ನಾಟಕದಲ್ಲಿ ಸ್ನೇಹಿತನ ಕುತ್ತಿಗೆಯನ್ನೇ ಕೊಯ್ದ ಬಾಲಕ!


Team Udayavani, Nov 20, 2017, 11:46 AM IST

image.jpg

ಮುಂಬಯಿ: ಅತ್ಯಂತ ವಿಲಕ್ಷಣ ಘಟನೆಯೊಂದರಲ್ಲಿ  ನಗರದ  ಶಾಲೆಯೊಂದರಲ್ಲಿ  ನಡೆಯುತ್ತಿದ್ದ  ವಾರ್ಷಿಕ  ನಾಟಕ  ಸ್ಪರ್ಧೆಯ  ವೇಳೆ ದಕ್ಷಿಣ-ಮಧ್ಯ ಮುಂಬಯಿ ಶಾಲೆಯ 10ನೇ ತರಗತಿ ವಿದ್ಯಾರ್ಥಿಯೋರ್ವ ತನ್ನ ಸ್ನೇಹಿತನ ಕುತ್ತಿಗೆಯನ್ನೇ ಚಾಕುವಿನಿಂದ ಕೊಯ್ದಿದ್ದು ಸದ್ಯ ಬಾಲಕನ  ಕುತ್ತಿಗೆಗೆ 6 ಹೊಲಿಗೆಗಳನ್ನು ಹಾಕಲಾಗಿದ್ದು  ಅದೃಷ್ಟವಶಾತ್‌  ಆತ  ಪ್ರಾಣಾಪಾಯದಿಂದ ಪಾರಾಗಿದ್ದಾನೆ. 

ನಾಟಕದಲ್ಲಿ ಬಾಲಕ ತನ್ನ ಸ್ನೇಹಿತನನ್ನು  ಹತ್ಯೆಗೈಯ್ಯುವ ದೃಶ್ಯವಿತ್ತು. ನಾಟಕದ  ರಿಹರ್ಸಲ್‌ನ  ಸಂದರ್ಭದಲ್ಲಿ  ಆತ  ಮೊಂಡಾದ  ಚಾಕುವನ್ನು ಬಳಸುತ್ತಿದ್ದರೆ  ಸ್ಪರ್ಧೆಯ  ವೇಳೆ  ಈ ಚಾಕುವನ್ನು  ಎಲ್ಲೋ  ಇರಿಸಿದ್ದರಿಂದಾಗಿ  ಬ್ರೆಡ್‌  ಕೊಯ್ಯಲು ಬಳಸುವ  ಚಾಕನ್ನೇ  ಕೊನೇಕ್ಷಣದಲ್ಲಿ  ಆತ ಬಳಸಿದ್ದನು. ಆದರೆ  ಈ ಬಗ್ಗೆ  ಆತನಿಗೆ  ಮಾಹಿತಿ ಇರಲಿಲ್ಲ.  ರಿಹರ್ಸಲ್‌ನಲ್ಲಿ  ಅಭ್ಯಸಿಸಿದ  ಮಾದರಿಯಲ್ಲಿಯೇ  ನಾಟಕದ  ವೇಳೆ ಚಾಕುವಿನಿಂದ  ಬಲವಾಗಿ  ಸ್ನೇಹಿತನ ಕುತ್ತಿಗೆಗೆ  ಆತ ಕೊಯ್ದಿದ್ದನು. 

ಗಾಯಾಳು ಬಾಲಕ 9ನೇ ತರಗತಿಯ ವಿದ್ಯಾರ್ಥಿಯಾಗಿದ್ದು  ನಾಟಕದಲ್ಲಿ ಈತ ಸಾವಿಗೀಡಾಗುವುದರಿಂದ  ಸುಮಾರು  ಏಳು ನಿಮಿಷಗಳ ಕಾಲ  ಆತ ವೇದಿಕೆಯಲ್ಲಿ  ಸಾವನ್ನಪ್ಪಿದ  ಸ್ಥಿತಿಯಲ್ಲಿ  ಬಿದ್ದಿದ್ದನು. ಆತ ಸಾವನ್ನಪ್ಪಿರುವುದನ್ನು  ತೋರಿಸಲು  ಆತನ ಮೇಲೆ  ಕೆಂಪು ನೀರನ್ನು ಎರಚಲಾಗಿತ್ತು. ಇದರಿಂದ ಅಲ್ಲಿದ್ದ ಇತರರಿಗೂ ಈತನಿಗೆ  ಗಾಯವಾಗಿರುವುದು ಗಮನಕ್ಕೆ ಬಂದಿರಲಿಲ್ಲ. ನಾಟಕ ಮುಗಿದ  ಬಳಿಕ  ವೇದಿಕೆಯ ಹಿಂಭಾಗಕ್ಕೆ ಓಡಿದ ಆತ ತನ್ನ  ಕುತ್ತಿಗೆಗೆ ಗಾಯವಾಗಿರುವುದನ್ನು ಸ್ನೇಹಿತರಿಗೆ ತಿಳಿಸಿದನು. ತತ್‌ಕ್ಷಣವೇ ಶಾಲೆಯಲ್ಲಿನ ಅರೆವೈದ್ಯಕೀಯ ಸಿಬಂದಿ  ಗಾಯಾಳು ಬಾಲಕನಿಗೆ ಪ್ರಾಥಮಿಕ ಚಿಕಿತ್ಸೆ  ನೀಡಿದರಾದರೂ ಶಿಕ್ಷಕರು  ತತ್‌ಕ್ಷಣವೇ ಸಮೀಪದ ಆಸ್ಪತ್ರೆಗೆ  ಬಾಲಕನನ್ನು  ದಾಖಲಿಸಿದರು. 

ಆಸ್ಪತ್ರೆಯ ವೈದ್ಯರು  ಬಾಲಕನ ಕುತ್ತಿಗೆಗೆ  ಆರು ಹೊಲಿಗೆಗಳನ್ನು  ಹಾಕಿದ್ದು  ಸದ್ಯ  ಆತ ಚೇತರಿಸಿಕೊಳ್ಳುತ್ತಿದ್ದಾನೆ. ಘಟನೆ ಸಂಬಂಧ ಆಸ್ಪತ್ರೆಯ ಅಧಿಕಾರಿಗಳು  ಪೊಲೀಸರಿಗೆ  ಮಾಹಿತಿ  ನೀಡಿರುವರಾದರೂ  ಬಾಲಕನ ಪೋಷಕರು  ದೂರು  ನೀಡಲು  ಆಸಕ್ತಿಯನ್ನು  ತೋರಿಲ್ಲ. ಅಚ್ಚರಿ ಎಂದರೆ  ಈ ಬಾಲಕನ ತಂಡ ಅಭಿನಯಿಸಿದ  ನಾಟಕಕ್ಕೆ  ದ್ವಿತೀಯ ಬಹುಮಾನ ಲಭಿಸಿದೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.