುವಕ ತನ್ನ ಸಹೋದರಿಯ ಮನೆಗೆ ಹೋಗಿದ್ದ. ಅಲ್ಲಿ ತನ್ನ ಸಹೋದರಿ ನೀರು ತರಲು ಹೋದಾಗ ದೀಪಕ್ ಮನೆಯ ಹೊರಗೆ ಆಟವಾಡುತ್ತಿದ್ದ. ಈ ವೇಳೆ ಅಲ್ಲೇ ಪೊದೆಯೊಂದರಲ್ಲಿ ಇದ್ದ ಹಾವೊಂದು ದೀಪಕ್ ಕೈಗೆ ಕಚ್ಚಿದೆ. ಇದರಿಂದ ಕೋಪಗೊಂಡ ದೀಪಕ್ ಹಾವನ್ನು ಕೈಯಿಂದ ಹಿಡಿದು ಹಲ್ಲಿನಿಂದ ಕಚ್ಚಿ ಬಿಸಾಡಿದ್ದಾನೆ.
ಬಳಿಕ ದೀಪಕ್ ಮನೆಗೆ ಬಂದು ತಂಗಿಗೆ ವಿಷಯ ತಿಳಿಸಿದ್ದಾನೆ. ಇದರಿಂದ ಭಯಗೊಂಡ ಸಹೋದರಿ ಕೂಡಲೇ ಬಾಲಕನನ್ನು ಕರೆದುಕೊಂಡು ಆಸ್ಪತ್ರೆಗೆ ಓಡಿ ಬಂದಿದ್ದಾಳೆ. ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಿದ ವೈದ್ಯರು ಏನೂ ತೊಂದರೆ ಇಲ್ಲ ಬಾಲಕ ಆರೋಗ್ಯವಾಗಿದ್ದಾನೆ ಎಂದು ಹೇಳಿದ್ದಾರೆ. ಬಳಿಕ ನಿಟ್ಟುಸಿರು ಬಿಟ್ಟು ಮನೆಗೆ ಬಂದಾಗ ಗೊತ್ತಾಗಿದ್ದು ಬಾಲಕ ಕಚ್ಚಿ ಬಿಸಾಕಿದ ಹಾವು ಸಾವನ್ನಪ್ಪಿದೆ ಎಂದು.
ಇದನ್ನೂ ಓದಿ : ಬಾಗಿಲು ಹಾಕಿದ್ದ ಮನೆಯೊಳಗೆ ಒಂದೇ ಕುಟುಂಬದ ನಾಲ್ವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ
ಮನುಷ್ಯರಿಗೆ ವಿಷದ ಹಾವು ಕಚ್ಚಿದರೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬ ಮೂಢನಂಬಿಕೆ ಜಶ್ಪುರ್ ಜಿಲ್ಲೆಯ ಜನರಲ್ಲಿದೆ ಅದೇ ಮೂಢನಂಬಿಕೆಯಿಂದ ಬಾಲಕ ಹಾವಿಗೆ ಕಚ್ಚಿದ್ದಾನೆ. ಆದರೆ ಬಾಲಕನ ಅದೃಷ್ಟ ಚೆನ್ನಾಗಿತ್ತು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಸೂಕ್ತ ಚಿಕಿತ್ಸೆ ನೀಡಿದ್ದರಿಂದ ಬಾಲಕ ಬದುಕುಳಿದ ಆದರೆ ದುರಾದೃಷ್ಟವಶಾತ್ ಹಾವು ಮಾತ್ರ ಬಾಲಕ ಕಚ್ಚಿದ ಏಟಿಗೆ ಸಾವನ್ನಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ